AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕ ವೆಟ್ರಿಮಾರನ್​ ಹೇಳಿಕೆಯಿಂದ ದಳಪತಿ ವಿಜಯ್​ ಅಭಿಮಾನಿಗಳಿಗೆ ಬೇಸರ

ಸಾಮಾಜಿಕ ಕಳಕಳಿಯ ವಿಷಯವನ್ನು ಇಟ್ಟುಕೊಂಡು ಕಮರ್ಷಿಯಲ್​ ಶೈಲಿಯ ಸಿನಿಮಾ ಮಾಡುವಲ್ಲಿ ವೆಟ್ರಿಮಾರನ್​ ಫೇಮಸ್. ಅವರ ಜೊತೆ ದಳಪತಿ ವಿಜಯ್​ ಕೊನೇ ಸಿನಿಮಾ ಮಾಡಲಿದ್ದಾರೆ ಎಂದು ಎಲ್ಲರೂ ಕಾಯುತ್ತಿದ್ದರು. ಈ ಬಗ್ಗೆ ವೆಟ್ರಿಮಾರನ್​ ಅವರು ಈಗ ಹೇಳಿರುವ ಮಾತು ಕೇಳಿ ದಳಪತಿ ವಿಜಯ್​ ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ನಿರ್ದೇಶಕ ವೆಟ್ರಿಮಾರನ್​ ಹೇಳಿಕೆಯಿಂದ ದಳಪತಿ ವಿಜಯ್​ ಅಭಿಮಾನಿಗಳಿಗೆ ಬೇಸರ
ವೆಟ್ರಿಮಾರನ್​, ದಳಪತಿ ವಿಜಯ್​
ಮದನ್​ ಕುಮಾರ್​
|

Updated on: Apr 24, 2024 | 10:21 PM

Share

ನಟ ದಳಪತಿ ವಿಜಯ್​ (Thalapathy Vijay) ಅವರು ಅಧಿಕೃತವಾಗಿಯೇ ರಾಜಕೀಯಕ್ಕೆ ಎಂಟ್ರಿ ಆಗಿರುವುದು ಗೊತ್ತೇ ಇದೆ. ಹಾಗಾದರೆ ಅವರ ಕೊನೇ ಸಿನಿಮಾ ಯಾವುದು? 69ನೇ (Thalapathy 69) ಸಿನಿಮಾದ ಬಳಿಕ ಅವರು ಬೇರೆ ಯಾವುದೇ ಚಿತ್ರದಲ್ಲಿ ನಟಿಸುವುದಿಲ್ಲ ಎಂದು ಊಹಿಸಲಾಗಿತ್ತು. ದಳಪತಿ ವಿಜಯ್​ ನಟನೆಯ 69ನೇ ಸಿನಿಮಾಗೆ ತಮಿಳಿನ ಖ್ಯಾತ ನಿರ್ದೇಶಕ ವೆಟ್ರಿಮಾರನ್​ (Vetrimaaran) ಅವರು ಆ್ಯಕ್ಷನ್​-ಕಟ್​ ಹೇಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ವಿಚಾರಕ್ಕೆ ಸಂಬಂಧಪಟ್ಟಂತೆ ವೆಟ್ರಿಮಾರನ್​ ಅವರು ನೀಡಿದ ಒಂದು ಹೇಳಿಕೆಯಿಂದ ದಳಪತಿ ವಿಜಯ್​ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ.

ದಳಪತಿ ವಿಜಯ್​ ಮತ್ತು ವೆಟ್ರಿಮಾರನ್​ ಅವರು ಜೊತೆಯಾಗಿ ಸಿನಿಮಾ ಮಾಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳ ಮನದಲ್ಲಿ ಹೈಪ್​ ಹೆಚ್ಚಾಗಿತ್ತು. ತೆಲುಗು ಚಿತ್ರರಂಗದ ದೊಡ್ಡ ನಿರ್ಮಾಪಕರೊಬ್ಬರು ಈ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಎಂದು ಕೂಡ ಗಾಸಿಪ್​ ಹಬ್ಬಿತ್ತು. ಆ ಬಳಿಕ ದಳಪತಿ ವಿಜಯ್​ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಆದರೆ ಅದೆಲ್ಲವೂ ಈಗ ಹುಸಿ ಆಗಿದೆ.

ಇತ್ತೀಚೆಗೆ ನಡೆದ ಒಂದು ಕಾರ್ಯಕ್ರಮದಲ್ಲಿ ದಳಪತಿ ವಿಜಯ್​ ಜೊತೆಗಿನ ಸಿನಿಮಾ ಬಗ್ಗೆ ವೆಟ್ರಿಮಾರನ್​ ಅವರಿಗೆ ಪ್ರಶ್ನೆ ಕೇಳಲಾಗಿದೆ. ಆಗ ಅವರು ಬೇಸರದ ವಿಷಯವನ್ನು ಬಹಿರಂಗಪಡಿಸಿದ್ದಾರೆ. ‘ತುಂಬ ಸಮಯದ ಹಿಂದೆ ನಾನು ಮತ್ತು ದಳಪತಿ ವಿಜಯ್​ ಅವರು ಒಂದು ಕಥೆಯ ಬಗ್ಗೆ ಚರ್ಚೆ ಮಾಡಿದ್ದೆವು. ಆದರೆ ಆ ಸಿನಿಮಾ ನಿರ್ಮಾಣ ಆಗುತ್ತದೆ ಅಂತ ನನಗೆ ಅನಿಸುತ್ತಿಲ್ಲ. ನಾವು ಆ ಸಿನಿಮಾವನ್ನು ಮಾಡುತ್ತಿಲ್ಲ ಎಂದುಕೊಂಡಿದ್ದೇನೆ’ ಎಂದಿದ್ದಾರೆ ವೆಟ್ರಿಮಾರನ್​.

ಇದನ್ನೂ ಓದಿ: ತಾಯಿಗಾಗಿ ಸಾಯಿ ಬಾಬಾ ಮಂದಿರ ಕಟ್ಟಿದ ದಳಪತಿ ವಿಜಯ್

ದಳಪತಿ ವಿಜಯ್​ ಅಭಿನಯದ ಈ ಕೊನೇ ಸಿನಿಮಾಗೆ ವೆಟ್ರಿಮಾರನ್​ ನಿರ್ದೇಶನ ಮಾಡುತ್ತಿಲ್ಲ ಎಂಬುದು ಈಗ ಖಚಿತವಾಗಿದೆ. ಹಾಗಾದರೆ ಆ ಚಾನ್ಸ್​ ಬೇರೆ ಯಾವ ನಿರ್ದೇಶಕನಿಗೆ ಸಿಗಲಿದೆ? ವರದಿಗಳ ಪ್ರಕಾರ ಎಚ್​. ವಿನೋದ್​ ಅವರು ‘ದಳಪತಿ 69’ ಸಿನಿಮಾಗೆ ನಿರ್ದೇಶನ ಮಾಡುವ ಸಾಧ್ಯತೆ ಇದೆ. ಈ ಸಿನಿಮಾಗೆ ದಳಪತಿ ವಿಜಯ್​ ಅವರು ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರೆ. ಈ ಸಿನಿಮಾದ ಶೂಟಿಂಗ್​ ಮುಗಿಸಿದ ಬಳಿಕ 2026ರ ತಮಿಳುನಾಡು ವಿಧಾನಸಭಾ ಚುನಾವಣೆ ಬಗ್ಗೆ ವಿಜಯ್​ ಅವರು ಸಂಪೂರ್ಣ ಗಮನ ಹರಿಸಲಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ