ನಿರ್ದೇಶಕ ವೆಟ್ರಿಮಾರನ್​ ಹೇಳಿಕೆಯಿಂದ ದಳಪತಿ ವಿಜಯ್​ ಅಭಿಮಾನಿಗಳಿಗೆ ಬೇಸರ

ಸಾಮಾಜಿಕ ಕಳಕಳಿಯ ವಿಷಯವನ್ನು ಇಟ್ಟುಕೊಂಡು ಕಮರ್ಷಿಯಲ್​ ಶೈಲಿಯ ಸಿನಿಮಾ ಮಾಡುವಲ್ಲಿ ವೆಟ್ರಿಮಾರನ್​ ಫೇಮಸ್. ಅವರ ಜೊತೆ ದಳಪತಿ ವಿಜಯ್​ ಕೊನೇ ಸಿನಿಮಾ ಮಾಡಲಿದ್ದಾರೆ ಎಂದು ಎಲ್ಲರೂ ಕಾಯುತ್ತಿದ್ದರು. ಈ ಬಗ್ಗೆ ವೆಟ್ರಿಮಾರನ್​ ಅವರು ಈಗ ಹೇಳಿರುವ ಮಾತು ಕೇಳಿ ದಳಪತಿ ವಿಜಯ್​ ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ನಿರ್ದೇಶಕ ವೆಟ್ರಿಮಾರನ್​ ಹೇಳಿಕೆಯಿಂದ ದಳಪತಿ ವಿಜಯ್​ ಅಭಿಮಾನಿಗಳಿಗೆ ಬೇಸರ
ವೆಟ್ರಿಮಾರನ್​, ದಳಪತಿ ವಿಜಯ್​
Follow us
|

Updated on: Apr 24, 2024 | 10:21 PM

ನಟ ದಳಪತಿ ವಿಜಯ್​ (Thalapathy Vijay) ಅವರು ಅಧಿಕೃತವಾಗಿಯೇ ರಾಜಕೀಯಕ್ಕೆ ಎಂಟ್ರಿ ಆಗಿರುವುದು ಗೊತ್ತೇ ಇದೆ. ಹಾಗಾದರೆ ಅವರ ಕೊನೇ ಸಿನಿಮಾ ಯಾವುದು? 69ನೇ (Thalapathy 69) ಸಿನಿಮಾದ ಬಳಿಕ ಅವರು ಬೇರೆ ಯಾವುದೇ ಚಿತ್ರದಲ್ಲಿ ನಟಿಸುವುದಿಲ್ಲ ಎಂದು ಊಹಿಸಲಾಗಿತ್ತು. ದಳಪತಿ ವಿಜಯ್​ ನಟನೆಯ 69ನೇ ಸಿನಿಮಾಗೆ ತಮಿಳಿನ ಖ್ಯಾತ ನಿರ್ದೇಶಕ ವೆಟ್ರಿಮಾರನ್​ (Vetrimaaran) ಅವರು ಆ್ಯಕ್ಷನ್​-ಕಟ್​ ಹೇಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ವಿಚಾರಕ್ಕೆ ಸಂಬಂಧಪಟ್ಟಂತೆ ವೆಟ್ರಿಮಾರನ್​ ಅವರು ನೀಡಿದ ಒಂದು ಹೇಳಿಕೆಯಿಂದ ದಳಪತಿ ವಿಜಯ್​ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ.

ದಳಪತಿ ವಿಜಯ್​ ಮತ್ತು ವೆಟ್ರಿಮಾರನ್​ ಅವರು ಜೊತೆಯಾಗಿ ಸಿನಿಮಾ ಮಾಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳ ಮನದಲ್ಲಿ ಹೈಪ್​ ಹೆಚ್ಚಾಗಿತ್ತು. ತೆಲುಗು ಚಿತ್ರರಂಗದ ದೊಡ್ಡ ನಿರ್ಮಾಪಕರೊಬ್ಬರು ಈ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಎಂದು ಕೂಡ ಗಾಸಿಪ್​ ಹಬ್ಬಿತ್ತು. ಆ ಬಳಿಕ ದಳಪತಿ ವಿಜಯ್​ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಆದರೆ ಅದೆಲ್ಲವೂ ಈಗ ಹುಸಿ ಆಗಿದೆ.

ಇತ್ತೀಚೆಗೆ ನಡೆದ ಒಂದು ಕಾರ್ಯಕ್ರಮದಲ್ಲಿ ದಳಪತಿ ವಿಜಯ್​ ಜೊತೆಗಿನ ಸಿನಿಮಾ ಬಗ್ಗೆ ವೆಟ್ರಿಮಾರನ್​ ಅವರಿಗೆ ಪ್ರಶ್ನೆ ಕೇಳಲಾಗಿದೆ. ಆಗ ಅವರು ಬೇಸರದ ವಿಷಯವನ್ನು ಬಹಿರಂಗಪಡಿಸಿದ್ದಾರೆ. ‘ತುಂಬ ಸಮಯದ ಹಿಂದೆ ನಾನು ಮತ್ತು ದಳಪತಿ ವಿಜಯ್​ ಅವರು ಒಂದು ಕಥೆಯ ಬಗ್ಗೆ ಚರ್ಚೆ ಮಾಡಿದ್ದೆವು. ಆದರೆ ಆ ಸಿನಿಮಾ ನಿರ್ಮಾಣ ಆಗುತ್ತದೆ ಅಂತ ನನಗೆ ಅನಿಸುತ್ತಿಲ್ಲ. ನಾವು ಆ ಸಿನಿಮಾವನ್ನು ಮಾಡುತ್ತಿಲ್ಲ ಎಂದುಕೊಂಡಿದ್ದೇನೆ’ ಎಂದಿದ್ದಾರೆ ವೆಟ್ರಿಮಾರನ್​.

ಇದನ್ನೂ ಓದಿ: ತಾಯಿಗಾಗಿ ಸಾಯಿ ಬಾಬಾ ಮಂದಿರ ಕಟ್ಟಿದ ದಳಪತಿ ವಿಜಯ್

ದಳಪತಿ ವಿಜಯ್​ ಅಭಿನಯದ ಈ ಕೊನೇ ಸಿನಿಮಾಗೆ ವೆಟ್ರಿಮಾರನ್​ ನಿರ್ದೇಶನ ಮಾಡುತ್ತಿಲ್ಲ ಎಂಬುದು ಈಗ ಖಚಿತವಾಗಿದೆ. ಹಾಗಾದರೆ ಆ ಚಾನ್ಸ್​ ಬೇರೆ ಯಾವ ನಿರ್ದೇಶಕನಿಗೆ ಸಿಗಲಿದೆ? ವರದಿಗಳ ಪ್ರಕಾರ ಎಚ್​. ವಿನೋದ್​ ಅವರು ‘ದಳಪತಿ 69’ ಸಿನಿಮಾಗೆ ನಿರ್ದೇಶನ ಮಾಡುವ ಸಾಧ್ಯತೆ ಇದೆ. ಈ ಸಿನಿಮಾಗೆ ದಳಪತಿ ವಿಜಯ್​ ಅವರು ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರೆ. ಈ ಸಿನಿಮಾದ ಶೂಟಿಂಗ್​ ಮುಗಿಸಿದ ಬಳಿಕ 2026ರ ತಮಿಳುನಾಡು ವಿಧಾನಸಭಾ ಚುನಾವಣೆ ಬಗ್ಗೆ ವಿಜಯ್​ ಅವರು ಸಂಪೂರ್ಣ ಗಮನ ಹರಿಸಲಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ