AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಯೋ: ವಿಜಯ್-ಲೋಕೇಶ್ ಕನಗರಾಜ್ ನಡುವೆ ಭಿನ್ನಾಭಿಪ್ರಾಯ?

Leo: ವಿಜಯ್ ನಟನೆಯ ‘ಲಿಯೋ‘ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗುತ್ತಿದ್ದು, ಸಿನಿಮಾದ ನಿರ್ದೇಶಕ ಲೋಕೇಶ್ ಕನಗರಾಜ್ ಹಾಗೂ ವಿಜಯ್ ನಡುವೆ ಮನಸ್ಥಾಪ ಉಂಟಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಲಿಯೋ: ವಿಜಯ್-ಲೋಕೇಶ್ ಕನಗರಾಜ್ ನಡುವೆ ಭಿನ್ನಾಭಿಪ್ರಾಯ?
ವಿಜಯ್-ಲೋಕೇಶ್
ಮಂಜುನಾಥ ಸಿ.
|

Updated on: Oct 06, 2023 | 8:01 PM

Share

ತಮಿಳಿನ ಸ್ಟಾರ್ ನಟ ವಿಜಯ್​ರ (Vijay) ‘ಲಿಯೋ‘ (Leo) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾವನ್ನು ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿದ್ದು, ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆಗಳಿವೆ. ಸಿನಿಮಾದ ಪ್ರಚಾರ ಕಾರ್ಯ ಹಲವು ಕಾರಣಗಳಿಂದ ನಿಧಾನ ಗತಿಯಲ್ಲಿ ಸಾಗಿದೆ. ಈ ನಡುವೆ ವಿಜಯ್ ಹಾಗೂ ನಿರ್ದೇಶಕ ಲೋಕೇಶ್ ಕನಗರಾಜ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ.

ಸಿನಿಮಾದ ಶೂಟಿಂಗ್ ವೇಳೆಯಲ್ಲಿ ಕೆಲವು ಸೀನ್​ಗಳಿಗೆ ಸಂಬಂಧಿಸಿದಂತೆ ನಿರ್ದೇಶಕ ಲೋಕೇಶ್ ಕನಗರಾಜ್ ಹಾಗೂ ವಿಜಯ್ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟಿದೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಲೋಕೇಶ್ ಕನಗರಾಜ್ ತಮ್ಮ ಸಿನಿಮಾದ ಪ್ರಚಾರ ಮಾಡುತ್ತಿಲ್ಲ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿನಿಮಾದ ನಿರ್ಮಾಪಕ ಲಲಿತ್ ಕುಮಾರ್, ‘ವಿಜಯ್ ಹಾಗೂ ಲೋಕೇಶ್ ಕನಗರಾಜ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಇಬ್ಬರೂ ಸಹೋದರರಂತೆ ಆತ್ಮೀಯವಾಗಿದ್ದಾರೆ” ಎಂದು ಸ್ಪಷ್ಟನೆ ನೀಡಿದ್ದಾರೆ. ಇದು ವಿಜಯ್ ಹಾಗೂ ಲೋಕೇಶ್ ಅಭಿಮಾನಿಗಳಲ್ಲಿ ನಿರಾಳತೆ ಮೂಡಿಸಿದೆ.

ಇದನ್ನೂ ಓದಿ:ಪುಂಡಾಟ ಮೆರೆದ ವಿಜಯ್ ಅಭಿಮಾನಿಗಳು, ಲಿಯೋ ಟ್ರೈಲರ್ ಬಿಡುಗಡೆ ವೇಳೆ ಚಿತ್ರಮಂದಿರದಲ್ಲಿ ದಾಂಧಲೆ

‘ಲಿಯೋ’ ಸಿನಿಮಾದ ಟ್ರೈಲರ್ ಲಾಂಚ್ ಇವೆಂಟ್ ಅನ್ನು ಅದ್ಧೂರಿಯಾಗಿ ಮಾಡುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿತ್ತು. ಆದರೆ ಚೆನ್ನೈ ಪೊಲೀಸರು ಇವೆಂಟ್​ ಆಯೋಜನೆಗೆ ಒಪ್ಪಿಗೆ ನೀಡಲಿಲ್ಲ. ಭದ್ರತೆ ಕಾರಣ ನೀಡಿ ಅವಕಾಶ ನಿರಾಕರಿಸಲಾಯ್ತು. ಆಡಳಿತ ಸರ್ಕಾರ ರಾಜಕೀಯ ಕಾರಣಕ್ಕೆ ವಿಜಯ್ ಸಿನಿಮಾ ಕಾರ್ಯಕ್ರಮಕ್ಕೆ ಅವಕಾಶ ನಿರಾಕರಿಸಿದೆ ಎಂದು ವಿಜಯ್ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯ್ ಸಹ ರಾಜಕೀಯಕ್ಕೆ ಧುಮುಕುವ ಸೂಚನೆಗಳನ್ನು ನೀಡಿದ್ದು, ತಮಗೆ ಮುಂದಿನ ಚುನಾವಣೆಯಲ್ಲಿ ಮುಳುವಾಗಬಹುದಾದ ವಿಜಯ್​ರನ್ನು ಈಗಲೇ ಹತ್ತಿಕ್ಕಲು ಕಾರ್ಯಕ್ರಮಕ್ಕೆ ಅವಕಾಶ ನಿರಾಕರಿಸಲಾಗಿದೆ ಎನ್ನಲಾಗುತ್ತಿದೆ.

ಟ್ರೈಲರ್ ಬಿಡುಗಡೆ, ಆಡಿಯೋ ಲಾಂಚ್ ಅಂಥಹಾ ಕಾರ್ಯಕ್ರಮಗಳ ಹೊರತಾಗಿ ವಿಜಯ್ ಬೇರೆ ಯಾವುದೇ ರೀತಿಯ ಸಿನಿಮಾ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಿಲ್ಲ. ಯಾವುದೇ ಟಿವಿ ಚಾನೆಲ್, ಯೂಟ್ಯೂಬ್ ಚಾನೆಲ್​ಗಳಿಗೆ ಸಂದರ್ಶನಗಳನ್ನು ಸಹ ನೀಡುವುದಿಲ್ಲ. ಈಗ ಟ್ರೈಲರ್ ಲಾಂಚ್ ಕಾರ್ಯಕ್ರಮವೂ ರದ್ದಾಗಿರುವ ಕಾರಣ ಸಿನಿಮಾದ ಪ್ರಚಾರಕ್ಕೆ ಹಿನ್ನಡೆ ಆದಂತಾಗಿದೆ.

ಪ್ರಚಾರದ ಹೊರತಾಗಿಯೂ ಸಿನಿಮಾದ ಅಡ್ವಾನ್ಸ್ ಬುಕಿಂಗ್​ಗಳು ಜೋರಾಗಿಯೇ ಆಗುತ್ತಿವೆ. ಸಿನಿಮಾವು ಅಕ್ಟೋಬರ್ 19ರಂದು ವಿಶ್ವದಾದ್ಯಂತ ಬಿಡುಗಡೆ ಆಗಲಿದೆ. ಸಿನಿಮಾಕ್ಕೆ ಯು/ಎ ಪ್ರಮಾಣ ಪತ್ರ ದೊರೆತಿದ್ದು, ಸಿನಿಮಾದ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ನಟಿಸಿರುವ ಅನುಮಾನವನ್ನು ಟ್ರೈಲರ್ ಹುಟ್ಟುಹಾಕಿದೆ. ಸಿನಿಮಾದಲ್ಲಿ ವಿಜಯ್​ಗೆ ನಾಯಕಿಯಾಗಿ ತ್ರಿಷಾ ನಟಿಸಿದ್ದಾರೆ. ವಿಲನ್ ಪಾತ್ರದಲ್ಲಿ ಸಂಜಯ್ ದತ್ ಇದ್ದಾರೆ. ಅರ್ಜುನ್ ಸರ್ಜಾ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾಕ್ಕೆ ಅನಿರುದ್ಧ್ ರವಿಚಂದ್ರನ್ ಸಂಗೀತ ಒದಗಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?