AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಣೆ ಸಂಬಂಧ ವಿಧಾನ ಪರಿಷತ್​ನಲ್ಲಿ ಗದ್ದಲ; ಬಜೆಟ್ ಚರ್ಚೆ ಬಿಟ್ಟು ಸಿನಿಮಾ ಏಕೆ ಎಂದು ಪ್ರಶ್ನಿಸಿದ ಕಾಂಗ್ರೆಸ್

Karnataka Legislative Council | The Kashmir Files: ‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ ವೀಕ್ಷಣೆಗೆ ಶಾಸಕರನ್ನು ಹಾಗೂ ಸಚಿವರನ್ನು ಆಹ್ವಾನಿಸಿ ಪರಿಷತ್​ನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಣೆ ಹೊರಡಿಸಿದ್ದಾರೆ. ಈ ವೇಳೆ ಸಿನಿಮಾ ವೀಕ್ಷಣೆ ವಿಚಾರವನ್ನು ವಾಪಸ್ ಪಡೆಯುವಂತೆ ಕಾಂಗ್ರೆಸ್ ಸದಸ್ಯರು ಗದ್ದಲ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡಿರುವ ಕಾಂಗ್ರೆಸ್ ನಾಯಕರು, ಬಜೆಟ್ ಚರ್ಚೆ ಬಿಟ್ಟು ಸಿನಿಮಾ ಯಾಕೆ ನೋಡಬೇಕು ಎಂದು ಪ್ರಶ್ನಿಸಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಣೆ ಸಂಬಂಧ ವಿಧಾನ ಪರಿಷತ್​ನಲ್ಲಿ ಗದ್ದಲ; ಬಜೆಟ್ ಚರ್ಚೆ ಬಿಟ್ಟು ಸಿನಿಮಾ ಏಕೆ ಎಂದು ಪ್ರಶ್ನಿಸಿದ ಕಾಂಗ್ರೆಸ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 15, 2022 | 11:46 AM

Share

ಬೆಂಗಳೂರು: ರಾಜ್ಯದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಸಿನಿಮಾ ವೀಕ್ಷಿಸಲು ರಾಜಕೀಯ ನಾಯಕರು ಉತ್ಸಾಹ ತೋರಿದ್ದಾರೆ. ಸರ್ಕಾರ ಇದರಲ್ಲಿ ಆಸಕ್ತಿ ವಹಿಸಿದ್ದು, ಚಿತ್ರ ವೀಕ್ಷಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ತೆರಿಗೆ ರಹಿತ ಚಿತ್ರವೆಂದು ಗೋಷಿಸಿದ್ದರು. ಈ ನಡುವೆ ನಿನ್ನೆ (ಸೋಮವಾರ) ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಚಿತ್ರವನ್ನು ವೀಕ್ಷಿಸಲು ಇಂದು (ಮಂಗಳವಾರ) ಎಲ್ಲಾ ಸಚಿವರು ಹಾಗೂ ಶಾಸಕರಿಗೆ ವ್ಯವಸ್ಥೆ ಮಾಡಿರುವುದಾಗಿ ಘೋಷಿಸಿದ್ದರು. ವಿಧಾನಸಭೆ ಸಚಿವಾಲಯದಿಂದ ಈ ಘೋಷಣೆ ಮಾಡಲಾಗಿದೆ. ಇಂದು ವಿಧಾನ ಪರಿಷತ್​ನಲ್ಲಿ ಇದೇ ಘೋಷಣೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಮಾಡಿದ್ದು, ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾಗಿದೆ. ‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ ವೀಕ್ಷಣೆಗೆ ಶಾಸಕರನ್ನು ಹಾಗೂ ಸಚಿವರನ್ನು ಆಹ್ವಾನಿಸಿ ಪರಿಷತ್​ನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಣೆ ಹೊರಡಿಸಿದ್ದಾರೆ. ಈ ವೇಳೆ ಸಿನಿಮಾ ವೀಕ್ಷಣೆ ವಿಚಾರವನ್ನು ವಾಪಸ್ ಪಡೆಯುವಂತೆ ಕಾಂಗ್ರೆಸ್ ಸದಸ್ಯರು ಗದ್ದಲ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡಿರುವ ಕಾಂಗ್ರೆಸ್ ನಾಯಕರು, ಬಜೆಟ್ ಚರ್ಚೆ ಬಿಟ್ಟು ಸಿನಿಮಾ ಯಾಕೆ ನೋಡಬೇಕು ಎಂದು ಪ್ರಶ್ನಿಸಿದ್ದಾರೆ. ಸದನದಲ್ಲಿ ಮಾಡಿದ ಘೋಷಣೆ ವಾಪಸ್ ಪಡೆಯಬೇಕು ಎಂದು ಕಾಂಗ್ರೆಸ್ ಪಟ್ಟು ಹಿಡಿದಿದ್ದು, ಪರಿಷತ್ ಬಾವಿಗಿಳಿದು ಪ್ರತಿಭಟಿಸಿದ್ದಾರೆ. ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಸದನದಲ್ಲಿ ಏನೇನಾಯ್ತು?

ಬಸವರಾಜ ಹೊರಟ್ಟಿಯವರು ಸಿನಿಮಾ ವೀಕ್ಷಣೆಗೆ ಪ್ರಕಟಣೆ ಹೊರಡಿಸಿದ ನಂತರ, ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಣೆ ವಿಚಾರ ವಾಪಸ್ ಪಡೆಯುವಂತೆ ಕಾಂಗ್ರೆಸ್ ಸದಸ್ಯರು ಗದ್ದಲ ಮಾಡಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಮಾತನಾಡಿ, ‘ಫರ್ಜಾನಾ ’ಮತ್ತು ‘ವಾಟರ್’ ಅಂತ ಎರಡು ಸಿನಿಮಾ ಇವೆ ಅವನ್ನೂ ತೋರಿಸಿ ಎಂದು ಹೇಳಿದ್ದಾರೆ. ‘‘ನಾವು ಯಾವ ಸಿನಿಮಾ ನೋಡಬೇಕು ಅಂತ ಸದನದಲ್ಲಿ ಹೇಳೋ ಹಾಗಿಲ್ಲ. ಕೆಲವರು ಸದನದಲ್ಲಿ ಅಶ್ಲೀಲ ಚಿತ್ರ ನೋಡಿದ್ದಾರೆ. ನಾವೂ ಹಾಗಾದ್ರೆ ಅದನ್ನು ನೋಡಬೇಕಾ? ಸರ್ಕಾರ ಪಿಚ್ಚರ್ ತೋರಿಸೋದಕ್ಕೆ ಇದೆಯಾ? ಸಭಾಪತಿ ನಿಷ್ಪಕ್ಷಪಾತಿ ಆಗಿರಬೇಕು. ಪೀಠದಿಂದ ಯಾಕೆ ಇದನ್ನು ಹೇಳಿಸ್ತೀರಾ?’’ ಎಂದು ಹರಿಪ್ರಸಾದ್ ಖಾರವಾಗಿ ನುಡಿದಿದ್ದಾರೆ.

ಸಲೀಂ ಅಹ್ಮದ್ ಮಾತನಾಡಿ, ‘‘ಸರ್ಕಾರ ಯಾಕೆ ಬಲವಂತವಾಗಿ ಸಿನಿಮಾ ತೋರಿಸುವುದಕ್ಕೆ ಹೊರಟಿದ್ದೀರಾ? ಬಜೆಟ್ ಚರ್ಚೆ ಬಿಟ್ಟು ಸಿನಿಮಾ ಯಾಕೆ ನೋಡಬೇಕ?’’ ಎಂದು ಪ್ರಶ್ನಿಸಿದ್ದಾರೆ. ‘‘ಯಾರಿಗೂ ಕಡ್ಡಾಯ ಇಲ್ಲ, ಇಷ್ಟ ಇದ್ದವರು ನೋಡಿ’’ ಎಂದು ಸೋಮಶೇಖರ್ ನುಡಿದಿದ್ದಾರೆ.

ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಸಿನಿಮಾ ವಿಚಾರಕ್ಕೆ ಗದ್ದಲ ಏರ್ಪಟ್ಟಿದೆ. ನಂತರ ಕಾಂಗ್ರೆಸ್ ಸದನದಲ್ಲಿ ಮಾಡಿದ ಘೋಷಣೆ ವಾಪಸ್ ಪಡೆಯಬೇಕು ಎಂದು ಪಟ್ಟು ಹಿಡಿದಿದ್ದು, ಪರಿಷತ್ ಬಾವಿಗಿಳಿದು ಧರಣಿ ನಡೆಸಿದೆ. ನಿಮ್ಮ ಆರ್ಭಟ ನಡೆಯೋದಿಲ್ಲ ಎಂದು ಬಿಜೆಪಿ ಸದಸ್ಯರು ಗದ್ದಲ ಮಾಡಿದ್ದಾರೆ.

ಗದ್ದಲ ಕಡಿಮೆಯಾಗದ ಹಿನ್ನೆಲೆಯಲ್ಲಿ ಪರಿಷತ್ ಕಲಾಪವನ್ನು 10 ನಿಮಿಷ ಮುಂದೂಡಲಾಯಿತು.

ಇದನ್ನೂ ಓದಿ:

The Kashmir Files: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಣೆಗೆ ತೆರಳುವುದಿಲ್ಲ ಎಂದ ಸಿದ್ದರಾಮಯ್ಯ; ಕಾರಣವೇನು?

The Kashmir Files: ವಿಜಯಪುರದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಉಚಿತ ಪ್ರದರ್ಶನ ಘೋಷಿಸಿದ ಶಾಸಕ ಯತ್ನಾಳ್; ಎಂದಿನಿಂದ? ಇಲ್ಲಿದೆ ಮಾಹಿತಿ

Published On - 11:41 am, Tue, 15 March 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್