AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actor Dileep ನಟಿ ಮೇಲೆ ದೌರ್ಜನ್ಯ ಪ್ರಕರಣದ ತನಿಖಾಧಿಕಾರಿಗಳ ವಿರುದ್ಧ ಸಂಚು: ಮಲಯಾಳಂ ನಟ ದಿಲೀಪ್‌ಗೆ ನಿರೀಕ್ಷಣಾ ಜಾಮೀನು

ದಿಲೀಪ್ ಅವರ ಮಾಜಿ ಸ್ನೇಹಿತ ಹಾಗೂ ನಿರ್ದೇಶಕ ಬಾಲಚಂದ್ರ ಕುಮಾರ್ ಹೇಳಿಕೆ ಮೇರೆಗೆ ಅಪರಾಧ ವಿಭಾಗದ ಪೊಲೀಸರು ದಾಖಲಿಸಿಕೊಂಡಿದ್ದ ಪ್ರಕರಣದಲ್ಲಿ ದಿಲೀಪ್ ಮತ್ತಿತರರು ಅಕ್ಟೋಬರ್ 10ರಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

Actor Dileep ನಟಿ ಮೇಲೆ ದೌರ್ಜನ್ಯ ಪ್ರಕರಣದ ತನಿಖಾಧಿಕಾರಿಗಳ ವಿರುದ್ಧ ಸಂಚು: ಮಲಯಾಳಂ ನಟ ದಿಲೀಪ್‌ಗೆ ನಿರೀಕ್ಷಣಾ ಜಾಮೀನು
ನಟ ದಿಲೀಪ್ (ಕೃಪೆ:ಫೇಸ್​​ಬುಕ್)
TV9 Web
| Edited By: |

Updated on:Feb 07, 2022 | 11:32 AM

Share

ಕೊಚ್ಚಿ: ನಟಿ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ತನಿಖಾಧಿಕಾರಿಗಳನ್ನು ಅಪಾಯಕ್ಕೆ ಸಿಲುಕಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ (Dileep) ಮತ್ತು ಆತನ ಸಹ ಆರೋಪಿಗಳಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ದಿಲೀಪ್ ಅವರನ್ನು ಕಸ್ಟಡಿಯಲ್ಲಿ ಪ್ರಶ್ನಿಸಬೇಕು ಎಂಬ ಪ್ರಾಸಿಕ್ಯೂಷನ್ ಬೇಡಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದ್ದು ನ್ಯಾಯಮೂರ್ತಿ ಪಿ. ಗೋಪಿನಾಥ್ ಅವರಿದ್ದ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ. ಸದ್ಯದ ಪರಿಸ್ಥಿತಿಯಲ್ಲಿ ದಿಲೀಪ್ ಅವರನ್ನು ಕಸ್ಟಡಿಯಲ್ಲಿ ಪ್ರಶ್ನಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಷರತ್ತುಗಳ ಮೇಲೆ ಜಾಮೀನು ನೀಡಲಾಗಿದ್ದು ಷರತ್ತುಗಳನ್ನು ಉಲ್ಲಂಘಿಸಿದರೆ ಬಂಧಿಸಬಹುದು ಎಂದು ನ್ಯಾಯಾಲಯ ಹೇಳಿದೆ. ದಿಲೀಪ್ ಪಾಸ್ ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕು. 1 ಲಕ್ಷ ರೂ.ಗಳ ಇಬ್ಬರ ಶ್ಯೂರಿಟಿ ಅಗತ್ಯವಿದೆ. ತನಿಖೆಗೆ ಸಹಕರಿಸುವಂತೆ ಆರೋಪಿಗಳಿಗೆ ನ್ಯಾಯಾಲಯ ಬಲವಾಗಿ ಸೂಚಿಸಿದೆ. ತೀರ್ಪು ಬರುವ ಮುನ್ನವೇ ಕ್ರೈಂ ಬ್ರಾಂಚ್ ತಂಡ ದಿಲೀಪ್ ಹಾಗೂ ಆತನ ಸಹೋದರನ ಮನೆ ಮುಂದೆ  ಬಂದಿದ್ದು ದಿಲೀಪ್ ಪರ ತೀರ್ಪು ಬಂದ  ಕೂಡಲೇ ಅಲ್ಲಿಂದ ವಾಪಸಾದರು. ದಿಲೀಪ್ ಹೊರತಾಗಿ ಸಹೋದರ ಅನೂಪ್, ಸಹೋದರಿಯ ಪತಿ ಟಿ.ಎನ್.ಸೂರಜ್, ಸೋದರ ಸಂಬಂಧಿ ಅಪ್ಪು, ಸ್ನೇಹಿತ ಬೈಜು ಚೆಂಗಮನಾಡು ಮತ್ತು ಶರತ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಪಿ.ಗೋಪಿನಾಥ್ ಪರಿಗಣಿಸಿದ್ದಾರೆ.

ದಿಲೀಪ್ ಅವರ ಮಾಜಿ ಸ್ನೇಹಿತ ಹಾಗೂ ನಿರ್ದೇಶಕ ಬಾಲಚಂದ್ರ ಕುಮಾರ್ ಹೇಳಿಕೆ ಮೇರೆಗೆ ಅಪರಾಧ ವಿಭಾಗದ ಪೊಲೀಸರು ದಾಖಲಿಸಿಕೊಂಡಿದ್ದ ಪ್ರಕರಣದಲ್ಲಿ ದಿಲೀಪ್ ಮತ್ತಿತರರು ಅಕ್ಟೋಬರ್ 10ರಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಬಂಧನಕ್ಕೆ ತಡೆ ನೀಡಿದ್ದು, ಮೂರು ದಿನಗಳ ಕಾಲ ವಿಚಾರಣೆಗೆ ಹಾಜರಾಗುವಂತೆ ದಿಲೀಪ್ ಮತ್ತು ಇತರರಿಗೆ ಸೂಚಿಸಿದೆ. ವಿಚಾರಣೆ ವೇಳೆ ದೊರೆತ ಮಾಹಿತಿ ಮತ್ತು ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ನೀಡುವಂತೆಯೂ ಪ್ರಾಸಿಕ್ಯೂಷನ್‌ಗೆ ಸೂಚಿಸಲಾಗಿದೆ.

ಬಾಲಚಂದ್ರ ಕುಮಾರ್ ಪ್ರಕಾರ, ಪ್ರಕರಣದಲ್ಲಿ ದಿಲೀಪ್​​ನ್ನು ಬಂಧಿಸಿದ ತಂಡದಲ್ಲಿದ್ದ ಅಪರಾಧ ವಿಭಾಗದ ಡಿವೈಎಸ್ಪಿ ಬೈಜು ಪೌಲೋಸ್ ಮತ್ತು ಡಿವೈಎಸ್ಪಿ ಕೆ.ಎಸ್.ಸುದರ್ಶನ್ ಅವರನ್ನು ಅಪಾಯಕ್ಕೆ ಸಿಲುಕಿಸಲು ದಿಲೀಪ್ ಮತ್ತು ಆತನ ಸಹಚರರು ಸಂಚು ರೂಪಿಸಿದ್ದರು. ಬಾಲಚಂದ್ರಕುಮಾರ್ ಅವರು ಸಂಭಾಷಣೆಯ ಧ್ವನಿಮುದ್ರಣವನ್ನು ಸಹ ಹಸ್ತಾಂತರಿಸಿದರು.

ಏತನ್ಮಧ್ಯೆ, ನಟ ಮತ್ತು ಇತರರು ಬಳಸಿದ 7 ಫೋನ್‌ಗಳನ್ನು ಪ್ರಸ್ತುತಪಡಿಸಲು ನಿರ್ದೇಶನ ನೀಡುವಂತೆ ಪ್ರಾಸಿಕ್ಯೂಷನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ನಂತರ ನ್ಯಾಯಾಲಯವು ಫೋನ್‌ಗಳನ್ನು ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಮುಂದೆ ಹಾಜರುಪಡಿಸುವಂತೆ ಸೂಚಿಸಿತು. ನಂತರ ಜನವರಿ 31 ರಂದು 6 ಫೋನ್‌ಗಳನ್ನು ಮುಚ್ಚಿದ ಕವರ್‌ನಲ್ಲಿ ಹಸ್ತಾಂತರಿಸಲಾಯಿತು. ಪ್ರಕರಣದ ವಿಚಾರಣೆ ನಡೆಸುತ್ತಿರುವ ಆಲುವಾ ಜ್ಯುಡಿಷಿಯಲ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆರೋಪಿಗಳಿಗೆ ಫೋನ್ ಗಳನ್ನು ನ್ಯಾಯಾಲಯಕ್ಕೆ ಒಪ್ಪಿಸುವಂತೆ ಸೂಚಿಸಿದೆ. ತನಿಖಾಧಿಕಾರಿಗಳು ಪಿತೂರಿ ನಡೆಸುತ್ತಿದ್ದಾರೆ ಮತ್ತು ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದಿಲೀಪ್ ಹೇಳಿದ್ದಾರೆ. ಅವರಿಗೆ ವೈಯಕ್ತಿಕವಾಗಿ ವೈರತ್ವ ಹೊಂದಿರುವ ಬಾಲಚಂದ್ರಕುಮಾರ್ ಹೇಳಿಕೆ ಮಾತ್ರ ಲಭ್ಯವಾಗಿದೆ.

ಆದರೆ, ಪ್ರಕರಣವು ಅಸಂವಿಧಾನಿಕ ಮತ್ತು ಪಿತೂರಿ  ನಡೆದಿದೆ ಎಂಬುದಕ್ಕೆ ಪುರಾವೆಗಳಿವೆ ಎಂದು ಪ್ರಾಸಿಕ್ಯೂಷನ್ ಹೇಳಿದೆ. ದಿಲೀಪ್ ಮತ್ತಿತರರು ತನಿಖೆಗೆ ಸಹಕರಿಸದಿದ್ದು, ಬಾಲಚಂದ್ರಕುಮಾರ್ ಬಹಿರಂಗಪಡಿಸಿದ ಬೆನ್ನಲ್ಲೇ ಆರೋಪಿಗಳು ಫೋನ್ ಬದಲಾಯಿಸಿರುವುದು ಷಡ್ಯಂತ್ರಕ್ಕೆ ಸಾಕ್ಷಿಯಾಗಿದೆ ಎಂದರು. ತನಿಖೆಯನ್ನು ಹಾಳು ಮಾಡಲು ಫೋನ್‌ಗಳನ್ನು ಮುಂಬೈಗೆ ಸಾಗಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ಆರೋಪಿಸಿದೆ. ಪ್ರಾಸಿಕ್ಯೂಷನ್‌ನ ಮಹಾನಿರ್ದೇಶಕ ಟಿ.ಎ. ಶಾಜಿ ಹಾಗೂ ಹಿರಿಯ ವಕೀಲ ಬಿ ರಾಮನ್ ಪಿಳ್ಳೈ ಅವರು ದಿಲೀಪ್ ಪರ ವಾದ ಮಂಡಿಸಿದ್ದರು.

ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ; ಐದು ವರ್ಷಗಳ ಬಳಿಕ ಘಟನೆ ನೆನಪಿಸಿಕೊಂಡ ನಟಿ ಭಾವನಾ ಮೆನನ್​

Published On - 11:01 am, Mon, 7 February 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ