AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾರ ಖಾಸಗಿ ಅಂಗದ ಬಗ್ಗೆ ಕೆಟ್ಟದಾಗಿ ಕಮೆಂಟ್​ ಮಾಡಿದ್ದ ನಟಿ ಶ್ರೀರೆಡ್ಡಿಗೆ ಈಗ ಅವರ ದಾಂಪತ್ಯದ್ದೇ ಚಿಂತೆ

‘ನಿಮ್ಮಿಬ್ಬರ ನಡುವೆ ಏನೇ ಆಗಿರಬಹುದು. ಆದರೆ ನೀವೀಗ ಜೊತೆಯಾಗಿರಬೇಕು. ಅದೇ ನನ್ನ ಕೋರಿಕೆ’ ಎಂದು ಶ್ರೀರೆಡ್ಡಿ ಅವರು ವಿಡಿಯೋ ಮೂಲಕ ಸಮಂತಾ ಮತ್ತು ನಾಗ ಚೈತನ್ಯಗೆ ಮನವಿ ಮಾಡಿಕೊಂಡಿದ್ದಾರೆ.

ಸಮಂತಾರ ಖಾಸಗಿ ಅಂಗದ ಬಗ್ಗೆ ಕೆಟ್ಟದಾಗಿ ಕಮೆಂಟ್​ ಮಾಡಿದ್ದ ನಟಿ ಶ್ರೀರೆಡ್ಡಿಗೆ ಈಗ ಅವರ ದಾಂಪತ್ಯದ್ದೇ ಚಿಂತೆ
ನಾಗ ಚೈತನ್ಯ, ಸಮಂತಾ ಅಕ್ಕಿನೇನಿ, ಶ್ರೀರೆಡ್ಡಿ
TV9 Web
| Edited By: |

Updated on: Sep 30, 2021 | 3:21 PM

Share

ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ಕುಟುಂಬದಲ್ಲಿ ಏನು ನಡೆಯುತ್ತಿದೆ ಎಂಬ ಬಗ್ಗೆ ದೊಡ್ಡ ಚರ್ಚೆ ಶುರುವಾಗಿದೆ. ಅವರಿಬ್ಬರು ವಿಚ್ಛೇದನ ಪಡೆಯುತ್ತಾರೆ ಎಂಬ ಗುಸುಗುಸು ಕೇಳಿಬರುತ್ತಿದೆ. ಈ ಬಗ್ಗೆ ಫ್ಯಾನ್ಸ್​ ಹಲವು ಬಗೆಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಆದರೆ ಈ ಕುರಿತು ಸೆಲೆಬ್ರಿಟಿಗಳು ಮಾತನಾಡಿರುವುದು ವಿರಳ. ಈಗ ವಿವಾದಾತ್ಮಕ ನಟಿ ಶ್ರೀರೆಡ್ಡಿ ಅವರು ತಮ್ಮ ಸೋಶಿಯಲ್​ ಮೀಡಿಯಾ ಮೂಲಕ ಈ ಬಗ್ಗೆ ಮಾತನಾಡಿದ್ದಾರೆ. ಸಮಂತಾ ಮತ್ತು ನಾಗ ಚೈತನ್ಯ ದಾಂಪತ್ಯದ ಬಗ್ಗೆ ಅವರು ಎಲ್ಲಿಲ್ಲದ ಕಾಳಜಿ ತೋರಿಸಿದ್ದಾರೆ.

‘ನೀವಿಬ್ಬರೂ ಒಂದಾಗಿ ಇರಬೇಕು ಅಂತ ನಾವೆಲ್ಲರೂ ಬಯಸುತ್ತೇವೆ. ನೀವು ಎಲ್ಲರಿಗೂ ಸ್ಫೂರ್ತಿ ತುಂಬುವಂತಹ ಜೋಡಿ ಆಗಿರಬೇಕು. ನಿಮ್ಮನ್ನು ನೋಡಿದರೆ ಅನೇಕರಿಗೆ ಸ್ಫೂರ್ತಿ ಬರುತ್ತದೆ. ನಿಮ್ಮಿಬ್ಬರ ನಡುವೆ ಏನೇ ಆಗಿರಬಹುದು. ಆದರೆ ನೀವೀಗ ಜೊತೆಯಾಗಿರಬೇಕು. ಅದೇ ನನ್ನ ಕೋರಿಕೆ’ ಎಂದು ಶ್ರೀರೆಡ್ಡಿ ಅವರು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಅಲ್ಲದೇ, ನಾಗ ಚೈತನ್ಯ ಮತ್ತು ಸಮಂತಾರ ಮದುವೆಯ ವಿಡಿಯೋಗಳನ್ನು ಶೇರ್​ ಮಾಡಿಕೊಂಡಿರುವ ಶ್ರೀರೆಡ್ಡಿ, ‘ಎಂದೆಂದಿಗೂ ಸುಂದರ ಜೋಡಿ. ಅತ್ಯುತ್ತಮ ನೆನಪುಗಳು’ ಎಂದು ಅದಕ್ಕೆ ಕ್ಯಾಪ್ಷನ್​ ನೀಡಿದ್ದಾರೆ. ಸದ್ಯ ಅವರು ಮಾಡಿರುವ ಪೋಸ್ಟ್​ ವೈರಲ್​ ಆಗುತ್ತಿದೆ. ಅಚ್ಚರಿ ಎಂದರೆ ಇದೇ ಶ್ರೀರೆಡ್ಡಿ ಈ ಹಿಂದೆ ಸಮಂತಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು.

ಸಮಂತಾ ಮತ್ತು ತ್ರಿಶಾ ಕೃಷ್ಣನ್​ ಅವರ ದೇಹದ ಅಂಗಗಳನ್ನು ಬೇರೆ ಬೇರೆ ಹಣ್ಣುಗಳಿಗೆ ಹೋಲಿಸಿ ಶ್ರೀರೆಡ್ಡಿ ಪೋಸ್ಟ್​ ಮಾಡಿದ್ದರು. ಅದು ಸಮಂತಾ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿತ್ತು. ನಂತರ ಶ್ರೀರೆಡ್ಡಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳ್ಳಲಾಗಿತ್ತು. ಆದರೆ ಅದಕ್ಕೆಲ್ಲ ಬಗ್ಗುವಂತಹ ವ್ಯಕ್ತಿತ್ವ ಅವರದ್ದಲ್ಲ. ಟಾಲಿವುಡ್​ನ ಅನೇಕರ ಮೇಲೆ ಅವರು ಮೀಟೂ ಆರೋಪ ಕೂಡ ಹೊರಿಸಿದ್ದರು. ತಮಗೆ ಆದ ಅನ್ಯಾಯವನ್ನು ಖಂಡಿಸಿ, ಬೆತ್ತಲಾಗಿ ಪ್ರತಿಭಟನೆ ಮಾಡಲು ಕೂಡ ಶ್ರೀರೆಡ್ಡಿ ಮುಂದಾಗಿದ್ದರು. ಆ ಬಳಿಕವೇ ಅವರಿಗೆ ಹೆಚ್ಚು ಪ್ರಚಾರ ಸಿಗಲು ಪ್ರಾರಂಭವಾಯಿತು.

ಇದನ್ನೂ ಓದಿ:

10 ಕೋಟಿ ರೂ. ಖರ್ಚಿನಲ್ಲಿ ಆದ ಮದುವೆಯ ವ್ಯಾಲಿಡಿಟಿ 4 ವರ್ಷ ಮಾತ್ರವೇ? ಅ.6ಕ್ಕೆ ಸಮಂತಾ-ನಾಗ ಚೈತನ್ಯ ಭವಿಷ್ಯ ನಿರ್ಧಾರ

ಡಿವೋರ್ಸ್​ ಪಡೆದರೆ ಸಮಂತಾಗೆ ಸಿಗುವ ಹಣ ಎಷ್ಟು? ಅಕ್ಕಿನೇನಿ ಸೊಸೆಯ ಬಹುಕೋಟಿ ಕಹಾನಿ

Follow Us
Web contact
Web contact

TV9 Kannada

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!