ಸಮಂತಾರ ಖಾಸಗಿ ಅಂಗದ ಬಗ್ಗೆ ಕೆಟ್ಟದಾಗಿ ಕಮೆಂಟ್​ ಮಾಡಿದ್ದ ನಟಿ ಶ್ರೀರೆಡ್ಡಿಗೆ ಈಗ ಅವರ ದಾಂಪತ್ಯದ್ದೇ ಚಿಂತೆ

‘ನಿಮ್ಮಿಬ್ಬರ ನಡುವೆ ಏನೇ ಆಗಿರಬಹುದು. ಆದರೆ ನೀವೀಗ ಜೊತೆಯಾಗಿರಬೇಕು. ಅದೇ ನನ್ನ ಕೋರಿಕೆ’ ಎಂದು ಶ್ರೀರೆಡ್ಡಿ ಅವರು ವಿಡಿಯೋ ಮೂಲಕ ಸಮಂತಾ ಮತ್ತು ನಾಗ ಚೈತನ್ಯಗೆ ಮನವಿ ಮಾಡಿಕೊಂಡಿದ್ದಾರೆ.

ಸಮಂತಾರ ಖಾಸಗಿ ಅಂಗದ ಬಗ್ಗೆ ಕೆಟ್ಟದಾಗಿ ಕಮೆಂಟ್​ ಮಾಡಿದ್ದ ನಟಿ ಶ್ರೀರೆಡ್ಡಿಗೆ ಈಗ ಅವರ ದಾಂಪತ್ಯದ್ದೇ ಚಿಂತೆ
ನಾಗ ಚೈತನ್ಯ, ಸಮಂತಾ ಅಕ್ಕಿನೇನಿ, ಶ್ರೀರೆಡ್ಡಿ
Follow us
| Updated By: ಮದನ್​ ಕುಮಾರ್​

Updated on: Sep 30, 2021 | 3:21 PM

ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ಕುಟುಂಬದಲ್ಲಿ ಏನು ನಡೆಯುತ್ತಿದೆ ಎಂಬ ಬಗ್ಗೆ ದೊಡ್ಡ ಚರ್ಚೆ ಶುರುವಾಗಿದೆ. ಅವರಿಬ್ಬರು ವಿಚ್ಛೇದನ ಪಡೆಯುತ್ತಾರೆ ಎಂಬ ಗುಸುಗುಸು ಕೇಳಿಬರುತ್ತಿದೆ. ಈ ಬಗ್ಗೆ ಫ್ಯಾನ್ಸ್​ ಹಲವು ಬಗೆಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಆದರೆ ಈ ಕುರಿತು ಸೆಲೆಬ್ರಿಟಿಗಳು ಮಾತನಾಡಿರುವುದು ವಿರಳ. ಈಗ ವಿವಾದಾತ್ಮಕ ನಟಿ ಶ್ರೀರೆಡ್ಡಿ ಅವರು ತಮ್ಮ ಸೋಶಿಯಲ್​ ಮೀಡಿಯಾ ಮೂಲಕ ಈ ಬಗ್ಗೆ ಮಾತನಾಡಿದ್ದಾರೆ. ಸಮಂತಾ ಮತ್ತು ನಾಗ ಚೈತನ್ಯ ದಾಂಪತ್ಯದ ಬಗ್ಗೆ ಅವರು ಎಲ್ಲಿಲ್ಲದ ಕಾಳಜಿ ತೋರಿಸಿದ್ದಾರೆ.

‘ನೀವಿಬ್ಬರೂ ಒಂದಾಗಿ ಇರಬೇಕು ಅಂತ ನಾವೆಲ್ಲರೂ ಬಯಸುತ್ತೇವೆ. ನೀವು ಎಲ್ಲರಿಗೂ ಸ್ಫೂರ್ತಿ ತುಂಬುವಂತಹ ಜೋಡಿ ಆಗಿರಬೇಕು. ನಿಮ್ಮನ್ನು ನೋಡಿದರೆ ಅನೇಕರಿಗೆ ಸ್ಫೂರ್ತಿ ಬರುತ್ತದೆ. ನಿಮ್ಮಿಬ್ಬರ ನಡುವೆ ಏನೇ ಆಗಿರಬಹುದು. ಆದರೆ ನೀವೀಗ ಜೊತೆಯಾಗಿರಬೇಕು. ಅದೇ ನನ್ನ ಕೋರಿಕೆ’ ಎಂದು ಶ್ರೀರೆಡ್ಡಿ ಅವರು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಅಲ್ಲದೇ, ನಾಗ ಚೈತನ್ಯ ಮತ್ತು ಸಮಂತಾರ ಮದುವೆಯ ವಿಡಿಯೋಗಳನ್ನು ಶೇರ್​ ಮಾಡಿಕೊಂಡಿರುವ ಶ್ರೀರೆಡ್ಡಿ, ‘ಎಂದೆಂದಿಗೂ ಸುಂದರ ಜೋಡಿ. ಅತ್ಯುತ್ತಮ ನೆನಪುಗಳು’ ಎಂದು ಅದಕ್ಕೆ ಕ್ಯಾಪ್ಷನ್​ ನೀಡಿದ್ದಾರೆ. ಸದ್ಯ ಅವರು ಮಾಡಿರುವ ಪೋಸ್ಟ್​ ವೈರಲ್​ ಆಗುತ್ತಿದೆ. ಅಚ್ಚರಿ ಎಂದರೆ ಇದೇ ಶ್ರೀರೆಡ್ಡಿ ಈ ಹಿಂದೆ ಸಮಂತಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು.

ಸಮಂತಾ ಮತ್ತು ತ್ರಿಶಾ ಕೃಷ್ಣನ್​ ಅವರ ದೇಹದ ಅಂಗಗಳನ್ನು ಬೇರೆ ಬೇರೆ ಹಣ್ಣುಗಳಿಗೆ ಹೋಲಿಸಿ ಶ್ರೀರೆಡ್ಡಿ ಪೋಸ್ಟ್​ ಮಾಡಿದ್ದರು. ಅದು ಸಮಂತಾ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿತ್ತು. ನಂತರ ಶ್ರೀರೆಡ್ಡಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳ್ಳಲಾಗಿತ್ತು. ಆದರೆ ಅದಕ್ಕೆಲ್ಲ ಬಗ್ಗುವಂತಹ ವ್ಯಕ್ತಿತ್ವ ಅವರದ್ದಲ್ಲ. ಟಾಲಿವುಡ್​ನ ಅನೇಕರ ಮೇಲೆ ಅವರು ಮೀಟೂ ಆರೋಪ ಕೂಡ ಹೊರಿಸಿದ್ದರು. ತಮಗೆ ಆದ ಅನ್ಯಾಯವನ್ನು ಖಂಡಿಸಿ, ಬೆತ್ತಲಾಗಿ ಪ್ರತಿಭಟನೆ ಮಾಡಲು ಕೂಡ ಶ್ರೀರೆಡ್ಡಿ ಮುಂದಾಗಿದ್ದರು. ಆ ಬಳಿಕವೇ ಅವರಿಗೆ ಹೆಚ್ಚು ಪ್ರಚಾರ ಸಿಗಲು ಪ್ರಾರಂಭವಾಯಿತು.

ಇದನ್ನೂ ಓದಿ:

10 ಕೋಟಿ ರೂ. ಖರ್ಚಿನಲ್ಲಿ ಆದ ಮದುವೆಯ ವ್ಯಾಲಿಡಿಟಿ 4 ವರ್ಷ ಮಾತ್ರವೇ? ಅ.6ಕ್ಕೆ ಸಮಂತಾ-ನಾಗ ಚೈತನ್ಯ ಭವಿಷ್ಯ ನಿರ್ಧಾರ

ಡಿವೋರ್ಸ್​ ಪಡೆದರೆ ಸಮಂತಾಗೆ ಸಿಗುವ ಹಣ ಎಷ್ಟು? ಅಕ್ಕಿನೇನಿ ಸೊಸೆಯ ಬಹುಕೋಟಿ ಕಹಾನಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ