AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಲ್ವಾನ್ ಕುರಿತು ವಿವಾದಾತ್ಮಕ ಟ್ವೀಟ್; ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟಿ ರಿಚಾ ಚಡ್ಡಾ

ಗಾಲ್ವಾನ್ ಕುರಿತ ತಮ್ಮ ಟ್ವೀಟ್​ನ್ನು ರಿಚಾ ಚಡ್ಡಾ ಅವರು ಡಿಲೀಟ್ ಮಾಡಿದ್ದಾರೆ. ಜೊತೆಗೆ ಮತ್ತೊಂದು ಟ್ವೀಟ್​ ಮಾಡುವ ಮೂಲಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ಗಾಲ್ವಾನ್ ಕುರಿತು ವಿವಾದಾತ್ಮಕ ಟ್ವೀಟ್; ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟಿ ರಿಚಾ ಚಡ್ಡಾ
Richa Chadha
TV9 Web
| Edited By: |

Updated on:Nov 25, 2022 | 7:14 AM

Share

ಪಾಕ್​​ ಆಕ್ರಮಿತ ಕಾಶ್ಮೀರ ವಶಕ್ಕೆ ಸೇನೆ ಸಿದ್ಧವಾಗಿದೆ ಎಂಬ ಸೇನಾ ಕಮಾಂಡರ್​ ಲೆಫ್ಟಿನೆಂಟ್​​​ ಜನರಲ್ ಉಪೇಂದ್ರ ದ್ವಿವೇದಿ ಹೇಳಿಕೆ ವಿಚಾರವಾಗಿ ಸೇನೆಯನ್ನು ಅವಮಾನಿಸುವ ರೀತಿಯಲ್ಲಿ ಬಾಲಿವುಡ್​ ನಟಿ ರಿಚಾ ಚಡ್ಡಾ (Richa Chadha) ಟ್ವೀಟ್​ ಒಂದನ್ನು ಮಾಡಿದ್ದರು. “ಗಾಲ್ವಾನ್ ಹಾಯ್ ಎಂದು ಹೇಳುತ್ತಿದೆ ಎಂದು ನಟಿ ರಿಚಾ ಚಡ್ಡಾ ಟ್ವೀಟ್ ಮಾಡಿದ್ದರು. ಇದು ಅವಮಾನಕಾರಿ ಟ್ವೀಟ್ ಆಗಿದ್ದು, ಇದನ್ನು ಆದಷ್ಟು ಬೇಗ ಹಿಂಪಡೆಯಬೇಕು. ನಮ್ಮ ಸಶಸ್ತ್ರ ಪಡೆಗಳನ್ನು ಅವಮಾನಿಸುವುದು ಸಮರ್ಥನೀಯವಲ್ಲ” ಎಂದು ಬಿಜೆಪಿಯ ಮಂಜಿಂದರ್ ಸಿಂಗ್ ಸಿರ್ಸಾ ಟ್ವೀಟ್ ಮಾಡಿದ್ದರು. ಭಾರತೀಯ ಸೇನೆಯನ್ನು (Indian Army) ಅವಮಾನಿಸಿದ್ದಾರೆ ಎಂದು ರಿಚಾ ಚಡ್ಡಾ ಭಾರೀ ಟೀಕೆಗೆ ಗುರಿಯಾಗಿದ್ದರು.

ರಿಚಾ ಚಡ್ಡಾ ಟ್ವೀಟ್​ಗೆ ನಟ ಅಕ್ಷಯ್​ ಕುಮಾರ್ ಕಿಡಿ

ರಿಚಾ ಚಡ್ಡಾ ಟ್ವೀಟ್ ಗಮನಿಸಿದ ನಟ ಅಕ್ಷಯ್​ ಕುಮಾರ್​ ಕೂಡ ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ. ರಿಚಾ ಚಡ್ಡಾ ಟ್ವೀಟ್​ನ್ನು ರೀ ಟ್ವೀಟ್​ ಮಾಡಿ, ‘ಇದನ್ನು ನೋಡಿ ತುಂಬಾ ನೋವಾಯಿತು. ನಮ್ಮ ಸೇನಾಪಡೆಗಳಿಗೆ ಎಂದಿಗೂ ನಾವು ಕೃತಘ್ನರಾಗಬಾರದು. ಅವರು ಇರುವುದರಿಂದಲೇ ನಾವು ಇರೋದು’ ಎಂದು ಖಡಕ್​ ಆಗಿ ಹೇಳಿದ್ದಾರೆ. ಅದೇ ರೀತಿಯಾಗಿ ಸಿನಿಮಾ ನಿರ್ಮಾಪಕರಾದ ಅಶೋಕ್​ ಪಂಡಿತ್​ ಅವರು ನಟಿ ವಿರುದ್ಧ ಗುರುವಾರ ಮುಂಬೈನ ಜುಹು ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ. ‘ನೀವು ಸೆಲೆಬ್ರಿಟಿ ಎಂಬ ಮಾತ್ರಕ್ಕೆ ಸೈನಿಕರನ್ನು ಅಪಹಾಸ್ಯ ಮಾಡಬಾರದು. ಅವರು ದೇಶವನ್ನು ಕಾಯುತ್ತಿರುವುದರಿಂದಲೇ ನಾವು ಇಲ್ಲಿ ಬದುಕಿದ್ದೇವೆ’ ಎಂದು ಅಶೋಕ್​ ಪಂಡಿತ್ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಈ ವಿಚಾರ ಭುಗಿಲ್ಲೆಳುತಿದ್ದಂತೆ ಎಚ್ಚೆತ್ತುಕೊಂಡ ರಿಚಾ ಚಡ್ಡಾ ತಪ್ಪಿನ ಅರಿವಾಗಿ ತಮ್ಮ ಟ್ವೀಟ್​ನ್ನು ನಟಿ ರಿಚಾ ಚಡ್ಡಾ ಡಿಲೀಟ್ ಮಾಡಿದ್ದಾರೆ.

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟಿ ರಿಚಾ ಚಡ್ಡಾ

ಪ್ರಕರಣ ತೀವ್ರವಾಗುತ್ತಿದ್ದಂತೆ ಎಚ್ಚೆತ್ತ ರಿಚಾ ಚಡ್ಡಾ ಅವರು ತಮ್ಮ ಟ್ವೀಟ್​ನ್ನು ಡಿಲೀಟ್ ಮಾಡಿದ್ದಾರೆ. ಜೊತೆಗೆ ಮತ್ತೊಂದು ಟ್ವೀಟ್​ ಮಾಡುವ ಮೂಲಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ‘ಉದ್ದೇಶಪೂರ್ವಕವಾಗಿ ಪೋಸ್ಟ್​​​ ಮಾಡಿರಲಿಲ್ಲವಾದರೂ, ವಿವಾದಕ್ಕೆ ಕಾರಣವಾದ ಆ ಮೂರು ಪದಗಳಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ. ಸೇನೆಯಲ್ಲಿರುವ ಪ್ರತಿಯೊಬ್ಬರ ಕುರಿತು ನನಗೆ ಗೌರವವಿದೆ. ನನ್ನ ಸ್ವಂತ ತಾತ ಕೂಡ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದು, ಅವರು 1960 ರ ದಶಕದಲ್ಲಿ ಇಂಡೋ-ಚೀನಾ ಯುದ್ಧದಲ್ಲಿ ಅವರ ಕಾಲಿಗೆ ಬುಲೆಟ್ ಬಿದ್ದಿತ್ತು. ನನ್ನ ಮಾವ ಕೂಡ ಸೇನೆಯ ಭಾಗವಾಗಿದ್ದರು. ಹೀಗಾಗಿ ಸೇನೆಯನ್ನು ನೋಯಿಸುವ ಯಾವ ಉದ್ದೇಶವೂ ಇರಲಿಲ್ಲ’ ಎಂದು ರಿಚಾ ಚಡ್ಡಾ ಟ್ವೀಟ್​ ಮೂಲಕ ಕ್ಷಮೆ ಕೇಳಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:01 pm, Thu, 24 November 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ