AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾಗೆ ಏಕೆ ಹೀಗೆಲ್ಲ ಆಗುತ್ತೆ? ಅವರ ಬಗ್ಗೆ ಹುಟ್ಟಿದ ವದಂತಿಗಳು ಒಂದೆರಡಲ್ಲ

ನಟಿ ಸಮಂತಾ ವಿಚ್ಛೇದನದ ಬಳಿಕ, ಸಿನಿಮಾ ಆಯ್ತು, ತಮ್ಮ ವೈಯಕ್ತಿಕ ಫಿಟ್​ನೆಸ್ ಆಯ್ತು ಎಂದು ಆರಾಮದಿಂದ ಇದ್ದಾರೆ. ಆದರೆ ಒಂದಲ್ಲ ಒಂದು ವಿವಾದಗಳು ಅವರನ್ನು ಅರಸಿ ಬರುತ್ತಿವೆ. ಸಮಂತಾ ಸುತ್ತ ಸುತ್ತಿಕೊಂಡ ಕೆಲವ ವಿವಾದಗಳ ಇಣುಕು ನೋಟ ಇಲ್ಲಿದೆ.

ಸಮಂತಾಗೆ ಏಕೆ ಹೀಗೆಲ್ಲ ಆಗುತ್ತೆ? ಅವರ ಬಗ್ಗೆ ಹುಟ್ಟಿದ ವದಂತಿಗಳು ಒಂದೆರಡಲ್ಲ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 03, 2024 | 7:05 PM

Share

ನಟಿ ಸಮಂತಾ ರುತ್ ಪ್ರಭು ಅವರು ಪ್ರತಿಭಾನ್ವಿತ ನಟಿ ಅನ್ನೋದು ಎಲ್ಲರಿಗೂ ಗೊತ್ತು. ಅವರು ತೆಲುಗು ಇಂಡಸ್ಟ್ರಿಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಹೆಸರನ್ನು ಕೆಲವರು ತಪ್ಪಾದ ಕಾರಣಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದೇ ಹೇಳಬಹುದು. ‘ಯೇ ಮಾಯಾ ಚೇಸಾವೆ’, ‘ಈಗ’, ‘ರಂಗಸ್ಥಲಂ’ ಸೇರಿದಂತೆ ಅನೇಕ ಯಶಸ್ಚಿ ಚಿತ್ರಗಳನ್ನು ಕೊಟ್ಟಿರುವ ಅವರ ವಿರುದ್ಧ ಈಗ ಗಂಭೀರ ವದಂತಿ ಒಂದು ಹುಟ್ಟಿಕೊಂಡಿದೆ. ಅವರಿಗೆ ಈ ರೀತಿ ಆಗುತ್ತಿರೋದು ಇದೇ ಮೊದಲೇನು ಅಲ್ಲ.

ಹೊಸ ವದಂತಿ

‘ನಾಗ ಚೈತನ್ಯ ಮತ್ತು ಸಮಂತಾ ವಿಚ್ಛೇದನ ಪಡೆಯಲು ಕೆ.ಟಿ. ರಾಮ ರಾವ್’ ಕಾರಣ ಎಂದು ಸುರೇಖಾ ಹೇಳಿಕೆ ಕೊಟ್ಟಿದ್ದಾರೆ. ನಾಗಾರ್ಜುನಗೆ ಸೇರಿದ ಕನ್ವೆನ್ಷನ್ನ ಹಾಲ್ನ ಒಡೆಯಬಾರದು ಎಂದರೆ ಸಮಂತಾನ ನನ್ನ ಬಳಿ ಕಳಿಸಿ ಅಂತ ನಾಗಾರ್ಜುನಗೆ ಕೆ.ಟಿ. ರಾಮ ರಾವ್ ಹೇಳಿದ್ದರು. ರಾಮ್ ರಾವ್ ಬಳಿ ಹೋಗುವಂತೆ ನಾಗಾರ್ಜುನ ಸಮಂತಾಗೆ ಒತ್ತಾಯ ಕೂಡ ಮಾಡಿದ್ದರು.ಆದರೆ, ಇದನ್ನು ಒಪ್ಪದ ಸಮಂತಾ, ನಾಗ ಚೈತನ್ಯ ಇಂದ ದೂರ ಆದರು’ ಎಂದು ಸುರೇಖಾ ಹೇಳಿಕೆ ಕೊಟ್ಟಿದ್ದಾರೆ.

ಜೀವನಾಂಶ ವಿಚಾರ

ಸಮಂತಾ ಅವರು ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದ ಬಳಿಕ ದೊಡ್ಡ ಮಟ್ಟದ ಜೀವನಾಂಶ ಪಡೆದಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಅದೂ ಬರೋಬ್ಬರಿ 250 ಕೋಟಿ ರೂಪಾಯಿ ಎನ್ನುವ ವದಂತಿ ಹರಡಿತ್ತು. ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದರು. ‘ನಾನು ಯಾರಿಂದಲೂ ಹಣ ಪಡೆದಿಲ್ಲ’ ಎಂದು ಸಮಂತಾ ಅವರು ‘ಕಾಫಿ ವಿತ್ ಕರಣ್’ ಶೋನಲ್ಲಿ ಸ್ಪಷ್ಟನೆ ನೀಡಿದ್ದರು.

ಬೋಲ್ಡ್ ಪಾತ್ರದಿಂದ

ಸಮಂತಾ ಅವರು ‘ಫ್ಯಾಮಿ ಮ್ಯಾನ್ 2’ ಸರಣಿಯಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. ಅವರು ವ್ಯಕ್ತಿಯೊಬ್ಬರ ಎದುರು ಅರೆಬೆತ್ತಲಾಗುವ ದೃಶ್ಯವೂ ಇತ್ತು. ‘ಈ ರೀತಿಯ ಪಾತ್ರಗಳನ್ನು ಮಾಡದಂತೆ ಸಮಂತಾಗೆ ಒತ್ತಡ ಇತ್ತು. ಆದರೆ, ಇದನ್ನು ಒಪ್ಪದ ಕಾರಣಕ್ಕೆ ವಿಚ್ಛೇದನ ಆಯಿತು’ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಇದರಲ್ಲಿ ಹುರುಳಿರಲಿಲ್ಲ.

ಕಾಯಿಲೆ

ಸಮಂತಾಗೆ ಮಯೋಸೈಟಿಸ್ ಕಾಯಿಲೆ ಕಾಣಿಸಿಕೊಂಡಿತ್ತು. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸಿದ್ದರು. ಈ ಸಮಯದಲ್ಲಿ ಅವರ ವಿರುದ್ಧ ಸಾಕಷ್ಟು ಸುದ್ದಿಗಳು ಹರಿದಾಡಿದ್ದವು. ಅವರು ಚಿತ್ರರಂಗದಿಂದ ದೂರ ಆಗುತ್ತಾರೆ ಎಂದು ಕೂಡ ಹೇಳಲಾಗಿತ್ತು. ಅದ್ಯಾವುದೂ ನಿಜವಾಗಿಲ್ಲ. ‘ಶಾಕುಂತಲಂ’ ರಿಲೀಸ್ ಆದ ಬಳಿಕ ಮಾತನಾಡಿದ್ದ ಚಿಟ್ಟಿ ಬಾಬು, ‘ಸಮಂತಾ ವೃತ್ತಿ ಜೀವನ ಮುಗಿದ ಅಧ್ಯಾಯ. ಸಿಂಪತಿ ಗಿಟ್ಟಿಸಿಕೊಳ್ಳಳು ಈ ರೀತಿ ಅನಾರೋಗ್ಯದ ಕಥೆ ಹೇಳುತ್ತಿದ್ದಾರೆ’ ಎನ್ನುವ ಆರೋಪವನ್ನು ಅವರು ಮಾಡಿದ್ದರು.

ಮಿಸ್ ಲೀಡಿಂಗ್ ಕಾಂಟ್ರೋವರ್ಸಿ

ಸಮಂತಾ ಅವರು ಕೆಲವು ಆರೋಗ್ಯ ಟಿಪ್ಸ್ ಕೊಡುತ್ತಾ ಬಂದಿದ್ದರು. ಈ ವೇಳೆ ಅವರು ವೈರಲ್ ಫಿವರ್ಗೆ ನೀಡಿದ್ದ ಔಷಧ ವಿಷಕಾರಿ ಎಂದು ಕೆಲವರು ಅಭಿಪ್ರಾಯಪಟ್ಟಿದ್ದರು. ಈಗ ಕೊಂಡ ಸುರೇಖಾ ಅವರ ಹೇಳಿಕೆ ಸಂಚಲನ ಸೃಷ್ಟಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು