AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀರೋ ಆಗುತ್ತಿರುವ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್; ಮೊದಲ ಚಿತ್ರದಲ್ಲೇ ಭರ್ಜರಿ ಆ್ಯಕ್ಷನ್

ಬಹುತಾರಾಗಣದ ‘ಕೂಲಿ’ ಸಿನಿಮಾಗೆ ನಿರ್ದೇಶನ ಮಾಡುತ್ತಿರುವ ಲೋಕೇಶ್ ಕನಗರಾಜ್ ಅವರು ಹೀರೋ ಆಗುತ್ತಿದ್ದಾರೆ. ಅವರು ನಟಿಸಲಿರುವ ಹೊಸ ಸಿನಿಮಾಗೆ ‘ಕ್ಯಾಪ್ಟನ್ ಮಿಲ್ಲರ್’ ಖ್ಯಾತಿಯ ಅರುಣ್ ಮಾದೇಶ್ವರನ್ ನಿರ್ದೇಶನ ಮಾಡಲಿದ್ದಾರೆ. ಲೋಕೇಶ್ ನಟಿಸಲಿರುವ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದ್ದು, ಅದಕ್ಕಾಗಿ ಅವರು ಮಾರ್ಷಲ್ ಆರ್ಟ್ಸ್ ಕಲಿಯುತ್ತಿದ್ದಾರೆ.

ಹೀರೋ ಆಗುತ್ತಿರುವ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್; ಮೊದಲ ಚಿತ್ರದಲ್ಲೇ ಭರ್ಜರಿ ಆ್ಯಕ್ಷನ್
Lokesh Kanagaraj
TV9 Web
| Edited By: |

Updated on: Jun 15, 2025 | 8:10 AM

Share

ಮೊದಲು ನಿರ್ದೇಶಕರಾಗಿ ಯಶಸ್ಸು ಕಂಡು, ನಂತರ ಹೀರೋ ಆಗಿ ಯಶಸ್ಸು ಪಡೆದ ಅನೇಕರು ಇದ್ದಾರೆ. ಅದಕ್ಕೆ ಉಪೇಂದ್ರ ಅವರಿಗಿಂತ ಬೆಸ್ಟ್ ಉದಾಹರಣೆ ಬೇರೊಬ್ಬರಿಲ್ಲ. ಅದೇ ರೀತಿ ಈಗ ಕಾಲಿವುಡ್​ನ (Kollywood) ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ಕೂಡ ಹೀರೋ ಆಗಲು ಹೊರಟಿದ್ದಾರೆ. ನಿರ್ದೇಶಕನಾಗಿ ಲೋಕೇಶ್ ಕನಗರಾಜ್ (Lokesh Kanagaraj) ಅವರಿಗೆ ಸಖತ್ ಬೇಡಿಕೆ ಇದೆ. ಸ್ಟಾರ್ ನಟರ ಸಿನಿಮಾಗಳಿಗೆ ಅವರು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಅದರ ನಡುವೆ ಅವರಿಗೆ ಹೀರೋ ಆಗುವ ಅವಕಾಶ ಸಿಕ್ಕಿದೆ. ಮೊದಲ ಸಿನಿಮಾಗಾಗಿ ಅವರು ಮಾರ್ಷಲ್ ಆರ್ಟ್ಸ್​ (Martial Arts) ಕಲಿಯುತ್ತಿದ್ದಾರೆ ಎಂಬುದು ವಿಶೇಷ.

ತಮಿಳು ಚಿತ್ರರಂಗದಲ್ಲಿ ಲೋಕೇಶ್ ಕನಗರಾಜ್ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಕಾರ್ತಿ ನಟನೆಯ ಕೈದಿ, ಕಮಲ್ ಹಾಸನ್ ಅಭಿನಯದ ‘ವಿಕ್ರಮ್’ ಸಿನಿಮಾಗಳ ಮೂಲಕ ಲೋಕೇಶ್ ಕನಗರಾಜ್ ಅವರ ಖ್ಯಾತಿ ಹೆಚ್ಚಿದೆ. ಸದ್ಯಕ್ಕೆ ಅವರು ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ನಿರ್ದೇಶಕನಾಗಿ ಇಷ್ಟೆಲ್ಲ ಬ್ಯುಸಿ ಆಗಿರುವ ಅವರಿಗೆ ಹೀರೋ ಆಗುವ ಆಸೆ ಚಿಗುರಿದೆ.

‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾಗೆ ನಿರ್ದೇಶನ ಮಾಡಿದ್ದ ಅರುಣ್ ಮಾದೇಶ್ವರನ್ ಅವರು ಹೊಸ ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರದಲ್ಲಿ ಲೋಕೇಶ್ ಕನಗರಾಜ್ ಹೀರೋ ಆಗಲಿದ್ದಾರೆ. ಇದರಲ್ಲಿ ಭರ್ಜರಿ ಆ್ಯಕ್ಷನ್ ಸನ್ನಿವೇಶಗಳು ಇರಲಿವೆ. ಅದಕ್ಕಾಗಿ ಲೋಕೇಶ್ ಕನಗರಾಜ್ ಅವರು ಈಗಾಗಲೇ ಮಾರ್ಷಲ್ ಆರ್ಟ್​ ತರಬೇತಿ ಪಡೆಯುಲಿದ್ದಾರೆ. ತರಬೇತಿ ಪಡೆಯಲು ಅವರು ಥಾಯ್ಲೆಂಡ್​ಗೆ ಹೋಗಲಿದ್ದಾರೆ.

ಇದನ್ನೂ ಓದಿ
Image
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿಕೆ, ನಟ ಜಗ್ಗೇಶ್​ರಿಂದ ಪಾಠ
Image
ರಾಜ್ಯಸಭೆಗೆ ಕಮಲ್ ಹಾಸನ್; ಮೇಲ್ಮನೆ ಪ್ರವೇಶಕ್ಕೆ ನಾಮ ನಿರ್ದೇಶನ
Image
ಕಮಲ್ ಹಾಸನ್ ವಿವಾದ: ಕನ್ನಡಿಗರ ಕೆರಳಿಸಿದ ನಟನ​ ಚಿತ್ರಕ್ಕೆ ಸಂಕಷ್ಟ
Image
ಸೋನು ನಿಗಮ್ ಬೆನ್ನಲ್ಲೇ ಕಮಲ್ ಹಾಸನ್ ವಿವಾದ: ಕೆರಳಿ ಕೆಂಡವಾದ ಕನ್ನಡಿಗರು

ಲೋಕೇಶ್ ಕನಗರಾಜ್ ನಿರ್ದೇಶನ ಮಾಡಲಿರುವ ಸಿನಿಮಾಗಳಲ್ಲಿ ಆ್ಯಕ್ಷನ್ ಅಬ್ಬರ ಇರುತ್ತದೆ. ಈಗ ಅವರ ನಟನೆಯ ಸಿನಿಮಾದಲ್ಲಿ ಕೂಡ ಪ್ರೇಕ್ಷಕರು ಅದನ್ನು ನಿರೀಕ್ಷಿಸಬಹುದು. ಹೀರೋ ಆಗಿ ಅವರನ್ನು ಹೊಸ ಅವತಾರದಲ್ಲಿ ನೋಡಲು ಫ್ಯಾನ್ಸ್ ಕಾತರರಾಗಿದ್ದಾರೆ. ಈ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

ಇದನ್ನೂ ಓದಿ: ಲೋಕೇಶ್ ಕನಗರಾಜ್ ಜೊತೆಗಿನ ಸಿನಿಮಾ ಬಗ್ಗೆ ಆಮಿರ್ ಮಾತು

ಹೀರೋ ಆಗುತ್ತಿದ್ದರೂ ಕೂಡ ಲೋಕೇಶ್ ಅವರಿಗೆ ನಿರ್ದೇಶನದಲ್ಲಿ ಕೈತುಂಬ ಆಫರ್​ಗಳಿವೆ. ಈಗ ಅವರು ರಜನಿಕಾಂತ್ ನಟನೆಯ ‘ಕೂಲಿ’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಆ ಬಳಿಕ ‘ಕೈದಿ 2’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಲಿದ್ದಾರೆ. ನಂತರ ಆಮಿರ್ ಖಾನ್ ನಟಿಸಲಿರುವ ಸೂಪರ್​ ಹೀರೋ ಸಿನಿಮಾವನ್ನು ಲೋಕೇಶ್ ಕನಗರಾಜ್ ನಿರ್ದೇಶಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ