AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನೀಕಾಂತ್ ಮತ್ತು ನಾಗಾರ್ಜುನ ಅಭಿಮಾನಿಗಳ ನಡುವೆ ಶುರು ಯುದ್ಧ

Akkineni Nagarjuna-Rajinikanth: ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾ ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ರಜನೀ ಜೊತೆಗೆ ಆಮಿರ್ ಖಾನ್, ಉಪೇಂದ್ರ ಮತ್ತು ನಾಗಾರ್ಜುನ ಸಹ ನಟಿಸಿದ್ದಾರೆ. ಸಿನಿಮಾದ ಬಹಿರಂಗ ಪ್ರಚಾರ ಕೆಲವೇ ದಿನಗಳಲ್ಲಿ ಪ್ರಾರಂಭ ಆಗಲಿದೆ. ಇದೀಗ ನಟ ನಾಗಾರ್ಜುನ ಹಾಗೂ ರಜನೀಕಾಂತ್ ಅಭಿಮಾನಿಗಳ ನಡುವೆ ಫ್ಯಾನ್ಸ್ ವಾರ್ ಆರಂಭವಾಗಿದೆ.

ರಜನೀಕಾಂತ್ ಮತ್ತು ನಾಗಾರ್ಜುನ ಅಭಿಮಾನಿಗಳ ನಡುವೆ ಶುರು ಯುದ್ಧ
Nagarjuna Rajini
ಮಂಜುನಾಥ ಸಿ.
|

Updated on: Jun 26, 2025 | 2:44 PM

Share

ರಜನೀಕಾಂತ್ (Rajinikanth) ನಟನೆಯ ‘ಕೂಲಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಸಿನಿಮಾ ಆಗಸ್ಟ್ 14 ರಂದು ತೆರೆಗೆ ಬರಲಿದ್ದು, ಸಿನಿಮಾ ಕುರಿತಂತೆ ಪ್ರಚಾರ ಈಗಾಗಲೇ ಶುರುವಾಗಿದೆ. ಕೆಲ ದಿನಗಳ ಹಿಂದಷ್ಟೆ ಸಿನಿಮಾದ ಮಾಸ್ ಹಾಡೊಂದು ಬಿಡುಗಡೆ ಆಗಿದ್ದು, ಅಭಿಮಾನಿಗಳ ಗಮನ ಸೆಳೆದಿದೆ. ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ತೆಲುಗಿನ ಸ್ಟಾರ್ ನಟ ನಾಗಾರ್ಜುನ, ಬಾಲಿವುಡ್ ನಟ ಆಮಿರ್ ಖಾನ್ ಹಾಗೂ ಕನ್ನಡದ ನಟ ಉಪೇಂದ್ರ ನಟಿಸಿದ್ದಾರೆ. ಸಿನಿಮಾದ ಪ್ರಚಾರ ಪ್ರಾರಂಭವಾಗುತ್ತಿರುವ ಸಮಯದಲ್ಲಿ ನಾಗಾರ್ಜುನ ಹಾಗೂ ರಜನೀಕಾಂತ್ ಅಭಿಮಾನಿಗಳ ನಡುವೆ ಫ್ಯಾನ್ಸ್ ವಾರ್ ಶುರುವಾಗಿದೆ.

‘ಕೂಲಿ’ ಸಿನಿಮಾದ ತೆಲುಗು ಡಬ್ಬಿಂಗ್ ಮತ್ತು ಆಂಧ್ರ-ತೆಲಂಗಾಣ ವಿತರಣೆ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟ ಆಗಿದೆಯಂತೆ. ತಮಿಳಿನ ಇನ್ಯಾವುದೇ ಸಿನಿಮಾಗಳ ತೆಲುಗು ಡಬ್ಬಿಂಗ್ ಹಕ್ಕು ಇಷ್ಟು ದೊಡ್ಡ ಮೊತ್ತಕ್ಕೆ ಈ ವರೆಗೆ ಮಾರಾಟ ಆಗಿಲ್ಲವಂತೆ. ಇದಕ್ಕೆ ನಾಗಾರ್ಜುನ ನಟಿಸಿರುವುದೇ ಕಾರಣ ಎಂದು ನಾಗಾರ್ಜುನ ಅಭಿಮಾನಿಗಳು ಎದೆ ತಟ್ಟಿಕೊಂಡಿದ್ದಾರೆ. ಆದರೆ ಇದು ರಜನೀಕಾಂತ್ ಅಭಿಮಾನಿಗಳ ಅಸಹನೆಗೆ ಕಾರಣ ಆಗಿದೆ.

ನಾಗಾರ್ಜುನ ಇರುವ ಕಾರಣಕ್ಕೆ ತೆಲುಗು ರಾಜ್ಯಗಳಲ್ಲಿ ಸಿನಿಮಾಕ್ಕೆ ಬೇಡಿಕೆ ಹೆಚ್ಚಾಗಿದೆ ಎಂದು ನಾಗಾರ್ಜುನ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಇದನ್ನು ಸಹಿಸದ ರಜನೀಕಾಂತ್ ಅಭಿಮಾನಿಗಳು, ಈ ಹಿಂದೆ ನಾಗಾರ್ಜುನ ಸೋಲೊ ಹೀರೋ ಆಗಿ ನಟಿಸಿದ್ದ ಸಿನಿಮಾಗಳ ಕಳಪೆ ಪ್ರದರ್ಶನದ ಮಾಹಿತಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದು, ‘ನಿಮ್ಮ ಹೀರೋ ಮೌಲ್ಯ ಇಷ್ಟೆ’ ಎಂದು ಅಣಕಿಸಿದ್ದಾರೆ. ರಜನೀಕಾಂತ್ ಸಿನಿಮಾ ಆಗಿರುವ ಕಾರಣಕ್ಕೆ ಎಲ್ಲ ರಾಜ್ಯಗಳಲ್ಲಿಯೂ ಸಿನಿಮಾಕ್ಕೆ ಬೇಡಿಕೆ ಇದೆ, ಬೇರೆ ನಟರು ನಟಿಸಿದ್ದಾರೆ ಎಂಬ ಕಾರಣಕ್ಕೆ ಅಲ್ಲ ಎಂದು ಅಹಂ ಪ್ರದರ್ಶಿಸಿದ್ದಾರೆ.

ಇದನ್ನೂ ಓದಿ:ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ

ನಾಗಾರ್ಜುನ ಅಭಿಮಾನಿಗಳು ಸಹ ರಜನೀಕಾಂತ್ ಅವರ ‘ಲಾಲ್ ಸಲಾಂ’ ಇನ್ನಿತರೆ ಸೋತ ಸಿನಿಮಾಗಳ ಕಲೆಕ್ಷನ್ ಮಾಹಿತಿಯನ್ನು ಹಂಚಿಕೊಂಡು ಎದುರುತ್ತರ ಕೊಡುತ್ತಿದ್ದಾರೆ. ಅಂದಹಾಗೆ, ಧನುಶ್ ಜೊತೆಗೆ ನಾಗಾರ್ಜುನ ನಟಿಸಿರುವ ‘ಕುಬೇರ’ ಸಿನಿಮಾ ನೂರು ಕೋಟಿ ಕಲೆಕ್ಷನ್ ದಾಟಿದ್ದು, ಈ ಸಿನಿಮಾ ತೆಲುಗು ರಾಜ್ಯಗಳಲ್ಲಿ ದೊಡ್ಡ ಹಿಟ್ ಅಗಿದೆ. ಆದರೆ ಧನುಶ್ ಇದ್ದ ಹೊರತಾಗಿಯೂ ತಮಿಳುನಾಡಿನಲ್ಲಿ ಒಳ್ಳೆಯ ಪ್ರದರ್ಶನ ತೋರಿಲ್ಲ. ‘ಕುಬೇರ’ ಸಿನಿಮಾ ಸಹ ನಾಗಾರ್ಜುನ ಕಾರಣಕ್ಕೆ ಹಿಟ್ ಆಗಿದೆ ಎಂದು ಅಭಿಮಾನಿಗಳು ವಾದಿಸಿದ್ದಾರೆ.

ಅಂದಹಾಗೆ ‘ಕೂಲಿ’ ಸಿನಿಮಾ ಆಗಸ್ಟ್ 14 ರಂದು ಬಿಡುಗಡೆ ಆಗಲಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಲೋಕೇಶ್ ಕನಗರಾಜ್ ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ಆಮಿರ್ ಖಾನ್, ನಾಗಾರ್ಜುನ ಮತ್ತು ಉಪೇಂದ್ರ ನಟಿಸಿದ್ದಾರೆ. ಸಿನಿಮಾಕ್ಕೆ ಅನಿರುದ್ಧ್ ರವಿಚಂದ್ರನ್ ಸಂಗೀತ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ