AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ವರ್ಷ ಹಳೆಯ ಪ್ರಭಾಸ್ ಸಿನಿಮಾ ಮೇಲೆ ಕೇಸು, ಸುಪ್ರೀಂನಿಂದ ತಾತ್ಕಾಲಿಕ ರಿಲೀಫ್

Prabhas Movies: ಪ್ರಭಾಸ್ ನಟನೆಯ 14 ವರ್ಷ ಹಳೆಯ ಸಿನಿಮಾದ ವಿರುದ್ಧ ದೂರೊಂದು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಸಿಟಿ ಸಿವಿಲ್ ನ್ಯಾಯಾಲಯ ಚಿತ್ರದ ನಿರ್ಮಾಪಕರ ವಿರುದ್ಧ ಕ್ರಮಕ್ಕೆ ಸೂಚಿಸಿದೆ. ಅಂದಹಾಗೆ ಯಾವುದು ಆ ಸಿನಿಮಾ? ಯಾರು ಪ್ರಕರಣ ದಾಖಲಿಸಿದ್ದರು? ಪ್ರಕರಣ ದಾಖಲಿಸಿದ್ದು ಏಕೆ? ಈಗ ಪ್ರಕರಣ ಏನಾಯ್ತು? ಇಲ್ಲಿದೆ ಸಂಪೂರ್ಣ ಮಾಹಿತಿ...

14 ವರ್ಷ ಹಳೆಯ ಪ್ರಭಾಸ್ ಸಿನಿಮಾ ಮೇಲೆ ಕೇಸು, ಸುಪ್ರೀಂನಿಂದ ತಾತ್ಕಾಲಿಕ ರಿಲೀಫ್
Prabhas
Follow us
ಮಂಜುನಾಥ ಸಿ.
|

Updated on: Feb 25, 2025 | 7:06 PM

ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ದಿಲ್ ರಾಜು ಟೈಂ ಸರಿಯಿಲ್ಲ. ಕಳೆದ ಎರಡು ತಿಂಗಳಲ್ಲಿ ಸಾಕಷ್ಟು ಏಳು ಬೀಳುಗಳನ್ನು ದಿಲ್ ರಾಜು ಕಂಡಿದ್ದಾರೆ. ಕಳೆದ ತಿಂಗಳು ತೆಲಂಗಾಣ ಜನರ ಬಗ್ಗೆ ಆಡಿದ ಮಾತು ವಿವಾದವಾಗಿ ಕ್ಷಮೆ ಕೋರಬೇಕಾಯ್ತು, ಅದಾದ ಬಳಿಕ ಅವರು ಬಂಡವಾಳ ಹೂಡಿದ್ದ ‘ಗೇಮ್ ಚೇಂಜರ್’ ಸಿನಿಮಾ ಫ್ಲಾಪ್ ಆಯ್ತು, ಅವರದ್ದೇ ಮತ್ತೊಂದು ಸಿನಿಮಾ ‘ಸಂಕ್ರಾಂತಿಕಿ ವಸ್ತುನ್ನಾಮ್’ ಹಿಟ್ ಆಯ್ತು. ‘ಗೇಮ್ ಚೇಂಜರ್’ ಸಿನಿಮಾದಲ್ಲಿ ಕೆಲಸ ಮಾಡಿದ ಕೆಲವರು ದಿಲ್ ರಾಜು ಮೇಲೆ ಕೇಸು ದಾಖಲಿಸಿದರು. ದಿಲ್ ರಾಜು, ಮೆಗಾ ಸ್ಟಾರ್ ಅಭಿಮಾನಿಗಳ ಬಗ್ಗೆ ಮಾತನಾಡಿದ್ದು ವಿವಾದವಾಯ್ತು ಇದೆಲ್ಲದರ ನಡುವೆ 14 ವರ್ಷದ ಹಿಂದಿನ ಸಿನಿಮಾ ಮೇಲೆ ಹೂಡಲಾಗಿದ್ದ ಪ್ರಕರಣದಲ್ಲಿ ದಿಲ್ ರಾಜುಗೆ ತಾತ್ಕಾಲಿಕ ರಿಲೀಫ್ ದೊರೆತಿದೆ.

ದಿಲ್ ರಾಜು ನಿರ್ಮಾಣ ಮಾಡಿ ಪ್ರಭಾಸ್, ಕಾಜೊಲ್, ತಾಪ್ಸಿ ಪನ್ನು, ಪ್ರಕಾಶ್ ರೈ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದ ‘ಮಿಸ್ಟರ್ ಪರ್ಫೆಕ್ಟ್’ ಸಿನಿಮಾ 2011 ರಲ್ಲಿ ಬಿಡುಗಡೆ ಆಗಿತ್ತು. ದಶರದ್ ನಿರ್ದೇಶನ ಮಾಡಿದ್ದ ಆ ಸಿನಿಮಾ ಆಗ ಸೂಪರ್ ಹಿಟ್ ಎನಿಸಿಕೊಂಡಿತ್ತು. ಸಿನಿಮಾದ ಹಾಡುಗಳು, ಕಾಮಿಡಿ, ಆಕ್ಷನ್ ಅನ್ನು ಜನ ಮೆಚ್ಚಿಕೊಂಡಿದ್ದರು. ಆದರೆ ಸಿನಿಮಾ ಬಿಡುಗಡೆ ಆಗಿ ಆರೇಳು ವರ್ಷದ ಬಳಿಕ ಅಂದರೆ 2017 ರಲ್ಲಿ ಸಿನಿಮಾದ ಮೇಲೆ ಕೃತಿ ಚೌರ್ಯದ ಆರೋಪ ಹೊರಿಸಲಾಯ್ತು.

ಮುಮ್ಮುಡಿ ಶಾಮಲಾ ದೇವಿ ಎಂಬುವರು ‘ಮಿಸ್ಟರ್ ಫರ್ಪೆಕ್ಟ್’ ಸಿನಿಮಾದ ವಿರುದ್ಧ ಕೃತಿಚೌರ್ಯದ ಆರೋಪ ಹೊರಿಸಿ ಸಿಟಿ ಸಿವಿಲ್ ಕೋರ್ಟ್​ನಲ್ಲಿ 2017 ರಲ್ಲಿ ದೂರು ದಾಖಲಿಸಿದ್ದರು. ‘ಮಿಸ್ಟರ್ ಫರ್ಪೆಕ್ಟ್’ ಸಿನಿಮಾ ತಮ್ಮ ರಚನೆಯ ‘ನಾ ಮನಸು ನಿನ್ನು ಕೋರಿ’ ಕತೆ ಆಧರಿಸಿದ್ದಾಗಿದೆ. ತಮ್ಮ ಅನುಮತಿ ಪಡೆಯದೇ ಕತೆಯನ್ನು ಸಿನಿಮಾದಲ್ಲಿ ಬಳಸಿಕೊಳ್ಳಲಾಗಿದೆ ಎಂದು ವಾದ ಮಂಡಿಸಿದ್ದರು. ವಾದ ಆಲಿಸಿದ್ದ ಸಿಟಿ ಸಿವಿಲ್ ಕೋರ್ಟ್ ಇತ್ತೀಚೆಗೆ ನಿರ್ಮಾಪಕ ದಿಲ್ ರಾಜು ವಿರುದ್ಧ ತೀರ್ಪು ನೀಡಿತ್ತು.

ಇದನ್ನೂ ಓದಿ:ತಂದೆ ಮೃತಪಟ್ಟ ನೋವಲ್ಲೂ ಸಹಾಯ ಮಾಡೋದು ಮರೆತಿರಲಿಲ್ಲ ಪ್ರಭಾಸ್  

ಸಿಟಿ ಸಿವಿಲ್ ಕೋರ್ಟ್​ನ ತೀರ್ಪಿನ ವಿರುದ್ಧ ದಿಲ್ ರಾಜು ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸಿಟಿ ಸಿವಿಲ್ ಕೋರ್ಟ್ ನೀಡಿರುವ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದ್ದು, ನಿರ್ಮಾಪಕ ದಿಲ್ ರಾಜು ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ.

ಪ್ರಭಾಸ್ ನಟಿಸಿದ್ದ ‘ಮಿಸ್ಟರ್ ಪರ್ಫೆಕ್ಟ್’ ಸಿನಿಮಾ ವಿದೇಶದಲ್ಲಿ ನೆಲೆಸಿರುವ ಭಾರತೀಯ ಯುವಕನ ಕತೆಯನ್ನು ಒಳಗೊಂಡಿದೆ. ಮದುವೆ, ಕುಟುಂಬ ಇನ್ನಿತರೆ ಕಟ್ಟುಪಾಡುಗಳಿಗೆ ಒಳಗಾಗಲು ಇಷ್ಟವಿಲ್ಲದ ವ್ಯಕ್ತಿಯೊಬ್ಬನೊನ್ನು, ಯುವತಿಯೊಬ್ಬಳು ಹೇಗೆ ಬದಲಾಯಿಸುತ್ತಾಳೆ ಎಂಬುದು ಸಿನಿಮಾದ ಕತೆ. ಸಿನಿಮಾದಲ್ಲಿ ಬಾಲಿವುಡ್ ಬೆಡಗಿ ತಾಪ್ಸಿ ಪನ್ನು ಹಾಗೂ ಕಾಜೊಲ್ ಇಬ್ಬರು ನಾಯಕಿಯರು. ಸಿನಿಮಾಕ್ಕೆ ದೇವಿ ಶ್ರೀ ಪ್ರಸಾದ್ ಸಂಗೀತ ನೀಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ