AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kanupriya Passed Away: ಟಿವಿ ಆ್ಯಂಕರ್​, ಕಿರುತೆರೆ ನಟಿ ಕನುಪ್ರಿಯಾ ಕೊರೊನಾಗೆ ಬಲಿ

Kanupriya Passed Away: ಕೊರೊನಾ ವೈರಸ್ ಭಾರತದಲ್ಲಿ ಮಿತಿ ಮೀರಿ ಹರಡುತ್ತಿದೆ. ಇದರಿಂದ ಚಿತ್ರರಂಗದ ಸಾಕಷ್ಟು ನಿರ್ದೇಶಕರು ಹಾಗೂ ನಟರು ಕೊರೊನಾಗೆ ಬಲಿಯಾಗುತ್ತಿದ್ದಾರೆ.

Kanupriya Passed Away: ಟಿವಿ ಆ್ಯಂಕರ್​, ಕಿರುತೆರೆ ನಟಿ ಕನುಪ್ರಿಯಾ ಕೊರೊನಾಗೆ ಬಲಿ
ಕಣುಪ್ರಿಯಾ
ರಾಜೇಶ್ ದುಗ್ಗುಮನೆ
|

Updated on: May 02, 2021 | 6:47 PM

Share

ಚಿತ್ರರಂಗದ ಸಾಕಷ್ಟು ಜನರನ್ನು ಕೊರೊನಾ ವೈರಸ್ ಬಲಿ ತೆಗೆದುಕೊಳ್ಳುತ್ತಿದೆ. ಈಗ ಕಿರುತೆರೆ ನಟಿ ಹಾಗೂ ದೂರದರ್ಶನ​ ಆ್ಯಂಕರ್​ ಕನುಪ್ರಿಯಾ ಕೊವಿಡ್​ಗೆ ಬಲಿಯಾಗಿದ್ದಾರೆ. ಅವರು ಮೇರಿ ಕಹಾನಿ, ತೆಸು ಕೆ ಫೂಲ್​ ಸೇರಿ ಸಾಕಷ್ಟು ಶೋಗಳನ್ನು ನಡೆಸಿಕೊಟ್ಟಿದ್ದರು. ಬ್ರಹ್ಮ ಕುಮಾರೀಸ್​ ಶೋಗಳನ್ನು ನಡೆಸಿಕೊಡುವ ಮೂಲಕ ಅವರು ಖ್ಯಾತಿ ಹೆಚ್ಚಿಸಿಕೊಂಡಿದ್ದರು.

ಬ್ರಹ್ಮ ಕುಮಾರಿಯ ಸಿಸ್ಟರ್​ ಬಿಕೆ ಶಿವಾನಿ ಅವರು ಟ್ವಿಟರ್​ ಮೂಲಕ ಈ ವಿಚಾರ ಬಹಿರಂಗ ಮಾಡಿದ್ದಾರೆ. ಕನುಪ್ರಿಯಾ ಅವರು ಕೊವಿಡ್​ಗೆ ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಕನುಪ್ರಿಯಾ ಅವರ ಸಾವಿಗೆ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.

ಇತ್ತಿಚೆಗೆ ಕನುಪ್ರಿಯಾ ಅವರಿಗೆ ಕೊವಿಡ್​ ಸೋಂಕು ಅಂಟಿತ್ತು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆ ವೈದ್ಯರು ನೀಡಿದ ಚಿಕಿತ್ಸೆ ಫಲಕಾರಿಯಾಗಿಲ್ಲ. ಪರಿಣಾಮ ಶನಿವಾರ (ಮೇ 2) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕನುಪ್ರಿಯಾ ಕಲಾವಿದೆಯಾಗಿ ಬಣ್ಣದ ಬದುಕು ಆರಂಭಿಸಿದವರು. ಸುಮಾರು 80ಕ್ಕೂ ಅಧಿಕ ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. 50 ಟೆಲಿಫಿಲ್ಮ್​ಗಳಲ್ಲಿ ಬಣ್ಣ ಹಚ್ಚಿದ್ದಾರೆ. ನಂತರ ಅವರು ಆ್ಯಂಕರಿಂಗ್​ ಮೂಲಕ ಎಲ್ಲರ ಗಮನ ಸೆಳೆದರು. ಹೀಗಾಗಿ ಅವರಿಗೆ ನಟಿಸಲು ಸಾಕಷ್ಟು ಆಫರ್​ಗಳು ಬಂದವು.

ಕೊರೊನಾ ವೈರಸ್ ಭಾರತದಲ್ಲಿ ಮಿತಿ ಮೀರಿ ಹರಡುತ್ತಿದೆ. ಇದರಿಂದ ಚಿತ್ರರಂಗದ ಸಾಕಷ್ಟು ನಿರ್ದೇಶಕರು ಹಾಗೂ ನಟರು ಕೊರೊನಾಗೆ ಬಲಿಯಾಗುತ್ತಿದ್ದಾರೆ. ಇದು ಚಿತ್ರರಂಗದ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸುತ್ತಿದೆ.

ಇದನ್ನೂ ಓದಿ: ಖ್ಯಾತ ನಿರ್ದೇಶಕ-ಸಿನಿಮಾಟೋಗ್ರಫರ್ ಕೆ.ವಿ.ಆನಂದ್ ಅವರು ಕೊರೊನಾ ದಿಂದ ನಿಧನರಾಗಿದ್ದಾರೆ

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ