AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lockdown: ಮತ್ತೆ ಪ್ರಸಾರ ಆಗಲಿದೆ ‘ರಾಮಾಯಣ’ ಸೀರಿಯಲ್​! ಹಾಗಾದ್ರೆ ಲಾಕ್​ಡೌನ್​ ಆಗೋದು ಖಚಿತ?

ಕೊರೊನಾ ವೈರಸ್​ ಎರಡನೇ ಅಲೆ ಎಲ್ಲೆಲ್ಲೂ ಜೋರಾಗಿ ಹಬ್ಬುತ್ತಿದೆ. ಜನರಿಗೆ ಮತ್ತೆ ಚಿಂತೆ ಆರಂಭವಾಗಿದೆ. ಲಸಿಕೆ ಬಂದ ನಂತರವೂ ಪರಿಸ್ಥಿತಿ ಕೈ ಮೀರುತ್ತಿರುವುದು ವಿಪರ್ಯಾಸವೇ ಸರಿ. ನಾಳೆ ಏನಾಗುತ್ತದೋ ಎಂಬ ಚಿಂತೆಯಲ್ಲೇ ದಿನ ದೂಡುವಂತಾಗಿದೆ. ದೇಶದೆಲ್ಲೆಡೆ ಮತ್ತೆ ಲಾಕ್​ಡೌನ್​ ಆಗುತ್ತಾ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಲಾಕ್​ಡೌನ್​ ಆಗಬಹುದು ಎಂಬುದಕ್ಕೆ ಸೂಚನೆ ಸಿಗುವ ರೀತಿಯಲ್ಲಿ ಒಂದು ಘಟನೆ ನಡೆದಿದೆ. ಕಳೆದ ವರ್ಷ ಲಾಕ್​ಡೌನ್​ ಆರಂಭ ಆದಾಗ ಹಿಂದಿಯ ರಾಮಾಯಣ ಧಾರಾವಾಹಿಯನ್ನು ಮರುಪ್ರಸಾರ ಮಾಡಲಾಗಿತ್ತು. ಈಗ ಅದೇ ಸ್ಥಿತಿ […]

Lockdown: ಮತ್ತೆ ಪ್ರಸಾರ ಆಗಲಿದೆ ‘ರಾಮಾಯಣ’ ಸೀರಿಯಲ್​! ಹಾಗಾದ್ರೆ ಲಾಕ್​ಡೌನ್​ ಆಗೋದು ಖಚಿತ?
(ರಾಮಾಯಣ ಧಾರಾವಾಹಿ)
ಮದನ್​ ಕುಮಾರ್​
|

Updated on: Apr 16, 2021 | 11:32 AM

Share

ಕೊರೊನಾ ವೈರಸ್​ ಎರಡನೇ ಅಲೆ ಎಲ್ಲೆಲ್ಲೂ ಜೋರಾಗಿ ಹಬ್ಬುತ್ತಿದೆ. ಜನರಿಗೆ ಮತ್ತೆ ಚಿಂತೆ ಆರಂಭವಾಗಿದೆ. ಲಸಿಕೆ ಬಂದ ನಂತರವೂ ಪರಿಸ್ಥಿತಿ ಕೈ ಮೀರುತ್ತಿರುವುದು ವಿಪರ್ಯಾಸವೇ ಸರಿ. ನಾಳೆ ಏನಾಗುತ್ತದೋ ಎಂಬ ಚಿಂತೆಯಲ್ಲೇ ದಿನ ದೂಡುವಂತಾಗಿದೆ. ದೇಶದೆಲ್ಲೆಡೆ ಮತ್ತೆ ಲಾಕ್​ಡೌನ್​ ಆಗುತ್ತಾ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಲಾಕ್​ಡೌನ್​ ಆಗಬಹುದು ಎಂಬುದಕ್ಕೆ ಸೂಚನೆ ಸಿಗುವ ರೀತಿಯಲ್ಲಿ ಒಂದು ಘಟನೆ ನಡೆದಿದೆ. ಕಳೆದ ವರ್ಷ ಲಾಕ್​ಡೌನ್​ ಆರಂಭ ಆದಾಗ ಹಿಂದಿಯ ರಾಮಾಯಣ ಧಾರಾವಾಹಿಯನ್ನು ಮರುಪ್ರಸಾರ ಮಾಡಲಾಗಿತ್ತು. ಈಗ ಅದೇ ಸ್ಥಿತಿ ಮರುಕಳಿಸುವ ಸಾಧ್ಯತೆ ಇದೆ!

ಲಾಕ್​ಡೌನ್​ ಆಗುತ್ತೋ ಇಲ್ಲವೋ ಎಂಬ ಗೊಂದಲ ಕಾಡುತ್ತಿರುವಾಗಲೇ ಈ ವರ್ಷ ಕೂಡ ‘ರಾಮಾಯಣ’ ಧಾರಾವಾಹಿ ಮರು ಪ್ರಸಾರಕ್ಕೆ ಸಜ್ಜಾಗಿದೆ. ಕಳೆದ ವರ್ಷ ಜನರನ್ನು ಮನೆಯೊಳಗೆ ಕೂರಿಸಲು ಮಾರ್ಚ್​ ತಿಂಗಳಿಂದ ದೂರದರ್ಶನ ವಾಹಿನಿಯಲ್ಲಿ ರಾಮಾಯಣ ಸೀರಿಯಲ್​ ಆರಂಭಿಸಲಾಗಿತ್ತು. ಈ ವರ್ಷ ಸ್ಟಾರ್​ ಭಾರತ್​ ವಾಹಿನಿಯಲ್ಲಿ ಮತ್ತೆ ರಾಮಾಯಣ ಪ್ರಸಾರ ಆಗಲಿದೆ. ಈ ಸುದ್ದಿ ಕೇಳಿದವರೆಲ್ಲ ‘ಹಾಗಾದ್ರೆ ಮತ್ತೆ ಲಾಕ್​ಡೌನ್​ ಆಗೋದು ಖಚಿತ’ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

1987ರಲ್ಲಿ ಮೂಡಿಬಂದ ರಾಯಾಯಣ ಧಾರಾವಾಹಿಗೆ ರಮಾನಂದ್​ ಸಾಗರ್​ ನಿರ್ದೇಶನ ಮಾಡಿದ್ದರು. ಅದರಲ್ಲಿ ಸೀತೆ ಪಾತ್ರಕ್ಕೆ ದೀಪಿಕಾ ಚಿಕ್ಲಿಯಾ ಬಣ್ಣ ಹಚ್ಚಿದ್ದರು. ಈಗ ಸ್ಟಾರ್​ ಭಾರತ್​ ವಾಹಿನಿಯಲ್ಲಿ ರಾಮಾಯಣ ಮರುಪ್ರಸಾರ ಆಗಲಿದೆ ಎಂಬ ಸುದ್ದಿಯನ್ನು ದೀಪಿಕಾ ಚಿಕ್ಲಿಯಾ ಹಂಚಿಕೊಂಡಿದ್ದಾರೆ. ‘ಈ ವರ್ಷ ಕೂಡ ರಾಮಾಯಣ ಧಾರಾವಾಹಿ ಕಿರುತೆರೆಯಲ್ಲಿ ಮತ್ತೆ ಬರಲಿದೆ ಎಂದು ವಿಷಯವನ್ನು ಹಂಚಿಕೊಳ್ಳಲು ಎಗ್ಸೈಟ್​​ ಆಗಿದ್ದೇನೆ’ ಎಂದು ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

‘ಕಳೆದ ವರ್ಷ ಲಾಕ್​ಡೌನ್​ನಲ್ಲಿ ರಾಮಾಯಣ ಪ್ರಸಾರವಾಗಿತ್ತು. ಈ ವರ್ಷ ಕೂಡ ಇತಿಹಾಸ ಮರುಕಳಿಸಲಿದೆ ಎನಿಸುತ್ತದೆ’ ಎಂದು ದೀಪಿಕಾ ಊಹೆ ಮಾಡಿದ್ದಾರೆ. ಈ ಧಾರಾವಾಹಿ ನನಗೆ ಮಾತ್ರವಲ್ಲದೆ ಸಾವಿರಾರು ಕುಟುಂಬಗಳ ಜೀವನದ ಭಾಗವೇ ಆಗಿದೆ. ರಾಮಾಯಣ ವೀಕ್ಷಿಸಲು ಪ್ರತಿ ರಾತ್ರಿ 7 ಗಂಟೆಗೆ ಸ್ಟಾರ್​ ಭಾರತ್​ ವಾಹಿನಿಯನ್ನು ನೋಡಿ ಎಂದು ದೀಪಿಕಾ ಬರೆದುಕೊಂಡಿದ್ದಾರೆ.

ರಾಮನಾಗಿ ಅರುಣ್​ ಗೋವಿಲ್​, ಲಕ್ಷ್ಮಣನಾಗಿ ಸುನಿಲ್​ ಲಹರಿ, ರಾವಣನಾಗಿ ಅರವಿಂದ್​ ತ್ರಿವೇದಿ, ಹನುಮಂತನ ಪಾತ್ರದಲ್ಲಿ ಧಾರಾ ಸಿಂಗ್​ ನಟಿಸಿದ್ದ ಈ ಸೀರಿಯಲ್​ ಎಷ್ಟೇ ವರ್ಷ ಕಳೆದರೂ ತನ್ನ ಚಾರ್ಮ್​ ಕಳೆದುಕೊಂಡಿಲ್ಲ. ಹಾಗಾಗಿ ಜನರು ಮತ್ತೆ ಮತ್ತೆ ಇದನ್ನು ಕಣ್ತುಂಬಿಕೊಳ್ಳಲು ಬಯಸುತ್ತಾರೆ. ಧಾರಾವಾಹಿ ಕಥೆ ಹಾಗಿರಲಿ, ಒಂದು ವೇಳೆ ಮತ್ತೆ ಲಾಕ್​ಡೌನ್​ ಆದರೆ ಏನು ಮಾಡೋದು ಎಂದು ಜನಸಾಮಾನ್ಯರು ತಲೆ ಕೆಡಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಲಾಕ್​ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಬಾರದು: ಕಾಂಗ್ರೆಸ್​ ಟ್ವೀಟ್​

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್​ಡೌನ್​ ಬೇಡ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!