AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ಅಮೆರಿಕದಲ್ಲಿ ತಾವು ಸೇಫ್​ ಆಗಿದ್ರೂ ಭಾರತಕ್ಕಾಗಿ ಕಷ್ಟಪಡುತ್ತಿರುವ ಪ್ರಿಯಾಂಕಾ ಚೋಪ್ರಾ

Covid 19: ಪ್ರಿಯಾಂಕಾ ಚೋಪ್ರಾ ಅವರ ಮಾತಿ​ಗೆ ಹಲವರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೇರೆ ಸೆಲೆಬ್ರಿಟಿಗಳು ಹಾಯಾಗಿ ಕಾಲ ಕಳೆಯುತ್ತಿರುವಾಗ ಪ್ರಿಯಾಂಕಾ ಅವರು ಭಾರತದ ಪರವಾಗಿ ನಿಂತು ಮಾತನಾಡುತ್ತಿರುವುದು ಪ್ರಶಂಸೆಗೆ ಪಾತ್ರವಾಗುತ್ತಿದೆ.

Priyanka Chopra: ಅಮೆರಿಕದಲ್ಲಿ ತಾವು ಸೇಫ್​ ಆಗಿದ್ರೂ ಭಾರತಕ್ಕಾಗಿ ಕಷ್ಟಪಡುತ್ತಿರುವ ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ
ಮದನ್​ ಕುಮಾರ್​
| Edited By: |

Updated on:Apr 27, 2021 | 9:51 AM

Share

ಭಾರತದಲ್ಲಿ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿದೆ. ಕೊವಿಡ್​ 2ನೇ ಅಲೆಗೆ ಇಡೀ ದೇಶ ತತ್ತರಿಸುತ್ತಿದೆ. ಜನಸಾಮಾನ್ಯರ ಕಷ್ಟ ಹೇಳತೀರದು. ಸೂಕ್ತ ಕಾಲಕ್ಕೆ ಚಿಕಿತ್ಸೆ, ಆಕ್ಸಿಜನ್​ ಸಿಲಿಂಡರ್​ ಸಿಗದೇ ಒದ್ದಾಡುವಂತಾಗಿದೆ. ಈ ಪರಿಸ್ಥಿತಿಯಲ್ಲಿ ಕೆಲವು ಸೆಲೆಬ್ರಿಟಿಗಳು ಹಾಯಾಗಿ ಇದ್ದಾರೆ. ಕೊವಿಡ್​ ಕಾಟ ಕಡಿಮೆ ಇರುವಂತಹ ದೇಶಗಳಿಗೆ ಹೋಗಿ ರಜೆಯ ಮಜಾ ಸವಿಯುತ್ತಿದ್ದಾರೆ. ಆದರೆ ಅವರೆಲ್ಲರಿಗಿಂತ ಭಿನ್ನವಾಗಿ ನಟಿ ಪ್ರಿಯಾಂಕಾ ಚೋಪ್ರಾ ನಿಂತುಕೊಂಡಿದ್ದಾರೆ.

ಸದ್ಯ ಪ್ರಿಯಾಂಕಾ ಚೋಪ್ರಾ ಅಮೆರಿಕದಲ್ಲಿ ವಾಸವಾಗಿದ್ದಾರೆ. ಗಾಯಕ ನಿಕ್​ ಜೋನಸ್​ ಜೊತೆ ಮದುವೆ ಆದ ಬಳಿಕ ಅವರು ಅಲ್ಲಿಯೇ ಸೆಟ್ಲ್​ ಆಗಿದ್ದಾರೆ. ಸದ್ಯ ಅಮೆರಿಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಸಹ ಮಹಾಮಾರಿಯನ್ನು ಎದುರಿಸಲು ಅಮೆರಿಕ ಸಜ್ಜಾಗಿದೆ. ಹಾಗೇ ನೋಡಿದರೆ ಪ್ರಿಯಾಂಕಾ ಅಲ್ಲಿ ತುಂಬಾ ಸೇಫ್​ ಆಗಿದ್ದಾರೆ. ಆದರೂ ಕೂಡ ಅವರು ಭಾರತದ ಪರವಾಗಿ ಧ್ವನಿ ಎತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕಾಳಜಿ ವ್ಯಕ್ತಪಡಿಸಿದ್ದಾರೆ.

ಕೊರೊನಾ ವ್ಯಾಕ್ಸಿನ್​ಗಳಿಗೆ ತೀವ್ರ ಬೇಡಿಕೆ ಇದೆ. ಅದನ್ನು ಭಾರತಕ್ಕೆ ಕೊಡಿಸಲು ಪ್ರಿಯಾಂಕಾ ಪ್ರಯತ್ನಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್​ ಮಾಡಿದ್ದಾರೆ. ‘ನನ್ನ ಹೃದಯ ಛಿದ್ರವಾಗುತ್ತಿದೆ. ಕೊರೊನಾದಿಂದ ಭಾರತ ಬಳಲುತ್ತಿದೆ. ಆದರೆ ಈ ಸಂದರ್ಭದಲ್ಲಿ ಅಮೆರಿಕ ತನಗೆ ಅವಶ್ಯಕತೆ ಇರುವುದಕ್ಕಿಂತಲೂ 55 ಕೋಟಿ​ ಹೆಚ್ಚುವರಿ ವ್ಯಾಕ್ಸಿನ್​ಗಳನ್ನು ಪಡೆದುಕೊಂಡಿದೆ. ಜಗತ್ತಿನಾದ್ಯಂತ ಆಸ್ಟ್ರಾವೆನೆಕಾ ಹಂಚಿಕೆ ಮಾಡಿದ್ದಕ್ಕೆ ಧನ್ಯವಾದಗಳು. ಆದರೆ ನನ್ನ ದೇಶ ಭಾರತದಲ್ಲಿ ಪರಿಸ್ಥಿತಿ ತುಂಬ ಚಿಂತಾಜನಕ ಆಗಿದೆ. ತುರ್ತಾಗಿ ಭಾರತಕ್ಕೆ ವ್ಯಾಕ್ಸಿನ್​ ನೀಡುತ್ತೀರಾ?’ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್​ ಮತ್ತು ಇತರೆ ಉನ್ನತ ಅಧಿಕಾರಿಗಳಿಗೆ ಪ್ರಿಯಾಂಕಾ ಪ್ರಶ್ನೆ ಮಾಡಿದ್ದಾರೆ.

ಪ್ರಿಯಾಂಕಾ ಅವರ ಈ ಟ್ವೀಟ್​ಗೆ ಹಲವರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೇರೆ ಸೆಲೆಬ್ರಿಟಿಗಳು ಹಾಯಾಗಿ ಕಾಲ ಕಳೆಯುತ್ತಿರುವಾಗ ಪ್ರಿಯಾಂಕಾ ಅವರು ಭಾರತದ ಪರವಾಗಿ ನಿಂತು ಮಾತನಾಡುತ್ತಿರುವುದು ಪ್ರಶಂಸೆಗೆ ಪಾತ್ರವಾಗುತ್ತಿದೆ. ಸ್ವದೇಶದ ಬಗ್ಗೆ ಅವರು ಹೊಂದಿರುವ ಕಾಳಜಿಗೆ ಇಲ್ಲಿನ ಅವರ ಅಭಿಮಾನಿಗಳು ಭೇಷ್​ ಎನ್ನುತ್ತಿದ್ದಾರೆ.

ಆದರೆ ಕೆಲವರು ಅಪಸ್ವರ ಕೂಡ ಎತ್ತಿದ್ದಾರೆ. ‘ನೀವು ಈ ಮಾತನ್ನು ಇನ್ನೂ ಬೇಗ ಹೇಳಬೇಕಿತ್ತು. ಈಗಾಗಲೇ ಪರಿಸ್ಥಿತಿ ಕೈ ಮೀರಿದೆ’ ಎಂದು ಟೀಕಿಸಿದ್ದಾರೆ. ಸದ್ಯ ಪ್ರಿಯಾಂಕಾ ಚೋಪ್ರಾ ಬಾಲಿವುಡ್​ನಿಂದಲೂ ಅಂತರ ಕಾಯ್ದುಕೊಂಡಿದ್ದಾರೆ. ಹಿಂದಿಗಿಂತಲೂ ಹೆಚ್ಚಾಗಿ ಹಾಲಿವುಡ್​ ಸಿನಿಮಾಗಳ ಕಡೆಗೆ ಗಮನ ಹರಿಸಿದ್ದಾರೆ.

ಇದನ್ನೂ ಓದಿ: ಎಲ್ಲೇ ಇದ್ದರೂ ಭಾರತೀಯ ಸಂಸ್ಕೃತಿ ಮರೆಯದ ಪ್ರಿಯಾಂಕಾ ಚೋಪ್ರಾ! ಲಂಡನ್​ನಲ್ಲಿ ದೇಸಿ ಗರ್ಲ್​​ ಹೋಳಿ

ಬಾಲ್ಯದಲ್ಲಿ ಪ್ರಿಯಾಂಕಾ ಚೋಪ್ರಾ ಪಾಲಿಸುತ್ತಿದ್ದ ಧರ್ಮ ಯಾವುದು? ಸಂದರ್ಶನದಲ್ಲಿ ಸತ್ಯ ಬಾಯ್ಬಿಟ್ಟ ನಟಿ

Published On - 8:59 am, Tue, 27 April 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್