AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ಅಮೆರಿಕದಲ್ಲಿ ತಾವು ಸೇಫ್​ ಆಗಿದ್ರೂ ಭಾರತಕ್ಕಾಗಿ ಕಷ್ಟಪಡುತ್ತಿರುವ ಪ್ರಿಯಾಂಕಾ ಚೋಪ್ರಾ

Covid 19: ಪ್ರಿಯಾಂಕಾ ಚೋಪ್ರಾ ಅವರ ಮಾತಿ​ಗೆ ಹಲವರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೇರೆ ಸೆಲೆಬ್ರಿಟಿಗಳು ಹಾಯಾಗಿ ಕಾಲ ಕಳೆಯುತ್ತಿರುವಾಗ ಪ್ರಿಯಾಂಕಾ ಅವರು ಭಾರತದ ಪರವಾಗಿ ನಿಂತು ಮಾತನಾಡುತ್ತಿರುವುದು ಪ್ರಶಂಸೆಗೆ ಪಾತ್ರವಾಗುತ್ತಿದೆ.

Priyanka Chopra: ಅಮೆರಿಕದಲ್ಲಿ ತಾವು ಸೇಫ್​ ಆಗಿದ್ರೂ ಭಾರತಕ್ಕಾಗಿ ಕಷ್ಟಪಡುತ್ತಿರುವ ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ
ಮದನ್​ ಕುಮಾರ್​
| Edited By: |

Updated on:Apr 27, 2021 | 9:51 AM

Share

ಭಾರತದಲ್ಲಿ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿದೆ. ಕೊವಿಡ್​ 2ನೇ ಅಲೆಗೆ ಇಡೀ ದೇಶ ತತ್ತರಿಸುತ್ತಿದೆ. ಜನಸಾಮಾನ್ಯರ ಕಷ್ಟ ಹೇಳತೀರದು. ಸೂಕ್ತ ಕಾಲಕ್ಕೆ ಚಿಕಿತ್ಸೆ, ಆಕ್ಸಿಜನ್​ ಸಿಲಿಂಡರ್​ ಸಿಗದೇ ಒದ್ದಾಡುವಂತಾಗಿದೆ. ಈ ಪರಿಸ್ಥಿತಿಯಲ್ಲಿ ಕೆಲವು ಸೆಲೆಬ್ರಿಟಿಗಳು ಹಾಯಾಗಿ ಇದ್ದಾರೆ. ಕೊವಿಡ್​ ಕಾಟ ಕಡಿಮೆ ಇರುವಂತಹ ದೇಶಗಳಿಗೆ ಹೋಗಿ ರಜೆಯ ಮಜಾ ಸವಿಯುತ್ತಿದ್ದಾರೆ. ಆದರೆ ಅವರೆಲ್ಲರಿಗಿಂತ ಭಿನ್ನವಾಗಿ ನಟಿ ಪ್ರಿಯಾಂಕಾ ಚೋಪ್ರಾ ನಿಂತುಕೊಂಡಿದ್ದಾರೆ.

ಸದ್ಯ ಪ್ರಿಯಾಂಕಾ ಚೋಪ್ರಾ ಅಮೆರಿಕದಲ್ಲಿ ವಾಸವಾಗಿದ್ದಾರೆ. ಗಾಯಕ ನಿಕ್​ ಜೋನಸ್​ ಜೊತೆ ಮದುವೆ ಆದ ಬಳಿಕ ಅವರು ಅಲ್ಲಿಯೇ ಸೆಟ್ಲ್​ ಆಗಿದ್ದಾರೆ. ಸದ್ಯ ಅಮೆರಿಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಸಹ ಮಹಾಮಾರಿಯನ್ನು ಎದುರಿಸಲು ಅಮೆರಿಕ ಸಜ್ಜಾಗಿದೆ. ಹಾಗೇ ನೋಡಿದರೆ ಪ್ರಿಯಾಂಕಾ ಅಲ್ಲಿ ತುಂಬಾ ಸೇಫ್​ ಆಗಿದ್ದಾರೆ. ಆದರೂ ಕೂಡ ಅವರು ಭಾರತದ ಪರವಾಗಿ ಧ್ವನಿ ಎತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕಾಳಜಿ ವ್ಯಕ್ತಪಡಿಸಿದ್ದಾರೆ.

ಕೊರೊನಾ ವ್ಯಾಕ್ಸಿನ್​ಗಳಿಗೆ ತೀವ್ರ ಬೇಡಿಕೆ ಇದೆ. ಅದನ್ನು ಭಾರತಕ್ಕೆ ಕೊಡಿಸಲು ಪ್ರಿಯಾಂಕಾ ಪ್ರಯತ್ನಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್​ ಮಾಡಿದ್ದಾರೆ. ‘ನನ್ನ ಹೃದಯ ಛಿದ್ರವಾಗುತ್ತಿದೆ. ಕೊರೊನಾದಿಂದ ಭಾರತ ಬಳಲುತ್ತಿದೆ. ಆದರೆ ಈ ಸಂದರ್ಭದಲ್ಲಿ ಅಮೆರಿಕ ತನಗೆ ಅವಶ್ಯಕತೆ ಇರುವುದಕ್ಕಿಂತಲೂ 55 ಕೋಟಿ​ ಹೆಚ್ಚುವರಿ ವ್ಯಾಕ್ಸಿನ್​ಗಳನ್ನು ಪಡೆದುಕೊಂಡಿದೆ. ಜಗತ್ತಿನಾದ್ಯಂತ ಆಸ್ಟ್ರಾವೆನೆಕಾ ಹಂಚಿಕೆ ಮಾಡಿದ್ದಕ್ಕೆ ಧನ್ಯವಾದಗಳು. ಆದರೆ ನನ್ನ ದೇಶ ಭಾರತದಲ್ಲಿ ಪರಿಸ್ಥಿತಿ ತುಂಬ ಚಿಂತಾಜನಕ ಆಗಿದೆ. ತುರ್ತಾಗಿ ಭಾರತಕ್ಕೆ ವ್ಯಾಕ್ಸಿನ್​ ನೀಡುತ್ತೀರಾ?’ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್​ ಮತ್ತು ಇತರೆ ಉನ್ನತ ಅಧಿಕಾರಿಗಳಿಗೆ ಪ್ರಿಯಾಂಕಾ ಪ್ರಶ್ನೆ ಮಾಡಿದ್ದಾರೆ.

ಪ್ರಿಯಾಂಕಾ ಅವರ ಈ ಟ್ವೀಟ್​ಗೆ ಹಲವರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೇರೆ ಸೆಲೆಬ್ರಿಟಿಗಳು ಹಾಯಾಗಿ ಕಾಲ ಕಳೆಯುತ್ತಿರುವಾಗ ಪ್ರಿಯಾಂಕಾ ಅವರು ಭಾರತದ ಪರವಾಗಿ ನಿಂತು ಮಾತನಾಡುತ್ತಿರುವುದು ಪ್ರಶಂಸೆಗೆ ಪಾತ್ರವಾಗುತ್ತಿದೆ. ಸ್ವದೇಶದ ಬಗ್ಗೆ ಅವರು ಹೊಂದಿರುವ ಕಾಳಜಿಗೆ ಇಲ್ಲಿನ ಅವರ ಅಭಿಮಾನಿಗಳು ಭೇಷ್​ ಎನ್ನುತ್ತಿದ್ದಾರೆ.

ಆದರೆ ಕೆಲವರು ಅಪಸ್ವರ ಕೂಡ ಎತ್ತಿದ್ದಾರೆ. ‘ನೀವು ಈ ಮಾತನ್ನು ಇನ್ನೂ ಬೇಗ ಹೇಳಬೇಕಿತ್ತು. ಈಗಾಗಲೇ ಪರಿಸ್ಥಿತಿ ಕೈ ಮೀರಿದೆ’ ಎಂದು ಟೀಕಿಸಿದ್ದಾರೆ. ಸದ್ಯ ಪ್ರಿಯಾಂಕಾ ಚೋಪ್ರಾ ಬಾಲಿವುಡ್​ನಿಂದಲೂ ಅಂತರ ಕಾಯ್ದುಕೊಂಡಿದ್ದಾರೆ. ಹಿಂದಿಗಿಂತಲೂ ಹೆಚ್ಚಾಗಿ ಹಾಲಿವುಡ್​ ಸಿನಿಮಾಗಳ ಕಡೆಗೆ ಗಮನ ಹರಿಸಿದ್ದಾರೆ.

ಇದನ್ನೂ ಓದಿ: ಎಲ್ಲೇ ಇದ್ದರೂ ಭಾರತೀಯ ಸಂಸ್ಕೃತಿ ಮರೆಯದ ಪ್ರಿಯಾಂಕಾ ಚೋಪ್ರಾ! ಲಂಡನ್​ನಲ್ಲಿ ದೇಸಿ ಗರ್ಲ್​​ ಹೋಳಿ

ಬಾಲ್ಯದಲ್ಲಿ ಪ್ರಿಯಾಂಕಾ ಚೋಪ್ರಾ ಪಾಲಿಸುತ್ತಿದ್ದ ಧರ್ಮ ಯಾವುದು? ಸಂದರ್ಶನದಲ್ಲಿ ಸತ್ಯ ಬಾಯ್ಬಿಟ್ಟ ನಟಿ

Published On - 8:59 am, Tue, 27 April 21

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್