RRR ಪ್ರೀ-ರಿಲೀಸ್​ ಇವೆಂಟ್​ಗೆ ಕ್ಷಣಗಣನೆ: ಸಿಎಂ, ಶಿವಣ್ಣ ಬರುವ ಈ ಸಮಾರಂಭಕ್ಕೆ ಹೇಗಿದೆ ಭದ್ರತೆ?

RRR Movie Pre-release Event: ಚಿಕ್ಕಬಳ್ಳಾಪುರದ ಅಗಲಗುರ್ಕಿ ಗ್ರಾಮದಲ್ಲಿ RRR ಪ್ರೀ-ರಿಲೀಸ್​ ಇವೆಂಟ್ ನಡೆಯಲಿದೆ. ಪಾಸ್ ಇರುವವರಿಗೆ ಮಾತ್ರ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗುವುದು.

RRR ಪ್ರೀ-ರಿಲೀಸ್​ ಇವೆಂಟ್​ಗೆ ಕ್ಷಣಗಣನೆ: ಸಿಎಂ, ಶಿವಣ್ಣ ಬರುವ ಈ ಸಮಾರಂಭಕ್ಕೆ ಹೇಗಿದೆ ಭದ್ರತೆ?
ಆರ್​ಆರ್​ಆರ್​ ಸಿನಿಮಾ ಪೋಸ್ಟರ್​, ಎಸ್ಪಿ ಜಿ.ಕೆ. ಮಿಥುನ್ ಕುಮಾರ್
Follow us
| Updated By: ಮದನ್​ ಕುಮಾರ್​

Updated on: Mar 19, 2022 | 9:04 AM

ರಾಜಮೌಳಿ (Rajamouli) ನಿರ್ದೇಶನದ ಬಹುನಿರೀಕ್ಷಿತ ‘ಆರ್​ಆರ್​ಆರ್​’ ಚಿತ್ರ (RRR Movie) ಮಾ.25ರಂದು ಅದ್ದೂರಿಯಾಗಿ ತೆರೆಕಾಣಲಿದೆ. ಅದಕ್ಕೂ ಮುನ್ನ ಭರ್ಜರಿಯಾಗಿ ಪ್ರಚಾರ ಮಾಡುವಲ್ಲಿ ಚಿತ್ರತಂಡ ನಿರತವಾಗಿದೆ. ಅದರ ಸಲುವಾಗಿ ಇಂದು (ಮಾ.19) ಕರ್ನಾಟಕದಲ್ಲಿ ‘ಆರ್​ಆರ್​ಆರ್​’ ಪ್ರೀ-ರಿಲೀಸ್​ ಇವೆಂಟ್​ (RRR Movie Pre-release Event) ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ಬೃಹತ್​ ವೇದಿಕೆ ಸಿದ್ಧವಾಗಿದೆ. ದೇಶದ ಅತಿ ದೊಡ್ಡ ಪ್ರೀ-ರಿಲೀಸ್​ ಇವೆಂಟ್​ ಎಂದು ಇದನ್ನು ಕರೆಯಲಾಗುತ್ತಿದೆ. ಕಾರ್ಯಕ್ರಮ ಶುರುವಾಗಲು ಈಗ ಕ್ಷಣಗಣನೆ ಆರಂಭ ಆಗಿದೆ. ನೆರೆ ರಾಜ್ಯಗಳಿಂದಲೂ ಅಭಿಮಾನಿಗಳು ಆಗಮಿಸುತ್ತಿದ್ದಾರೆ. 100 ಎಕರೆ ಜಾಗದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೃಹತ್​ ಎಲ್​ಇಡಿ ಪರದೆಗಳನ್ನು ಅಳವಡಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ಶಿವರಾಜ್​ಕುಮಾರ್​, ಆರೋಗ್ಯ ಸಚಿವ ಡಾ. ಕೆ. ಸುಧಾಕರ್​ ಮುಂತಾದವರು ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ. ನಿರ್ದೇಶಕ ರಾಜಮೌಳಿ, ನಟರಾದ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಸೇರಿದಂತೆ ಅನೇಕರು ವೇದಿಕೆ ಏರಲಿದ್ದಾರೆ. ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ. ಗಣ್ಯಾತಿಗಣ್ಯರು ಭಾಗಿ ಆಗುವ ‘ಆರ್​ಆರ್​ಆರ್​’ ಪ್ರೀ-ರಿಲೀಸ್​ ಇವೆಂಟ್​ಗೆ ಬಿಗಿ ಭದ್ರತೆ ಒದಗಿಸಲಾಗುತ್ತಿದೆ.

‘ಆರ್​ಆರ್​ಆರ್​’ ಚಿತ್ರಕ್ಕೆ ಹಗಲಿರುಳು ಪ್ರಚಾರ:

ಕರ್ನಾಟಕದಲ್ಲಿ ಕೆವಿಎನ್​ ಪ್ರೊಡಕ್ಷನ್​ ಸಂಸ್ಥೆಯು ‘ಆರ್​ಆರ್​ಆರ್​’ ಸಿನಿಮಾದ ವಿತರಣೆ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳ ಬಾಕಿ ಇರುವುದರಿಂದ ಚಿತ್ರತಂಡ ಹಗಲಿರುಳು ಪ್ರಚಾರ ಮಾಡುತ್ತಿದೆ. ಇಂದು ಬೆಂಗಳೂರಿಗೆ ಆಗಮಿಸಲಿರುವ ಚಿತ್ರತಂಡದವರು ಮಧ್ಯಾಹ್ನ ಮಾಧ್ಯಮಗಳಿಗೆ ಸಂದರ್ಶನ ನೀಡಲಿದ್ದಾರೆ. ಸಂಜೆ ನಡೆಯಲಿರುವ ಪ್ರೀ ರಿಲೀಸ್​ ಇವೆಂಟ್​ನಲ್ಲಿ 2 ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ಸಾಧ್ಯತೆ ಇದೆ. ಆ ಕಾರಣದಿಂದ ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ.

ಹೇಗಿದೆ ಪೊಲೀಸ್​ ಬಂದೋಬಸ್ತ್?

ಈ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಚಿಕ್ಕಬಳ್ಳಾಪುರ ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮೂವರು ಎಸ್ಪಿಗಳು ಹಾಗೂ ಓರ್ವ ಎಸ್.ಪಿ. ಮೇಲುಸ್ತುವಾರಿ ನೋಡಿಕೊಳ್ಳಲಿದ್ದಾರೆ. 6 ಡಿವೈಎಸ್​ಪಿಗಳು, 17 ಪೊಲೀಸ್ ಇನ್ಸ್​ಪೆಕ್ಟರ್​ಗಳು ಸೇರಿದಂತೆ ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪಾಸ್ ಇರುವವರಿಗೆ ಮಾತ್ರ ಎಂಟ್ರಿ:

ರಾಷ್ಟ್ರೀಯ ಹೆದ್ದಾರಿ 44ಕ್ಕೆ ಹೊಂದಿಕೊಂಡಿರುವ ಅಗಲಗುರ್ಕಿ ಗ್ರಾಮದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪಾಸ್ ಇರುವವರಿಗೆ ಮಾತ್ರ ಕಾರ್ಯಕ್ರಮಕ್ಕೆ ಎಂಟ್ರಿ ನೀಡಲಾಗುವುದು. 66 ಸಾವಿರ ಖುರ್ಚಿಗಳನ್ನು ಹಾಕಲಾಗಿದೆ. ಅಭಿಮಾನಿಗಳನ್ನು ನಿಯಂತ್ರಿಸಲು ವಿವಿಧ ರೀತಿಯ ಬ್ಯಾರಿಕೇಡ್​ಗಳ ಅಳವಡಿಕೆ ಮಾಡಲಾಗಿದೆ. ವೇದಿಕೆಯಲ್ಲಿ ಬೃಹತ್​ ಎಲ್​ಇಡಿ ಪರದೆ ಹಾಕಲಾಗಿದೆ. 10 ಎಕರೆ ಪ್ರದೇಶದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಪುನೀತ್​ ರಾಜ್​ಕುಮಾರ್​ಗೆ ಚಿತ್ರತಂಡದ ನಮನ:

ಈ ಬೃಹತ್​ ವೇದಿಕೆಯಲ್ಲಿ ನಟ ಪುನೀತ್​ ರಾಜ್​ಕುಮಾರ್​ ಅವರಿಗೆ ಗೌರವ ಸಲ್ಲಿಕೆ ಆಗಲಿದೆ. ಅದಕ್ಕಾಗಿ ಕಾರ್ಯಕ್ರಮದ ಆಯೋಜಕರು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಆ ಕಾರಣದಿಂದ ಅಪ್ಪು ಅಭಿಮಾನಿಗಳು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಅನುಶ್ರೀ, ಅಕುಲ್​ ಬಾಲಾಜಿ, ಸುಮಾ ಅವರು ಈ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ.

‘ಬಾಹುಬಲಿ’ ಚಿತ್ರದ ಯಶಸ್ಸಿನ ಬಳಿಕ ರಾಜಮೌಳಿ ನಿರ್ದೇಶನ ಮಾಡಿರುವ ಸಿನಿಮಾ ಆದ್ದರಿಂದ ಸಹಜವಾಗಿಯೇ ನಿರೀಕ್ಷೆ ಜೋರಾಗಿದೆ. ಕನ್ನಡಕ್ಕೂ ಡಬ್​ ಆಗಿ ‘ಆರ್​ಆರ್​ಆರ್​’ ಚಿತ್ರ ಬಿಡುಗಡೆ ಆಗುತ್ತಿದೆ. ಆ ಕಾರಣಕ್ಕೆ ಕರುನಾಡಿನಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್​ ಇವೆಂಟ್​ ನಡೆಯುತ್ತಿದೆ.

ಇದನ್ನೂ ಓದಿ:

‘ಆರ್​ಆರ್​ಆರ್​’ ನಿರ್ಮಾಪಕನ ಖಾತೆಯಿಂದ ಪ್ರಭಾಸ್​ಗೆ ವರ್ಗಾವಣೆ ಆಯ್ತು 50 ಕೋಟಿ ರೂಪಾಯಿ?  

RRR: ‘ಎತ್ತುವ ಜಂಡಾ’ ಹಾಡಿನ ಮೂಲಕ ಮತ್ತೆ ಅಬ್ಬರಿಸಲು ಸಜ್ಜಾದ ‘ಆರ್​ಆರ್​ಆರ್’​ ಸಿನಿಮಾ

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು