AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗೂಬಾಯಿ ಕಾಠಿಯಾವಾಡಿ ಸಿನಿಮಾಗೆ ಸಂಕಷ್ಟ; ಆಲಿಯಾ, ಬನ್ಸಾಲಿಗೆ ಸಮನ್ಸ್​ ​

ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಚಿತ್ರದ ಟೀಸರ್​ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು.

ಗಂಗೂಬಾಯಿ ಕಾಠಿಯಾವಾಡಿ ಸಿನಿಮಾಗೆ ಸಂಕಷ್ಟ; ಆಲಿಯಾ, ಬನ್ಸಾಲಿಗೆ ಸಮನ್ಸ್​ ​
ಆಲಿಯಾ ಭಟ್​
ರಾಜೇಶ್ ದುಗ್ಗುಮನೆ
|

Updated on:Mar 25, 2021 | 7:38 PM

Share

ಮುಂಬೈ ಮಾಫಿಯಾ ಕ್ವೀನ್​ ಗಂಗುಬಾಯಿ ಕಾಠಿಯಾವಾಡಿ ಜೀವನ ಆಧರಿಸಿ ಸಿದ್ಧಗೊಂಡಿರುವ ಸಿನಿಮಾಗೆ ಈಗ ಸಂಕಷ್ಟ ಎದುರಾಗಿದೆ. ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನ ಇರುವ ಈ ಚಿತ್ರ ತಂಡಕ್ಕೆ ಮುಂಬೈ ಕೋರ್ಟ್​ ಸಮನ್ಸ್​ ಜಾರಿ ಮಾಡಿದೆ. ಇದೇ ಮೇ 21ರಂದು ಬನ್ಸಾಲಿ, ಚಿತ್ರದ ನಟಿ ಆಲಿಯಾ ಭಟ್​ಗೆ ಕೋರ್ಟ್​ಗೆ ಹಾಜರಾಗಲು ಸೂಚಿಸಲಾಗಿದೆ. ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಚಿತ್ರದ ಟೀಸರ್​ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಈಗ ಗಂಗೂಬಾಯಿ ಅವರ ದತ್ತುಪುತ್ರ ಬಾಬುರಾವ್​ ಶಾ ದೂರು ದಾಖಲು ಮಾಡಿದ್ದಾರೆ. ಅಲ್ಲದೆ, ಅವರು ಸಿನಿಮಾ ವಿರುದ್ಧ ಕಿಡಿಕಾರಿದ್ದಾರೆ.

ಈ ಚಿತ್ರದಲ್ಲಿ ಗಂಗೂಬಾಯಿ ಅವರನ್ನು ತಪ್ಪಾಗಿ ತೋರಿಸಲಾಗಿದೆ. ಸಿನಿಮಾದಲ್ಲಿ ತೋರಿಸಲು ಹೊರಟಿರುವ ದೃಶ್ಯಗಳು ವಾಸ್ತವಕ್ಕೆ ದೂರ ಇದ್ದಂತೆ ಕಾಣುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೂರನ್ನು ಸ್ವೀಕರಿಸಿರುವ ಕೋರ್ಟ್​ ಆಲಿಯಾ ಭಟ್​ ಹಾಗೂ ನಿರ್ದೇಶಕ ಸಂಜಯ್​ ಬನ್ಸಾಲಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಜುಲೈ 30ರಂದು ಸಿನಿಮಾ ತೆರೆಗೆ ಬರುತ್ತಿದೆ. ಸದ್ಯ, ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಮಧ್ಯೆ ಚಿತ್ರ ಒಂದಾದ ಮೇಲೆ ಒಂದು ವಿವಾದ ಸೃಷ್ಟಿಸುತ್ತಿರುವುದು ಚಿತ್ರತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ.

ಇತ್ತೀಚೆಗೆ ಆಲಿಯಾ ಭಟ್​ ಜನ್ಮದಿನವನ್ನು ಆಚರಿಸಿಕೊಂಡಿದ್ದರು. ಈ ವೇಳೆ ಫಸ್ಟ್​ಲುಕ್​ ಪೋಸ್ಟರ್​ ಮೂಲಕ ಆಲಿಯಾಗೆ ಆರ್​ಆರ್​ಆರ್​ ತಂಡ ಶುಭಾಶಯ ಕೋರಿತ್ತು. ಸೀರೆ ಮತ್ತು ಆಭರಣ ಧರಿಸಿ ಸಾಂಪ್ರದಾಯಿಕ ಗೆಟಪ್​ನಲ್ಲಿ ಆಲಿಯಾ ಕಾಣಿಸಿಕೊಂಡಿದ್ದು ಸಿನಿರಸಿಕರೆ ಖುಷಿ ನೀಡಿತ್ತು. ಬಾಹುಬಲಿ, ಮಗಧೀರ, ಮುಂತಾದ ಸಿನಿಮಾಗಳಲ್ಲಿ ಮಹಿಳಾ ಪಾತ್ರಗಳನ್ನು ಅದ್ದೂರಿಯಾಗಿ ತೋರಿಸಿದ್ದಾರೆ ರಾಜಮೌಳಿ. ಅವರು ಈಗ ಆರ್​ಆರ್​ಆರ್​ ಚಿತ್ರದಲ್ಲಿ ಆಲಿಯಾರನ್ನು ಹೇಗೆ ತೋರಿಸಬಹುದು ಎನ್ನುವುದು ಸದ್ಯದ ಕುತೂಹಲ.

ಇದನ್ನೂ ಓದಿ: ಆಲಿಯಾ ಭಟ್​ ಜನ್ಮದಿನಕ್ಕೆ RRR ನಿರ್ದೇಶಕ ರಾಜಮೌಳಿ ಕಡೆಯಿಂದ ಭರ್ಜರಿ ಗಿಫ್ಟ್​! ಫ್ಯಾನ್ಸ್​ ಫಿದಾ

Published On - 7:27 pm, Thu, 25 March 21

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು