ಆರ್​ಸಿಬಿ ಘನತೆಗೆ ಧಕ್ಕೆ ತಂದ ‘ಜೈಲರ್’; ಸಿನಿಮಾ ದೃಶ್ಯಕ್ಕೆ ಕತ್ತರಿ ಹಾಕಲು ಕೋರ್ಟ್ ಸೂಚನೆ

ಸಿನಿಮಾದಲ್ಲಿ ಕಥಾ ನಾಯಕನನ್ನು ಬೆನ್ನತ್ತಿ ಬರುವ ಕಾಂಟ್ರ್ಯಾಕ್ಟ್ ಕಿಲ್ಲರ್ ಆರ್​ಸಿಬಿ ಜೆರ್ಸಿ ಧರಿಸಿರುತ್ತಾನೆ. ಜೊತೆಗೆ ಮಹಿಳೆಯ ಬಗ್ಗೆ ಕೆಟ್ಟ ಭಾಷೆ ಪ್ರಯೋಗಿಸುತ್ತಾನೆ. ಈ ದೃಶ್ಯವನ್ನು ಆರ್​ಸಿಬಿಯ ಕಾನೂನು ತಂಡ ಪ್ರಶ್ನೆ ಮಾಡಿತ್ತು. ಈಗ ಎರಡೂ ಕಡೆಯುವರು ಒಂದು ಒಪ್ಪಂದಕ್ಕೆ ಬಂದಿದ್ದು, ಈ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.

ಆರ್​ಸಿಬಿ ಘನತೆಗೆ ಧಕ್ಕೆ ತಂದ ‘ಜೈಲರ್’; ಸಿನಿಮಾ ದೃಶ್ಯಕ್ಕೆ ಕತ್ತರಿ ಹಾಕಲು ಕೋರ್ಟ್ ಸೂಚನೆ
ರಜನಿ-ಜೈಲರ್ ದೃಶ್ಯ
Follow us
|

Updated on: Aug 29, 2023 | 7:14 AM

‘ಜೈಲರ್’ ಸಿನಿಮಾ (Jailer Movie) ದೊಡ್ಡ ಮಟ್ಟದಲ್ಲಿ ಹಿಟ್ ಆಗಿದೆ. ಈ ಚಿತ್ರದ ಕಲೆಕ್ಷನ್ 600 ಕೋಟಿ ರೂಪಾಯಿ ಸಮೀಪಿಸಿದೆ. ಈ ಮಧ್ಯೆ ‘ಜೈಲರ್’ ನಿರ್ಮಾಣ ಮಾಡಿರುವ ಸನ್ ಪಿಕ್ಚರ್ಸ್ ಹಾಗೂ ಐಪಿಎಲ್ ತಂಡ ‘ರಾಯಲ್ ಚಾಲೆಂಜರ್ಸ್​ ಬೆಂಗಳೂರು’ (ಆರ್​ಸಿಬಿ) ಮಧ್ಯೆ ಕಾನೂನು ಸಮರ ನಡೆದಿತ್ತು. ಈ ಚಿತ್ರದ ದೃಶ್ಯವೊಂದರಲ್ಲಿ ಕಾಂಟ್ರ್ಯಾಕ್ಟ್ ಕಿಲ್ಲರ್ ಆರ್​ಸಿಬಿ ಜೆರ್ಸಿ ಧರಿಸಿ ಬರುತ್ತಾನೆ. ಇದನ್ನು ತೆಗೆದು ಹಾಕಬೇಕು ಎಂದು ಕೋರ್ಟ್​ಗೆ ಆರ್​ಸಿಬಿ ಮನವಿ ಮಾಡಿತ್ತು. ಈ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಲು ಸನ್​ ಪಿಕ್ಚರ್ಸ್ (Sun Pictures) ಒಪ್ಪಿದೆ. ಈ ದೃಶ್ಯವನ್ನು ಮಾರ್ಪಾಡು ಮಾಡುವ ಭರವಸೆಯನ್ನು ಕೋರ್ಟ್​ಗೆ ನೀಡಿದೆ.

ಸಿನಿಮಾದಲ್ಲಿ ಕಥಾ ನಾಯಕನನ್ನು ಬೆನ್ನತ್ತಿ ಬರುವ ಕಾಂಟ್ರ್ಯಾಕ್ಟ್ ಕಿಲ್ಲರ್ ಆರ್​ಸಿಬಿ ಜೆರ್ಸಿ ಧರಿಸಿರುತ್ತಾನೆ. ಜೊತೆಗೆ ಮಹಿಳೆಯ ಬಗ್ಗೆ ಕೆಟ್ಟ ಭಾಷೆ ಪ್ರಯೋಗಿಸುತ್ತಾನೆ. ಈ ದೃಶ್ಯವನ್ನು ಆರ್​ಸಿಬಿಯ ಕಾನೂನು ತಂಡ ಪ್ರಶ್ನೆ ಮಾಡಿತ್ತು. ‘ನಮ್ಮ ಜೆರ್ಸಿಯ ಅನಧಿಕೃತ ಬಳಕೆಯು ಬ್ರ್ಯಾಂಡ್‌ನ ಜನಪ್ರಿಯತೆ ಮತ್ತು ಅದರ ಪ್ರಾಯೋಜಕರ ಹಿತಾಸಕ್ತಿಗಳಿಗೆ ಹಾನಿ ಉಂಟು ಮಾಡಬಹುದು’ ಎಂದು ಆರ್​ಸಿಬಿ ದೆಹಲಿ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ‘ಆರ್​ಸಿಬಿ ಜೆರ್ಸಿ ಇರುವ ದೃಶ್ಯಕ್ಕೆ ಕತ್ತರಿ ಹಾಕಿ ಅಥವಾ ಮಾರ್ಪಾಡು ಮಾಡಿ’ ಎಂದು ಸನ್​ ಪಿಕ್ಚರ್ಸ್​ಗೆ ಕೋರ್ಟ್ ಆದೇಶ ನೀಡಿದೆ.

ಈಗ ಎರಡೂ ಕಡೆಯುವರು ಒಂದು ಒಪ್ಪಂದಕ್ಕೆ ಬಂದಿದ್ದು, ಈ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ‘ನಾವು ದೃಶ್ಯವವನ್ನು ಮಾರ್ಪಾಡು ಮಾಡುತ್ತೇವೆ. ಸೆಪ್ಟೆಂಬರ್ 1ರಿಂದ ಥಿಯೇಟರ್​ನಲ್ಲಿ ಮಾರ್ಪಾಡು ಮಾಡಿದ ದೃಶ್ಯ ಬಿತ್ತರ ಆಗಲಿದೆ. ಒಟಿಟಿಯಲ್ಲೂ ಆ ದೃಶ್ಯವನ್ನು ಬದಲಿಸಿ ರಿಲೀಸ್ ಮಾಡಲಾಗುವುದು| ಎಂದು ಸನ್​ ಪಿಕ್ಚರ್ಸ್ ಪರ ವಕೀಲರು ಕೋರ್ಟ್​ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ವಿಶ್ವಾದ್ಯಂತ 550 ಕೋಟಿ ರೂಪಾಯಿ ಗಳಿಸಿದ ‘ಜೈಲರ್​’; ರಜನಿಕಾಂತ್​ ಚಿತ್ರಕ್ಕೆ ಭಾರತದಲ್ಲಿ 295 ಕೋಟಿ ರೂ. ಕಲೆಕ್ಷನ್​

‘ಜೈಲರ್’ ಸಿನಿಮಾದಲ್ಲಿ ರಜನಿಕಾಂತ್ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶಿವರಾಜ್​ಕುಮಾರ್, ಮೋಹನ್​ಲಾಲ್, ಜಾಕಿ ಶ್ರಾಫ್, ತಮನ್ನಾ, ವಿನಾಯಕನ್ ಸೇರಿ ಅನೇಕರು ಇತರ ಪ್ರಮುಖ ಪಾತ್ರ ಮಾಡಿದ್ದಾರೆ. ನೆಲ್ಸನ್ ದಿಲೀಪ್ ಕುಮಾರ್ ಅವರು ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ರಿಲೀಸ್ ಆಗಿ ತಿಂಗಳು ಕಳೆಯುತ್ತಾ ಬಂದರೂ ಇನ್ನೂ ಅನೇಕ ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ