AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬರ್​ಗಳ ಮೇಲೆ ಮಾನಹಾನಿ ಕೇಸ್​ ಹಾಕಿದ್ದ ಸಮಂತಾಗೆ ಮುಖಭಂಗ; ಕೋರ್ಟ್​ ಹೇಳಿದ್ದೇನು?

ಕೆಲವು ಯೂಟ್ಯೂಬರ್​ಗಳ ಮೇಲೆ ಸಮಂತಾ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಕೇಸ್​ ವಿಚಾರಣೆಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಬೇಕು ಎಂದು ಸಮಂತಾ ಪರ ವಕೀಲರು ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆಲ್ಲ ಕೋರ್ಟ್​ ಒಪ್ಪಿಕೊಂಡಿಲ್ಲ.

ಯೂಟ್ಯೂಬರ್​ಗಳ ಮೇಲೆ ಮಾನಹಾನಿ ಕೇಸ್​ ಹಾಕಿದ್ದ ಸಮಂತಾಗೆ ಮುಖಭಂಗ; ಕೋರ್ಟ್​ ಹೇಳಿದ್ದೇನು?
ಸಮಂತಾ
TV9 Web
| Edited By: |

Updated on: Oct 23, 2021 | 9:29 AM

Share

ನಟಿ ಸಮಂತಾ ಅವರ ವೈಯಕ್ತಿಕ ಜೀವನದ ಬಗ್ಗೆ ಕಳೆದ ಕೆಲವು ತಿಂಗಳಿಂದ ಹಲವು ಸುದ್ದಿಗಳು ಹರಿದಾಡಿದ್ದವು. ಅದರಲ್ಲಿ ಎಷ್ಟು ಸುಳ್ಳು, ಎಷ್ಟು ನಿಜ ಎಂಬುದು ತಿಳಿದಿಲ್ಲ. ನಾಗ ಚೈತನ್ಯ ಜೊತೆಗಿನ ಕಿರಿಕ್​, ವಿಚ್ಛೇದನ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಬಣ್ಣಬಣ್ಣದ ಗಾಸಿಪ್​ಗಳು ಕೇಳಿಬಂದಿದ್ದು ಸಮಂತಾಗೆ ನಿಜಕ್ಕೂ ಬೇಸರ ಮೂಡಿಸಿದೆ. ಹಾಗಾಗಿ ಅವರು ಕಾನೂನು ಸಮರ ಸಾರಿದ್ದಾರೆ. ತಮ್ಮ ವಿರುದ್ಧ ಮಾನಹಾನಿ ಆಗುವಂತಹ ಮಾಹಿತಿಯನ್ನು ಪ್ರಸಾರ ಮಾಡಿದ ಯೂಟ್ಯೂಬರ್​ಗಳ ಮೇಲೆ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆದರೆ ನ್ಯಾಯಾಲಯದಲ್ಲಿ ಸಮಂತಾಗೆ ಹಿನ್ನಡೆ ಆಗಿದೆ.

ಹೈದರಾಬಾದ್​ನ ಸ್ಥಳೀಯ ನ್ಯಾಯಾಲಯದಲ್ಲಿ ಸಮಂತಾ ಈ ಮೊಕದ್ದಮೆ ಹೂಡಿದ್ದಾರೆ. ಅಲ್ಲದೇ ಈ ಕೇಸ್​ ವಿಚಾರಣೆಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಬೇಕು ಎಂದು ಸಮಂತಾ ಪರ ವಕೀಲರು ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆಲ್ಲ ಕೋರ್ಟ್​ ಒಪ್ಪಿಕೊಂಡಿಲ್ಲ. ಸೆಲೆಬ್ರಿಟಿ ಎಂದಮಾತ್ರಕ್ಕೆ ತುರ್ತಾಗಿ ಈ ಕೇಸ್​ನ ವಿಚಾರಣೆ ನಡೆಸುವ ಅವಶ್ಯಕತೆ ಇಲ್ಲ. ಕಾನೂನು ಎಲ್ಲರಿಗೂ ಒಂದೇ. ನಿಯಮದ ಪ್ರಕಾರವೇ ವಿಚಾರಣೆ ನಡೆಯಲಿದೆ ಎಂದು ನ್ಯಾಯಾಲಯ ತಿಳಿಸಿದೆ.

ಸೆಲೆಬ್ರಿಟಿಗಳು ಸಾರ್ವಜನಿಕ ವಲಯದಲ್ಲಿ ಇರುತ್ತಾರೆ. ಆ ಕಾರಣದಿಂದ ಅವರ ವೈಯಕ್ತಿಕ ಜೀವನದ ಬಗ್ಗೆ ಹಲವು ಸುದ್ದಿಗಳು ಹರಿದಾಡುವುದು ಕೂಡ ಸಹಜ. ಅದಕ್ಕೆಲ್ಲ ಮಾನಹಾನಿ ಮೊಕದ್ದಮೆ ದಾಖಲಿಸುವ ಬದಲು, ಅಂಥ ಮಾಹಿತಿ ಪ್ರಸಾರ ಮಾಡಿದವರು ಕ್ಷಮೆ ಕೇಳಲಿ ಅಂತ ಸಮಂತಾ ಒತ್ತಾಯಿಸಬಹುದು ಅಂತ ಕೋರ್ಟ್​ ಹೇಳಿದೆ ಎಂದು ವರದಿ ಆಗಿದೆ.

ನಾಗ ಚೈತನ್ಯಗೆ ವಿಚ್ಛೇದನ ನೀಡಿದ ಬಳಿಕ ಸಮಂತಾ ಸೋಶಿಯಲ್​ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್​ ಆಗಿದ್ದಾರೆ. ಅಲ್ಲದೇ ಹಲವು ಸ್ಥಳಗಳಿಗೆ ಅವರು ಪ್ರವಾಸ ಕೈಗೊಂಡಿದ್ದಾರೆ. ಪ್ರಕೃತಿ ಸೌಂದರ್ಯದ ತಾಣಗಳ ಜೊತೆಗೆ ಆಧ್ಯಾತ್ಮಿಕ ಕ್ಷೇತ್ರಗಳಿಗೂ ಭೇಟಿ ನೀಡುತ್ತಿದ್ದಾರೆ. ಪೂಜೆ, ಹೋಮ-ಹವನ ಮಾಡಿಸುತ್ತಿದ್ದಾರೆ. ಇತ್ತೀಚೆಗೆ ಅವರು ಮಹಾರಿಷಿ ಮಹೇಶ್​ ಯೋಗಿ ಆಶ್ರಮದ ಧ್ಯಾನ ಕೇಂದ್ರಕ್ಕೆ ತೆರಳಿದ್ದರು. ಆ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿ ಯಶಸ್ಸಿನ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಸದ್ಯ ಅವರು ತೆಲುಗಿನ ‘ಶಾಕುಂತಲಂ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಅವರ ಹೊಸ ಸಿನಿಮಾ ಕೂಡ ಅನೌನ್ಸ್​ ಆಗಿದೆ. ಅದರ ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ.

ಇದನ್ನೂ ಓದಿ:

Sri Reddy: ‘ಆತ ಸಲಿಂಗಕಾಮಿ, ಅಂಥ ವ್ಯಕ್ತಿ ಜತೆ ಸಮಂತಾ ಸಂಬಂಧ ಬೆಳೆಸಲ್ಲ’; ನಟಿ ಶ್ರೀರೆಡ್ಡಿ ಶಾಕಿಂಗ್​ ಹೇಳಿಕೆ

ನಾಗ ಚೈತನ್ಯ ಮೇಲೆ ನಂಬಿಕೆ ಇಟ್ಟ ಸಮಂತಾಗೆ ಮಗುವೂ ಸಿಗಲಿಲ್ಲ; ಶಾರುಖ್​ ಜತೆ ಸಿನಿಮಾವೂ ಕೈ ಹಿಡಿಯಲಿಲ್ಲ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ