Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬರ್​ಗಳ ಮೇಲೆ ಮಾನಹಾನಿ ಕೇಸ್​ ಹಾಕಿದ್ದ ಸಮಂತಾಗೆ ಮುಖಭಂಗ; ಕೋರ್ಟ್​ ಹೇಳಿದ್ದೇನು?

ಕೆಲವು ಯೂಟ್ಯೂಬರ್​ಗಳ ಮೇಲೆ ಸಮಂತಾ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಕೇಸ್​ ವಿಚಾರಣೆಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಬೇಕು ಎಂದು ಸಮಂತಾ ಪರ ವಕೀಲರು ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆಲ್ಲ ಕೋರ್ಟ್​ ಒಪ್ಪಿಕೊಂಡಿಲ್ಲ.

ಯೂಟ್ಯೂಬರ್​ಗಳ ಮೇಲೆ ಮಾನಹಾನಿ ಕೇಸ್​ ಹಾಕಿದ್ದ ಸಮಂತಾಗೆ ಮುಖಭಂಗ; ಕೋರ್ಟ್​ ಹೇಳಿದ್ದೇನು?
ಸಮಂತಾ
Follow us
TV9 Web
| Updated By: ಮದನ್​ ಕುಮಾರ್​

Updated on: Oct 23, 2021 | 9:29 AM

ನಟಿ ಸಮಂತಾ ಅವರ ವೈಯಕ್ತಿಕ ಜೀವನದ ಬಗ್ಗೆ ಕಳೆದ ಕೆಲವು ತಿಂಗಳಿಂದ ಹಲವು ಸುದ್ದಿಗಳು ಹರಿದಾಡಿದ್ದವು. ಅದರಲ್ಲಿ ಎಷ್ಟು ಸುಳ್ಳು, ಎಷ್ಟು ನಿಜ ಎಂಬುದು ತಿಳಿದಿಲ್ಲ. ನಾಗ ಚೈತನ್ಯ ಜೊತೆಗಿನ ಕಿರಿಕ್​, ವಿಚ್ಛೇದನ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಬಣ್ಣಬಣ್ಣದ ಗಾಸಿಪ್​ಗಳು ಕೇಳಿಬಂದಿದ್ದು ಸಮಂತಾಗೆ ನಿಜಕ್ಕೂ ಬೇಸರ ಮೂಡಿಸಿದೆ. ಹಾಗಾಗಿ ಅವರು ಕಾನೂನು ಸಮರ ಸಾರಿದ್ದಾರೆ. ತಮ್ಮ ವಿರುದ್ಧ ಮಾನಹಾನಿ ಆಗುವಂತಹ ಮಾಹಿತಿಯನ್ನು ಪ್ರಸಾರ ಮಾಡಿದ ಯೂಟ್ಯೂಬರ್​ಗಳ ಮೇಲೆ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆದರೆ ನ್ಯಾಯಾಲಯದಲ್ಲಿ ಸಮಂತಾಗೆ ಹಿನ್ನಡೆ ಆಗಿದೆ.

ಹೈದರಾಬಾದ್​ನ ಸ್ಥಳೀಯ ನ್ಯಾಯಾಲಯದಲ್ಲಿ ಸಮಂತಾ ಈ ಮೊಕದ್ದಮೆ ಹೂಡಿದ್ದಾರೆ. ಅಲ್ಲದೇ ಈ ಕೇಸ್​ ವಿಚಾರಣೆಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಬೇಕು ಎಂದು ಸಮಂತಾ ಪರ ವಕೀಲರು ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆಲ್ಲ ಕೋರ್ಟ್​ ಒಪ್ಪಿಕೊಂಡಿಲ್ಲ. ಸೆಲೆಬ್ರಿಟಿ ಎಂದಮಾತ್ರಕ್ಕೆ ತುರ್ತಾಗಿ ಈ ಕೇಸ್​ನ ವಿಚಾರಣೆ ನಡೆಸುವ ಅವಶ್ಯಕತೆ ಇಲ್ಲ. ಕಾನೂನು ಎಲ್ಲರಿಗೂ ಒಂದೇ. ನಿಯಮದ ಪ್ರಕಾರವೇ ವಿಚಾರಣೆ ನಡೆಯಲಿದೆ ಎಂದು ನ್ಯಾಯಾಲಯ ತಿಳಿಸಿದೆ.

ಸೆಲೆಬ್ರಿಟಿಗಳು ಸಾರ್ವಜನಿಕ ವಲಯದಲ್ಲಿ ಇರುತ್ತಾರೆ. ಆ ಕಾರಣದಿಂದ ಅವರ ವೈಯಕ್ತಿಕ ಜೀವನದ ಬಗ್ಗೆ ಹಲವು ಸುದ್ದಿಗಳು ಹರಿದಾಡುವುದು ಕೂಡ ಸಹಜ. ಅದಕ್ಕೆಲ್ಲ ಮಾನಹಾನಿ ಮೊಕದ್ದಮೆ ದಾಖಲಿಸುವ ಬದಲು, ಅಂಥ ಮಾಹಿತಿ ಪ್ರಸಾರ ಮಾಡಿದವರು ಕ್ಷಮೆ ಕೇಳಲಿ ಅಂತ ಸಮಂತಾ ಒತ್ತಾಯಿಸಬಹುದು ಅಂತ ಕೋರ್ಟ್​ ಹೇಳಿದೆ ಎಂದು ವರದಿ ಆಗಿದೆ.

ನಾಗ ಚೈತನ್ಯಗೆ ವಿಚ್ಛೇದನ ನೀಡಿದ ಬಳಿಕ ಸಮಂತಾ ಸೋಶಿಯಲ್​ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್​ ಆಗಿದ್ದಾರೆ. ಅಲ್ಲದೇ ಹಲವು ಸ್ಥಳಗಳಿಗೆ ಅವರು ಪ್ರವಾಸ ಕೈಗೊಂಡಿದ್ದಾರೆ. ಪ್ರಕೃತಿ ಸೌಂದರ್ಯದ ತಾಣಗಳ ಜೊತೆಗೆ ಆಧ್ಯಾತ್ಮಿಕ ಕ್ಷೇತ್ರಗಳಿಗೂ ಭೇಟಿ ನೀಡುತ್ತಿದ್ದಾರೆ. ಪೂಜೆ, ಹೋಮ-ಹವನ ಮಾಡಿಸುತ್ತಿದ್ದಾರೆ. ಇತ್ತೀಚೆಗೆ ಅವರು ಮಹಾರಿಷಿ ಮಹೇಶ್​ ಯೋಗಿ ಆಶ್ರಮದ ಧ್ಯಾನ ಕೇಂದ್ರಕ್ಕೆ ತೆರಳಿದ್ದರು. ಆ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸರಣಿ ಯಶಸ್ಸಿನ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಸದ್ಯ ಅವರು ತೆಲುಗಿನ ‘ಶಾಕುಂತಲಂ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಅವರ ಹೊಸ ಸಿನಿಮಾ ಕೂಡ ಅನೌನ್ಸ್​ ಆಗಿದೆ. ಅದರ ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ.

ಇದನ್ನೂ ಓದಿ:

Sri Reddy: ‘ಆತ ಸಲಿಂಗಕಾಮಿ, ಅಂಥ ವ್ಯಕ್ತಿ ಜತೆ ಸಮಂತಾ ಸಂಬಂಧ ಬೆಳೆಸಲ್ಲ’; ನಟಿ ಶ್ರೀರೆಡ್ಡಿ ಶಾಕಿಂಗ್​ ಹೇಳಿಕೆ

ನಾಗ ಚೈತನ್ಯ ಮೇಲೆ ನಂಬಿಕೆ ಇಟ್ಟ ಸಮಂತಾಗೆ ಮಗುವೂ ಸಿಗಲಿಲ್ಲ; ಶಾರುಖ್​ ಜತೆ ಸಿನಿಮಾವೂ ಕೈ ಹಿಡಿಯಲಿಲ್ಲ

ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ