AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ; ಹಳೆಯ ಪೋಸ್ಟ್ ವೈರಲ್

Puneeth Rajkumar: ಪುನೀತ್ ರಾಜ್​ಕುಮಾರ್ ಅವರು 2021ರ ಏಪ್ರಿಲ್ 7ರಂದು ವ್ಯಾಕ್ಸಿನ್ ಪಡೆದಿದ್ದಾಗಿ ಪೋಸ್ಟ್ ಮಾಡಿದ್ದರು. ಇದಕ್ಕೆ ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದರು. ಈ ಲಸಿಕೆ ಪಡೆಯಬೇಡಿ ಎಂದು ಅವರು ಪುನೀತ್ ಬಳಿ ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದರು.

ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ; ಹಳೆಯ ಪೋಸ್ಟ್ ವೈರಲ್
ಪುನೀತ್
ರಾಜೇಶ್ ದುಗ್ಗುಮನೆ
|

Updated on:May 03, 2024 | 10:56 AM

Share

ಕೋವಿಶೀಲ್ಡ್ ಲಸಿಕೆ ಪಡೆದವರ ಮೇಲ ಅಡ್ಡಪರಿಣಾಮ ಉಂಟಾಗಲಿದೆ ಎಂದು ಕೊರೊನಾ (Corona) ಔಷಧಗಳ ತಯಾರಿಕಾ ಸಂಸ್ಥೆ ಆಸ್ಟ್ರಾಜೆನೆಕಾ ಇತ್ತೀಚೆಗೆ ಒಪ್ಪಿಕೊಂಡಿದೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಕೊರೊನಾ ಲಸಿಕೆ ತೆಗೆದುಕೊಂಡ ಬಳಿಕ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಈಗ ಎರಡನ್ನೂ ಲಿಂಕ್ ಮಾಡುವ ಕೆಲಸ ಆಗುತ್ತಿದೆ. ಈ ಮಧ್ಯೆ ಪುನೀತ್ ರಾಜ್​ಕುಮಾರ್ (Puneeth Rajkumar) ಕುರಿತ ಪೋಸ್ಟ್ ಒಂದು ವೈರಲ್ ಆಗಿದೆ.

ಪುನೀತ್ ರಾಜ್​ಕುಮಾರ್ ಅವರು 2021ರ ಅಕ್ಟೋಬರ್ 29ರಂದು ನಿಧನ ಹೊಂದಿದರು. ಅವರು ಹೃದಯಾಘಾತಕ್ಕೆ ಒಳಪಟ್ಟು ಮೃತಪಟ್ಟರು. ಸಖತ್ ಫಿಟ್ ಆಗಿದ್ದ ಅವರು ನಿಧನ ಹೊಂದುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಈಗ ಕೋವಿಶೀಲ್ಡ್ ತೆಗೆದುಕೊಂಡಿದ್ದರಿಂದಲೇ ಪುನೀತ್​ಗೆ ಹೃದಯಾಘಾತ ಆಯಿತು ಎಂದು ಕೆಲವರು ಆರೋಪಿಸಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರು 2021ರ ಏಪ್ರಿಲ್ 7ರಂದು ವ್ಯಾಕ್ಸಿನ್ ಪಡೆದಿದ್ದಾಗಿ ಪೋಸ್ಟ್ ಮಾಡಿದ್ದರು. ‘ನೀವು 45 ವರ್ಷ ಮೇಲ್ಪಟ್ಟಿದ್ದರೆ ವ್ಯಾಕ್ಸಿನ್ ಹಾಕಿಸಿಕೊಳ್ಳಿ’ ಎಂದು ಮನವಿ ಮಾಡಿದ್ದರು. ಇದಕ್ಕೆ ಬೃಂದಾವನಾ ಹೆಸರಿ ಖಾತೆಯಿಂದ ಅಭಿಮಾನಿಯೋರ್ವ ಕಮೆಂಟ್ ಮಾಡಿದ್ದರು. ‘ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ. 45 ವರ್ಷ ಮೇಲ್ಪಟ್ಟವರಿಗೆ ಇದು ಒಳ್ಳೆಯದಲ್ಲ’ ಎಂದು ಬರೆಯಲಾಗಿತ್ತು. ಸದ್ಯ ಈ ಪೋಸ್ಟ್ ಮತ್ತೆ ವೈರಲ್ ಆಗುತ್ತಿದೆ. ಕೋವಿಶೀಲ್ಡ್​ನಿಂದಲೇ ಪುನೀತ್ ಅವರ ರಕ್ತನಾಳದಲ್ಲಿ ಬ್ಲಡ್ ಕ್ಲಾಟ್ ಆಯಿತೇ ಎನ್ನುವ ಪ್ರಶ್ನೆ ಮೂಡಿದೆ.

ಆಸ್ಟ್ರಾಜೆನೆಕಾ ಕೋವಿಶೀಲ್ಡ್‌ ಹೆಸರಲ್ಲಿ ಲಸಿಕೆಯನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಹೀಗಾಗಿ, ಈ ಬಗ್ಗೆ ಚರ್ಚೆ ಜೋರಾಗಿದೆ. ಕೋವಿಶೀಲ್ಡ್​ಗಳಿಂದ ಬ್ಲಡ್ ಕ್ಲಾಟ್ ಆಗಲಿದ್ದು, ಇವು​ಗಳಿಂದ ಹೃದಯಸ್ಥಂಬನ ಅಥವಾ ಪಾರ್ಶವಾಯು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:35 am, Fri, 3 May 24

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ