AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: ‘ಪುಷ್ಪ ಅಂದ್ರೆ ಹೂವಲ್ಲ; ಬೆಂಕಿ!’; ಮಾಸ್ ಅವತಾರದಲ್ಲಿ ಕಾಣಿಸಿಕೊಂಡು ಮಸ್ತ್ ಡೈಲಾಗ್ ಹೇಳಿದ ಜಡೇಜಾ

Allu Arjun | Pushpa: ಭಾರತ ಕ್ರಿಕೆಟ್ ತಾರೆ ರವೀಂದ್ರ ಜಡೇಜಾ ‘ಪುಷ್ಪ’ ಆಗಿ ಕಾಣಿಸಿಕೊಂಡಿದ್ದಾರೆ! ಅವರ ಲುಕ್ ನೋಡಿದ ಫ್ಯಾನ್ಸ್ ಅಚ್ಚರಿ ಹೊರಹಾಕಿದ್ದಾರೆ. ಕಾರಣ, ಅಲ್ಲು ಅರ್ಜುನ್ ಗೆಟಪ್​ಗೂ ಜಡ್ಡು ಗೆಟಪ್​ಗೂ ಅಂಥಾ ವ್ಯತ್ಯಾಸ ಕಾಣುವುದೇ ಇಲ್ಲ!

Ravindra Jadeja: ‘ಪುಷ್ಪ ಅಂದ್ರೆ ಹೂವಲ್ಲ; ಬೆಂಕಿ!’; ಮಾಸ್ ಅವತಾರದಲ್ಲಿ ಕಾಣಿಸಿಕೊಂಡು ಮಸ್ತ್ ಡೈಲಾಗ್ ಹೇಳಿದ ಜಡೇಜಾ
ರವೀಂದ್ರ ಜಡೇಜಾ, ಅಲ್ಲು ಅರ್ಜುನ್
TV9 Web
| Edited By: |

Updated on: Jan 13, 2022 | 9:09 AM

Share

ಅಲ್ಲು ಅರ್ಜುನ್ (Allu Arjun) ಸದ್ಯ ‘ಪುಷ್ಪ: ದಿ ರೈಸ್’ (Pushpa: The Rise) ಯಶಸ್ಸಿನಲ್ಲಿದ್ದಾರೆ. ಬಾಕ್ಸಾಫೀಸ್​ನಲ್ಲಿ ಧೂಳೆಬ್ಬಿಸಿರುವ ಚಿತ್ರ ಹಿಂದಿಯಲ್ಲೇ ಸುಮಾರು ₹ 80 ಕೋಟಿಗೂ ಅಧಿಕ ಮೊತ್ತ ಬಾಚಿಕೊಂಡಿದೆ. ‘ಪುಷ್ಪ’ದ ಒಟ್ಟಾರೆ ಕಲೆಕ್ಷನ್ ₹ 325 ಕೋಟಿ ದಾಟಿದೆ ಎನ್ನುತ್ತವೆ ಬಾಕ್ಸಾಫೀಸ್ ವರದಿಗಳು. ಇದೇ ಸಂತಸದಲ್ಲಿ ‘ಪುಷ್ಪ’ದ ಎರಡನೇ ಭಾಗಕ್ಕೆ ಚಿತ್ರತಂಡ ತಯಾರಿ ನಡೆಸಿದೆ. ಏಪ್ರಿಲ್​ನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ ಎಂಬ ಸುದ್ದಿಯೂ ಚಿತ್ರತಂಡದಿಂದ ಬಂದಿದೆ. ಇದೀಗ ಅಖಾಡಕ್ಕೆ ಹೊಸ ‘ಪುಷ್ಪ’ ಗ್ರಾಂಡ್ ಎಂಟ್ರಿ ನೀಡಿದ್ದಾನೆ. ಹೌದು. ಭಾರತ ಕ್ರಿಕೆಟ್ ತಂಡದ ತಾರಾ ಆಟಗಾರ ರವೀಂದ್ರ ಜಡೇಜಾ (Ravindra Jadeja) ‘ಪುಷ್ಪ’ ಲುಕ್​ನಲ್ಲಿ ಕಾಣಿಸಿಕೊಂಡು ಎಲ್ಲರನ್ನೂ ಚಕಿತಗೊಳಿಸಿದ್ದಾರೆ. ಇದಕ್ಕೆ ಸ್ವತಃ ಅಲ್ಲು ಅರ್ಜುನ್ ಆಶ್ಚರ್ಯ ಹೊರಹಾಕಿದ್ದಾರೆ.

ರವೀಂದ್ರ ಜಡೇಜಾ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಆಗಿರುತ್ತಾರೆ. ಇದೀಗ ಅವರು ಸ್ವತಃ ಅಲ್ಲು ಅರ್ಜುನ್ ಪುಷ್ಪ ಚಿತ್ರದ ಗೆಟಪ್​ನ್ನು ಅನುಕರಿಸುವ ಪ್ರಯತ್ನ ಮಾಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಚಿತ್ರ ಹಂಚಿಕೊಂಡಿರುವ ಜಡ್ಡು, ಅಲ್ಲು ಅರ್ಜುನ್ ಚಿತ್ರವನ್ನೂ ಹಂಚಿಕೊಂಡಿದ್ದಾರೆ. ಅದನ್ನು ನೋಡಿರುವ ನೆಟ್ಟಿಗರಿಗೆ ಎರಡಲ್ಲೂ ಅಂತಹ ವ್ಯತ್ಯಾಸವೇನೂ ಕಂಡಿಲ್ಲ. ಜತೆಗೆ ಜಡ್ಡು ಸ್ಟೈಲ್​ಗೆ ಮಾರು ಹೋಗಿದ್ದಾರೆ.

ಖಡಕ್ ಲುಕ್ ಶೇರ್ ಮಾಡಿರುವ ಜಡ್ಡು, ಫ್ಯಾನ್ಸ್​​ಗೆ ಎಚ್ಚರಿಕೆ ನೀಡುವುದನ್ನು ಮರೆತಿಲ್ಲ. ‘‘ಪುಷ್ಪ ಅಂದರೆ ಹೂವು ಎಂದುಕೊಂಡಿದ್ದೀರಾ? ಫೈರ್!’’ ಎಂದು ಕ್ಯಾಪ್ಶನ್ ನೀಡಿದ್ದಾರೆ. ಜತೆಗೆ ‘‘ಇದು ಕೇವಲ ಸಾಂಕೇತಿಕ. ಸಿಗರೇಟ್, ಬೀಡಿ, ಟೊಬ್ಯಾಕೊ ಸಂಬಂಧಿತ ಉತ್ಪನ್ನಗಳು ಆರೋಗ್ಯಕ್ಕೆ ಹಾನಿಕಾರಕ. ಅದನ್ನು ಬಳಸಬೇಡಿ’’ ಎಂದು ಜಡೇಜಾ ಎಚ್ಚರಿಕೆ ನೀಡಿದ್ದಾರೆ. ಸದ್ಯ ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಲ್ಲು ಅರ್ಜುನ್ ಜಡೇಜಾ ಪೋಸ್ಟ್​ಗೆ ‘ತಗ್ಗೆದೆಲೆ’ ಎಂದು ಬರೆದು ‘ಫೈರ್’ ಇಮೋಜಿಗಳನ್ನು ಹಂಚಿಕೊಂಡಿದ್ದಾರೆ.

ಸುಕುಮಾರ್ ನಿರ್ದೇಶನದ ‘ಪುಷ್ಪ: ದಿ ರೈಸ್’ ಸದ್ಯ ಅಮೆಜಾನ್ ಪ್ರೈಮ್​ನಲ್ಲೂ ಬಿತ್ತರವಾಗುತ್ತಿದೆ. ರಶ್ಮಿಕಾ ಮಂದಣ್ಣ ನಾಯಕಿಯಾಗಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಫಹಾದ್ ಫಾಸಿಲ್, ಧನಂಜಯ ಮೊದಲಾದವರು ಕಾಣಿಸಿಕೊಂಡಿದ್ದಾರೆ. ನಟಿ ಸಮಂತಾ ವಿಶೇಷ ಐಟಂ ಸಾಂಗ್​ಗೆ ಹೆಜ್ಜೆ ಹಾಕಿದ್ದಾರೆ.

ಇದನ್ನೂ ಓದಿ:

ಸೀಕ್ರೆಟ್​ ಕ್ಯಾಮೆರಾದಲ್ಲಿ ಮಹಿಳಾ ಫ್ಯಾನ್ಸ್​ ಫೋಟೋ ಸೆರೆ ಹಿಡಿಯುತ್ತಿದ್ದ ಸಲ್ಮಾನ್​ ಖಾನ್​; ಕಾರಣ ಏನು?

ಅಕ್ಷಯ್​ ಕುಮಾರ್​ಗೆ 170 ಕೋಟಿ ರೂ. ಸಂಭಾವನೆ; ಹೊಸ ಸಿನಿಮಾ ಬಗ್ಗೆ ಹರಿದಾಡುತ್ತಿದೆ ಬಿಗ್ ನ್ಯೂಸ್​

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!