AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟರ್​ ಶ್ರೀಶಾಂತ್​ ಈಗ ಮೊಹಮ್ಮದ್​ ಮೊಬಿ; ಹೊಸ ಜರ್ನಿಗೆ ಶುಭಕೋರಿದ ಸೆಲೆಬ್ರಿಟಿಗಳು

‘ಕಾದು ವಾಕುಲ ರೆಂಡು ಕಾದಲ್​’ ಸಿನಿಮಾದಲ್ಲಿ ಶ್ರೀಶಾಂತ್​ ಬಣ್ಣ ಹಚ್ಚಿದ್ದಾರೆ. ಅವರ ಪಾತ್ರ ಹೇಗಿರಲಿದೆ ಎಂಬ ಕೌತುಕ ಅನೇಕರಿಗೆ ಇತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ.

ಕ್ರಿಕೆಟರ್​ ಶ್ರೀಶಾಂತ್​ ಈಗ ಮೊಹಮ್ಮದ್​ ಮೊಬಿ; ಹೊಸ ಜರ್ನಿಗೆ ಶುಭಕೋರಿದ ಸೆಲೆಬ್ರಿಟಿಗಳು
ಶ್ರೀಶಾಂತ್
TV9 Web
| Edited By: |

Updated on:Feb 10, 2022 | 10:11 AM

Share

ಕ್ರಿಕೆಟ್​ ಜಗತ್ತಿನಲ್ಲಿ ಜನಪ್ರಿಯತೆ ಗಳಿಸಿದ ಶ್ರೀಶಾಂತ್​ (Sreesanth) ಅವರು ಈಗ ಬಣ್ಣದ ಲೋಕದಲ್ಲೂ ಸಕ್ರಿಯರಾಗಿದ್ದಾರೆ. ನಟನೆ ಬಗ್ಗೆ ಅವರಿಗೆ ತುಂಬ ಉತ್ಸಾಹ ಇದೆ. ಈ ಮೊದಲೇ ಅನೇಕ ಜಾಹೀರಾತುಗಳಲ್ಲಿ ನಟಿಸಿದ್ದ ಅವರು ಈಗ ಸಿನಿಮಾಗಳಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಅವರಿಗೆ ಸ್ಟಾರ್​ ನಟ-ನಟಿಯರ ಜೊತೆಗೆ ಅಭಿನಯಿಸುವ ಅವಕಾಶ ಸಿಗುತ್ತಿರುವುದು ವಿಶೇಷ. ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್​ ಶಿವನ್​ (Vignesh Shivan) ಆ್ಯಕ್ಷನ್​-ಕಟ್​ ಹೇಳುತ್ತಿರುವ ‘ಕಾದು ವಾಕುಲ ರೆಂಡು ಕಾದಲ್​’ ಸಿನಿಮಾದಲ್ಲಿ ಸಮಂತಾ, ನಯನತಾರಾ ಮತ್ತು ವಿಜಯ್​ ಸೇತುಪತಿ ಪ್ರಮುಖ ಪಾತ್ರಗಳನ್ನು ನಿಭಾಯಿಸುತ್ತಿದ್ದಾರೆ. ಅದೇ ಸಿನಿಮಾದಲ್ಲಿ ಶ್ರೀಶಾಂತ್​ ಕೂಡ ಬಣ್ಣ ಹಚ್ಚಿದ್ದಾರೆ. ಅವರ ಪಾತ್ರ ಹೇಗಿರಲಿದೆ ಎಂಬ ಕೌತುಕ ಅನೇಕರಿಗೆ ಇತ್ತು. ಅದಕ್ಕೂ ಈಗ ಉತ್ತರ ಸಿಕ್ಕಿದೆ. ಇತ್ತೀಚೆಗೆ ಶ್ರೀಶಾಂತ್​ ಅವರು ಹುಟ್ಟುಹಬ್ಬ (ಫೆ.7) ಆಚರಿಸಿಕೊಂಡರು. ಆ ಸಲುವಾಗಿ ‘ಕಾದು ವಾಕುಲ ರೆಂಡು ಕಾದಲ್​’ (Kaathu Vaakula Rendu Kaadhal) ಚಿತ್ರತಂಡದಿಂದ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಯಿತು. ಆ ಪೋಸ್ಟರ್​ನಲ್ಲಿ ಶ್ರೀಶಾಂತ್​ ಅವರ ಪಾತ್ರದ ಬಗ್ಗೆ ಮಾಹಿತಿ ನೀಡಲಾಗಿದೆ. ಮೊಹಮ್ಮದ್​ ಮೊಬಿ ಎಂಬ ಪಾತ್ರದಲ್ಲಿ ಶ್ರೀಶಾಂತ್​ ಕಾಣಿಸಿಕೊಳ್ಳಲಿದ್ದಾರೆ. ಅವರ ಸಿನಿಮಾ ಜರ್ನಿಗೆ ಅನೇಕರು ಶುಭ ಕೋರಿದ್ದಾರೆ.

‘ಕ್ರಿಕೆಟ್​ ಮೈದಾನದಲ್ಲಿ ನಿಜವಾದ ಚಾಂಪಿಯನ್​ ಆಗಿದ್ದ ಶ್ರೀಶಾಂತ್ ಅವರು ಬೆಳ್ಳಿಪರದೆಯಲ್ಲೂ ಆಳ್ವಿಕೆ ಮಾಡಲಿದ್ದಾರೆ. ಶ್ರೀಶಾಂತ್​ ಅವರನ್ನು ಮೊಹಮ್ಮದ್​ ಮೊಬಿ ಆಗಿ ಪರಿಚಯಿಸುತ್ತಿದ್ದೇವೆ’ ಎಂದು ಚಿತ್ರತಂಡದಿಂದ ಹೊಸ ಪೋಸ್ಟರ್​ ಹಂಚಿಕೊಳ್ಳುವ ಮೂಲಕ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಲಾಗಿದೆ.

ಈ ಸಿನಿಮಾದಲ್ಲಿ ಶ್ರೀಶಾಂತ್​ ಮತ್ತು ಸಮಂತಾ ಮುಖಾಮುಖಿ ಆಗುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಪ್ರತಿಬಾರಿಯೂ ತಮ್ಮ ಪಾತ್ರದ ಮೂಲಕ ಪ್ರೇಕ್ಷಕರಿಗೆ ಸರ್ಪ್ರೈಸ್​ ನೀಡುತ್ತಿರುವ ಸಮಂತಾ ಅವರು ‘ಕಾದು ವಾಕುಲ ರೆಂಡು ಕಾದಲ್​’ ಸಿನಿಮಾದಲ್ಲಿ ಯಾವ ರೀತಿಯ ಪಾತ್ರವನ್ನು ನಿಭಾಯಿಸಿದ್ದಾರೆ ಎಂಬುದನ್ನು ತಿಳಿದುಕೊಳ್ಳುವ ಕೌತುಕ ಅಭಿಮಾನಿಗಳಲ್ಲಿ ಮನೆ ಮಾಡಿದೆ. ತಮ್ಮ ನೆಚ್ಚಿನ ನಟಿ ಯಾವ ರೀತಿ ಸರ್ಪ್ರೈಸ್​ ನೀಡುತ್ತಾರೆ ಎಂಬುದನ್ನು ತಿಳಿಯಲು ಏಪ್ರಿಲ್​ವರೆಗೂ ಕಾಯಬೇಕಿದೆ. ಫೆ.11ರಂದು ಈ ಸಿನಿಮಾದ ಟೀಸರ್​ ಬಿಡುಗಡೆ ಮಾಡುವುದಾಗಿ ವಿಘ್ನೇಶ್​ ಶಿವನ್​ ಘೋಷಿಸಿದ್ದಾರೆ. ಅದಕ್ಕಾಗಿ ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ:

Samantha: ಸಮಂತಾ ಜತೆ ತೆರೆಹಂಚಿಕೊಳ್ಳಲಿದ್ದಾರೆ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್​

ಮತ್ತೆ ಹಳೆ ಚಾಳಿ ಮುಂದುವರೆಸಿದ ಶ್ರೀಶಾಂತ್.. ಇದಕ್ಕೆ 19ರ ಪೋರನ ಉತ್ತರ ಹೇಗಿತ್ತು? ವಿಡಿಯೋ ನೋಡಿ..

Published On - 9:58 am, Thu, 10 February 22

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ