AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಕು ಮಹಾರಾಜ್ ಟ್ರೇಲರ್​; ಇನ್ನಷ್ಟು ಜಾಸ್ತಿ ಆಯ್ತು ಬಾಲಯ್ಯ ಮಾಸ್ ಅವತಾರ

ಜ.12ರಂದು ಬಿಡುಗಡೆ ಆಗಲಿರುವ ‘ಡಾಕು ಮಹಾರಾಜ್​’ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ, ಶ್ರದ್ಧಾ ಶ್ರೀನಾಥ್, ಪ್ರಗ್ಯಾ ಜೈಸ್ವಾಲ್ ಮುಂತಾದವರು ನಟಿಸಿದ್ದಾರೆ. ಟ್ರೇಲರ್​ ಬಿಡುಗಡೆ ಆಗಿದ್ದು, ಅಭಿಮಾನಿಗಳು ಈ ಚಿತ್ರದ ಮೇಲೆ ಇಟ್ಟಿರುವ ನಿರೀಕ್ಷೆ ಡಬಲ್ ಆಗಿದೆ. ತುಂಬ ಮಾಸ್ ಆಗಿ ಈ ಸಿನಿಮಾ ಮೂಡಿಬಂದಿದೆ ಎಂಬುದಕ್ಕೆ ಈ ಟ್ರೇಲರ್​ ಸಾಕ್ಷಿ.

ಡಾಕು ಮಹಾರಾಜ್ ಟ್ರೇಲರ್​; ಇನ್ನಷ್ಟು ಜಾಸ್ತಿ ಆಯ್ತು ಬಾಲಯ್ಯ ಮಾಸ್ ಅವತಾರ
Nandamuri Balakrishna
ಮದನ್​ ಕುಮಾರ್​
|

Updated on: Jan 05, 2025 | 3:18 PM

Share

ಮಾಸ್​ ಸಿನಿಮಾಗಳನ್ನು ಮಾಡಿ ಫೇಮಸ್​ ಆಗಿರುವ ನಂದಮೂರಿ ಬಾಲಕೃಷ್ಣ ಅವರು ವರ್ಷ ಸಂಕ್ರಾಂತಿ ಸಮಯಕ್ಕೆ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡುತ್ತಾರೆ. ಈ ವರ್ಷ ಅವರು ನಟಿಸಿರುವ ‘ಡಾಕು ಮಹಾರಾಜ್​’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಬಾಲಯ್ಯ ಅವರ ಅವತಾರ ಸಖತ್ ಮಾಸ್ ಆಗಿದೆ. ಇಂದು (ಜನವರಿ 5) ‘ಡಾಕು ಮಹಾರಾಜ್’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಇರುವ ನಿರೀಕ್ಷೆಯನ್ನು ಡಬಲ್ ಆಗಿಸುವ ರೀತಿಯಲ್ಲಿ ಈ ಟ್ರೇಲರ್​ ಮೂಡಿಬಂದಿದೆ. ಜನವರಿ 12ರಂದು ‘ಡಾಕು ಮಹಾರಾಜ್’ ಸಿನಿಮಾ ರಿಲೀಸ್ ಆಗಲಿದೆ.

ಬಾಬಿ ಕೊಲ್ಲಿ ಅವರು ‘ಡಾಕು ಮಹಾರಾಜ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬಾಲಯ್ಯ ಎದುರು ವಿಲನ್ ಆಗಿ ಬಾಲಿವುಡ್​ ನಟ ಬಾಬಿ ಡಿಯೋಲ್ ಅವರು ನಟಿಸಿದ್ದಾರೆ. ಇದು ಅವರ ಮೊದಲ ತೆಲುಗು ಸಿನಿಮಾ. ಈಗಾಗಲೇ ತಮಿಳಿನಲ್ಲಿ ಸೂರ್ಯ ಎದುರು ವಿಲನ್ ಆಗಿ ಆರ್ಭಟಿಸಿದ ಬಾಬಿ ಡಿಯೋಲ್ ಅವರು ಈಗ ಟಾಲಿವುಡ್​ನಲ್ಲಿ ಖಾತೆ ತೆರೆಯುತ್ತಿದ್ದಾರೆ. ಟ್ರೇಲರ್​ನಲ್ಲಿ ಅವರ ಪಾತ್ರ ಹೈಲೈಟ್ ಆಗಿದೆ.

‘ಡಾಕು ಮಹಾರಾಜ್’ ಟ್ರೇಲರ್​:

ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆಯೇ ‘ಡಾಕು ಮಹಾರಾಜ್’ ಸಿನಿಮಾದ ಟ್ರೇಲರ್​ ಮೂಡಿಬಂದಿದೆ. ಈ ಸಿನಿಮಾಗೆ ನಾಗ ವಂಶಿ ಅವರು ಬಂಡವಾಳ ಹೂಡಿದ್ದಾರೆ. ಸಖತ್ ಅದ್ದೂರಿಯಾಗಿ ಸಿನಿಮಾ ಮೂಡಿಬಂದಿದೆ ಎಂಬುದಕ್ಕೆ ಟ್ರೇಲರ್​ ಸಾಕ್ಷಿಯಾಗಿದೆ. ಬಾಲಯ್ಯ ಫ್ಯಾನ್ಸ್ ಬಯಸುವ ಭರ್ಜರಿ ಆ್ಯಕ್ಷನ್​ ಸನ್ನಿವೇಶಗಳು ಕೂಡ ಈ ಸಿನಿಮಾದಲ್ಲಿ ಇವೆ. ಸಂಕ್ರಾಂತಿ ಪ್ರಯುಕ್ತ ರಿಲೀಸ್​ ಆಗಲಿರುವ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ಜೂ ಎನ್​ಟಿಆರ್ ಅಭಿಮಾನಿಗಳಿಗೆ ಎಚ್ಚರಿಕೆ ಕೊಟ್ಟ ನಂದಮೂರಿ ಕುಟುಂಬದ ನಟ

‘ಡಾಕು ಮಹಾರಾಜ್’ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ಅವರು ಎರಡು ಗೆಟಪ್​ನ ಪಾತ್ರ ಮಾಡಿದ್ದಾರೆ. ಅದರ ಹಿಂದಿರುವ ಕಥೆ ಏನು ಎಂಬುದನ್ನು ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಥಮನ್ ಅವರ ಸಂಗೀತಕ್ಕೂ ಟ್ರೇಲರ್​ನಲ್ಲಿ ಮೆಚ್ಚುಗೆ ಸಿಗುತ್ತಿದೆ. ಈ ಸಿನಿಮಾದಲ್ಲಿ ಬಾಲಯ್ಯ ಜೊತೆ ಪ್ರಗ್ಯಾ ಜೈಸ್ವಾಲ್, ಚಾಂದಿನಿ ಚೌದರಿ, ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ಕೂಡ ನಟಿಸಿದ್ದಾರೆ. ‘ಡಾಕು ಮಹಾರಾಜ್’ ಟ್ರೇಲರ್​ಗೆ ಜನರಿಂದ ಪಾಸಿಟಿವ್ ಪ್ರತಿಕ್ರಿಯೆ ಸಿಗುತ್ತಿದೆ. ಕೆಲವೇ ಗಂಟೆಗಳಲ್ಲಿ ಮಿಲಿಯನ್​ಗಟ್ಟಲೆ ವೀಕ್ಷಣೆ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!