AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhananjay: ಸಪ್ತಪದಿ ತುಳಿಯುವಾಸೆಗೆ ಪಾದಯಾತ್ರೆ ಹೊರಟ ಬ್ರಹ್ಮಚಾರಿಗಳು, ಜೊತೆಗೆ ಹೆಜ್ಜೆ ಹಾಕಿದ ಡಾಲಿ

ಮದುವೆಗೆ ಹೆಣ್ಣು ಸಿಗದೆ ನೊಂದಿರುವ ಬ್ರಹ್ಮಾಚಾರಿಗಳ ಪರ ನಿಂತಿರುವ ನಟ ಡಾಲಿ ಧನಂಜಯ್ (Daali Dhananjay), ಮದುವೆಯಾಗಲೆಂದು ಹರಕೆ ಹೊತ್ತು ಪಾದಯಾತ್ರೆ ಹೊರಟ ಬ್ರಹ್ಮಚಾರಿಗಳಿಗೆ ಶುಭ ಹಾರೈಸಿದ್ದಾರೆ. ಮಾತ್ರವಲ್ಲ ತಾವೂ ಸಹ ಜೊತೆಗೆ ಹೆಜ್ಜೆ ಹಾಕಿದ್ದಾರೆ.

Dhananjay: ಸಪ್ತಪದಿ ತುಳಿಯುವಾಸೆಗೆ ಪಾದಯಾತ್ರೆ ಹೊರಟ ಬ್ರಹ್ಮಚಾರಿಗಳು, ಜೊತೆಗೆ ಹೆಜ್ಜೆ ಹಾಕಿದ ಡಾಲಿ
ಅವಿವಾಹಿತರ ಪಾದಯಾತ್ರೆ ಉದ್ಘಾಟಿಸಿದ ಡಾಲಿ ಧನಂಜಯ್
Follow us
ಮಂಜುನಾಥ ಸಿ.
|

Updated on:Feb 23, 2023 | 11:54 AM

ವಯಸ್ಸು ಏರುತ್ತಿದೆ ಆದರೆ ಮದುವೆಗೆ ಯಾರೂ ಹೆಣ್ಣು ಕೊಡುತ್ತಿಲ್ಲವೆಂದು ರೊಚ್ಚಿಗೆದ್ದ ಕೆಲ ಬ್ರಹ್ಮಚಾರಿ  (Bachelor) ಯುವಕರು ಮದುವೆಯಾಗಲೆಂದು ಹರಕೆ ಹೊತ್ತು ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದು ಈ ಪಾದಯಾತ್ರೆಗೆ ಸ್ಯಾಂಡಲ್​ವುಡ್​ನ (Sandalwood) ಮೋಸ್ಟ್ ಎಲಿಜಿಬೆಲ್ ಬ್ಯಾಚುಲರ್ ಡಾಲಿ ಧನಂಜಯ್ (Daali Dhananjay) ಚಾಲನೆ ನೀಡಿದ್ದಾರೆ.

ಮಂಡ್ಯ ಜಿಲ್ಲೆ ಕೆ.ಎಂ.ದೊಡ್ಡಿ ಗ್ರಾಮದ ವೆಂಕಟೇಶ್ವರಸ್ವಾಮಿ ದೇವಾಲಯದಿಂದ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿ ಯುವಕರು ಪಾದಯಾತ್ರೆ ಆರಂಭಿಸಿದ್ದಾರೆ. ಈ ಪಾದಯಾತ್ರೆಗೆ ಚಾಲನೆ ನೀಡಿರುವ ಡಾಲಿ ಧನಂಜಯ್ ಕೆಲ ದೂರ ಅವಿವಾಹಿತ ಯುವಕರೊಂದಿಗೆ ತಾವೂ ಹೆಜ್ಜೆ ಹಾಕಿದರು. ಈ ಸಮಯದಲ್ಲಿ ಮತ್ತೊಬ್ಬ ನಟ ನಾಗಭೂಷಣ್ ಸಹ ಇದ್ದರು.

ಬ್ರಹ್ಮಚಾರಿಗಳ ನೋವು ಆಲಿಸಿದ ಡಾಲಿ ಧನಂಜಯ್ ಹಾಗೂ ನಾಗಭೂಷಣ್, ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ಎಲ್ಲ ಬ್ರಹ್ಮಚಾರಿಗಳು ಮುಂದಿನ ವರ್ಷದ ವೇಳೆಗೆ ಗೃಹಸ್ಥರಾಗಲಿ ಎಂದು ಹಾರೈಸಿ, ಬಡವರ ಮಕ್ಳು ಬೆಳೀಬೇಕು, ರೈತರ ಮಕ್ಳಿಗೆ ಹೆಣ್ಣು ಸಿಗ್ಬೇಕು ಎಂದರು ಡಾಲಿ.

ಈ ಪಾದಯಾತ್ರೆಯಲ್ಲಿ ಕೆ.ಎಂ.ದೊಡ್ಡಿ ಗ್ರಾಮದ ಅವಿವಾಹಿತರು ಮಾತ್ರವೇ ಅಲ್ಲದೆ ಇನ್ನೂ ಕೆಲವು ಗ್ರಾಮಗಳ ಅವಿವಾಹಿತ ಯುವಕರು ಹಾಗೂ ಹೊರ ರಾಜ್ಯದ ಇಬ್ಬರು ಯುವಕರು ಸಹ ಭಾಗವಹಿಸಿದ್ದು ವಿಶೇಷ. ಪಾದಯಾತ್ರೆ ತಂಡದಲ್ಲಿರುವ ಬಹುತೇಕರು ರೈತರ ಮಕ್ಕಳು, ಸ್ವತಃ ಯುವ ರೈತರೇ ಆಗಿದ್ದಾರೆ.

ಪಾದಯಾತ್ರೆಯಲ್ಲಿ ಪಾಲ್ಗೊಂಡವರಿಗೆ ಊಟ, ವಸತಿ ಹಾಗೂ ಪಾನೀಯದ ವ್ಯವಸ್ಥೆಯನ್ನು ಆಯೋಜಕರೇ ಮಾಡಿದ್ದು, ಕೆಎಂ ದೊಡ್ಡಿ, ಮಳವಳ್ಳಿ, ಕೊಳ್ಳೆಗಾಲ, ಹನೂರು ಮಾರ್ಗವಾಗಿ ಮೂರು ದಿನಗಳ ನಡೆದು ಈ ತಂಡವು ಮಲೆ ಮಾದೇಶ್ವರ ಬೆಟ್ಟ ಸೇರಿಕೊಳ್ಳಲಿದೆ.

ಗ್ರಾಮೀಣ ಭಾಗದ ಯುವಕರಿಗೆ ಮದುವೆಯಾಗಲು ಹೆಣ್ಣು ಕೊಡುತ್ತಿಲ್ಲ, ಅದರಲ್ಲಿಯೂ ರೈತರ ಮನೆ ಮಕ್ಕಳನ್ನಂತೂ ಹೆಣ್ಣು ಹೆತ್ತವರು ತೀರ ಅವಗಣನೆ ಮಾಡಿದ್ದಾರೆ ಎಂದು ಕೆಲ ಅವಿವಾಹಿತ ಯುವಕರು ಬೇಸರ ವ್ಯಕ್ತಪಡಿಸಿದ್ದಾರೆ. ಹೀಗೆ ಕಡೆಗಣನೆಗೆ ಒಳಗಾದ ಅವಿವಾಹಿತರಿಗೆ ವಿವಾಹವಾಗಲೆಂದು ಈ ಪಾದಯಾತ್ರೆಯನ್ನು ಪ್ರತಿ ವರ್ಷವೂ ಆಯೋಜಿಸುವುದಾಗಿ ಪಣ ತೊಟ್ಟಿದ್ದಾರೆ ಕೆಎಂ ದೊಡ್ಡಿಯ ಬ್ರಹ್ಮಚಾರಿಗಳು.

ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕೆಲ ಷರತ್ತುಗಳನ್ನು ಸಹ ವಿಧಿಸಿದ್ದಾರೆ. ಕಡ್ಡಾಯವಾಗಿ 30 ವರ್ಷದ ದಾಟಿದ ಅವಿವಾಹಿತರಷ್ಟೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಬಹುದು. ಮದುವೆಯಾದವರಿಗೆ ಪಾದಯಾತ್ರೆ ಮಾಡಲು ಅವಕಾಶವಿಲ್ಲ. ನಿಶ್ಚಿತಾರ್ಥ ಆದವರೂ ಸಹ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:52 am, Thu, 23 February 23

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ