AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಯಲ್ಲಿ ಪ್ರತಾಪ್​ ಸಿಂಹ ವಿರುದ್ಧ ಡಾಲಿ ಸ್ಪರ್ಧಿಸೋದು ನಿಜವೇ? ಉತ್ತರಿಸಿದ ಧನಂಜಯ

ಅನೇಕ ನಟ-ನಟಿಯರು ರಾಜಕೀಯಕ್ಕೆ ಬಂದು ಯಶಸ್ಸು ಕಂಡಿದ್ದಾರೆ. ಅದೇ ರೀತಿ ಡಾಲಿ ಧನಂಜಯ್​ ಕೂಡ ರಾಜಕೀಯಕ್ಕೆ ಎಂಟ್ರಿ ನೀಡುತ್ತಾರಾ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ. ಲೋಕಸಭಾ ಚುನಾವಣೆಯಲ್ಲಿ ಅವರು ಸ್ಪರ್ಧಿಸಬಹುದು ಎಂಬ ಗುಮಾನಿ ಕೂಡ ಕೆಲವರಿಗೆ ಇದೆ. ಈ ಕುರಿತಾಗಿ ಡಾಲಿ ಧನಂಜಯ್​ ಅವರು ಮೊದಲ ಬಾರಿಗೆ ಮಾತನಾಡಿದ್ದಾರೆ. ತಮ್ಮ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಚುನಾವಣೆಯಲ್ಲಿ ಪ್ರತಾಪ್​ ಸಿಂಹ ವಿರುದ್ಧ ಡಾಲಿ ಸ್ಪರ್ಧಿಸೋದು ನಿಜವೇ? ಉತ್ತರಿಸಿದ ಧನಂಜಯ
ಡಾಲಿ ಧನಂಜಯ್​, ಪ್ರತಾಪ್​ ಸಿಂಹ
ಮದನ್​ ಕುಮಾರ್​
|

Updated on: Feb 22, 2024 | 7:26 AM

Share

ಖ್ಯಾತ ನಟ ಡಾಲಿ ಧನಂಜಯ್​ (Daali Dhananjay) ಅವರು ಸಮಾಜದ ಕೆಲವು ಆಗುಹೋಗುಗಳ ಬಗ್ಗೆ ಧ್ವನಿ ಎತ್ತುತ್ತಾರೆ. ಹಾಗಾಗಿ ಅವರು ರಾಜಕೀಯಕ್ಕೆ ಬರಲಿ ಎಂಬ ಆಸೆ ಕೆಲವರಿಗೆ ಇದೆ. ಇತ್ತೀಚೆಗೆ ಆ ಬಗ್ಗೆ ಒಂದು ಗಾಸಿಪ್​ ಹಬ್ಬಿತ್ತು. ಲೋಕಸಭಾ (Loksabha Elections) ಚುನಾವಣೆಯಲ್ಲಿ ಪ್ರತಾಪ್​ ಸಿಂಹ (Prathap Simha) ವಿರುದ್ಧ ಡಾಲಿ ಧನಂಜಯ ಸ್ಪರ್ಧಿಸುತ್ತಾರೆ ಎಂಬ ಗಾಳಿಸುದ್ದಿ ಹರಡಿದೆ. ಈ ಬಗ್ಗೆ ಮೊದಲ ಬಾರಿಗೆ ಧನಂಜಯ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಫೋಟೋ’ ಸಿನಿಮಾದ ಟ್ರೇಲರ್​ ಲಾಂಚ್​ ಕಾರ್ಯಕ್ರಮಕ್ಕೆ ಬಂದಿದ್ದ ಅವರು ಈ ಬಗ್ಗೆ ಮಾತನಾಡಿದ್ದಾರೆ. ಚುನಾವಣೆಯಲ್ಲಿ ನಿಲ್ಲುವ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

‘ಕಲಾವಿದರಾದ ನಾವು ಎಮೋಷನಲ್​ ಆಗಿರುತ್ತೇವೆ. ಹಾಗಾಗಿ ಕೆಲವು ಬೆಳವಣಿಗೆಗಳಿಗೆ ರಿಯಾಕ್ಟ್​ ಮಾಡಿರುತ್ತೇವೆ. ರಾಜಕಾರಣ ಬೇರೆ, ನಾಯಕನಾಗಿರುವುದು ಬೇರೆ. ಅದಕ್ಕೆ ಅದರದ್ದೇ ಆದಂತಹ ಗುಣಗಳು ಇರುತ್ತವೆ. ಅದನ್ನೆಲ್ಲ ನಿಭಾಯಿಸುವ ಶಕ್ತಿ ಇರಬೇಕು. ಅದಕ್ಕೆಲ್ಲ ಸದ್ಯಕ್ಕೆ ನಾನು ಸಿದ್ಧನಿಲ್ಲ’ ಎಂದು ಡಾಲಿ ಹೇಳಿದ್ದಾರೆ. ಒಂದು ವೇಳೆ ಆಫರ್​ ಬಂದರೆ ರಾಜಕೀಯಕ್ಕೆ ಹೋಗುತ್ತೀರಾ ಎಂದು ಕೇಳಿದ್ದಕ್ಕೆ ‘ಖಂಡಿತಾ ಇಲ್ಲ’ ಎಂದು ಅವರು ಉತ್ತರಿಸಿದ್ದಾರೆ.

ಇದನ್ನೂ ಓದಿ: ಬಜೆಟ್​ನಲ್ಲಿ ಡಾಲಿ ಸಾಹಿತ್ಯ; ‘ಡೇರ್​ಡೆವಿಲ್​ ಮುಸ್ತಾಫಾ’ ಚಿತ್ರದ ಸಾಲು ಓದಿದ ಸಿಎಂ

‘ನೀವು ಗಮನಿಸಿರಬಹುದು. ಬೇರೆ ಅಭ್ಯರ್ಥಿಗಳ ಪರವಾಗಿ ನಾನು ಚುನಾವಣಾ ಪ್ರಚಾರಗಳಿಗೆ ಹೋಗಿಲ್ಲ. ಯಾರೂ ಕರೆದಿಲ್ಲ ಅಂತೇನೂ ಇಲ್ಲ. ನನಗೂ ಎಲ್ಲ ಪಕ್ಷಗಳಲ್ಲಿ ಗೆಳೆಯರು ಇದ್ದಾರೆ. ಕರೆದಿದ್ದರೂ ಕೂಡ ನಾನು ಎಲೆಕ್ಷನ್​ ಪ್ರಚಾರಕ್ಕೆ ಹೋಗಿಲ್ಲ. ಯಾಕೆಂದರೆ, ಅದರಲ್ಲಿ ತೊಡಗಿಕೊಳ್ಳಲು ನನಗೆ ಇಷ್ಟ ಇಲ್ಲ. ನಾನು ಕಾಮನ್​ ಮ್ಯಾನ್​ ಆಗಿ ಇರುಲು ಇಷ್ಟಪಡುತ್ತೇನೆ. ಈ ಬಾರಿ ಕೂಡ ಎಲೆಕ್ಷನ್ ಕ್ಯಾಂಪೇನ್​ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ’ ಎಂದು ಡಾಲಿ ಧನಂಜಯ ಹೇಳಿದ್ದಾರೆ.

ಇದನ್ನೂ ಓದಿ: ಸೆಟ್ಟೇರಿತು ಡಾಲಿ ನಿರ್ಮಾಣದ ಹೊಸ ಸಿನಿಮಾ ‘ಜೆಸಿ’; ಈ ಚಿತ್ರಕ್ಕೆ ಪ್ರಖ್ಯಾತ್​ ಹೀರೋ

‘ರಾಜಕಾರಣ ನನಗೆ ಗೊತ್ತಿಲ್ಲ. ಸಮಾಜದಲ್ಲಿ ಕೆಳಗೆ ಇರುವ ಜನರನ್ನು ಮೇಲಕ್ಕೆ ಎತ್ತುವ ಕೆಲಸ ಮಾಡುವವನೇ ಒಳ್ಳೆಯ ನಾಯಕ. ಅವರು ಯಾವ ಪಕ್ಷದಲ್ಲಾದರೂ ಇರಲಿ. ಅವರಿಗೆ ಸ್ಪಂದಿಸುವವರೆಲ್ಲ ಒಳ್ಳೆಯ ಪ್ರಜೆಗಳು’ ಎಂದು ಡಾಲಿ ಧನಂಜಯ್​ ಹೇಳಿದ್ದಾರೆ. ಕರ್ನಾಟಕ ಸರ್ಕಾರದ ಲಿಡ್ಕರ್​ ಉತ್ಪನ್ನಗಳಿಗೆ ಧನಂಜಯ್​ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಇತ್ತೀಚೆಗೆ ಬಜೆಟ್​ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಅವರು ಡಾಲಿ ಬರೆದ ಸಾಲುಗಳನ್ನು ಓದಿದ್ದರು. ಈ ಎಲ್ಲ ಕಾರಣಗಳಿಂದಾಗಿ ಧನಂಜಯ್​ ಹೆಸರು ರಾಜಕೀಯ ವಲಯದಲ್ಲಿ ಹೆಚ್ಚು ಕೇಳಿಬರಲು ಆರಂಭಿಸಿದೆ. ತಮ್ಮ ಬಗ್ಗೆ ಹಬ್ಬಿದ್ದ ಗಾಸಿಪ್​ಗಳಿಗೆ ಅವರು ಉತ್ತರ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!