AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದರ್ ಪ್ರಾಮಿಸ್’ ಸಿನಿಮಾ ಬಗ್ಗೆ ನೆಗೆಟಿವ್ ಪ್ರಚಾರ, ಡಾಲಿ ಬೇಸರ

Daali Dhananjay: ‘ಮದರ್ ಪ್ರಾಮಿಸ್’ ಸಿನಿಮಾದ ಶೋಗಳು ಸಹ ಚೆನ್ನಾಗಿ ಹೌಸ್ ಫುಲ್ ಆಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಹ ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯಗಳು ಹರಿದಾಡುತ್ತಿವೆ. ಆದರೆ ಇವುಗಳ ಜೊತೆಯಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಸಿನಿಮಾದ ಬಗ್ಗೆ ಋಣಾತ್ಮಕ ಅಭಿಪ್ರಾಯ ಬಿತ್ತುವ ಪ್ರಯತ್ನದಲ್ಲಿ ನಿರತರಾಗಿದ್ದು, ಅಂಥಹವರ ಬಗ್ಗೆ ಡಾಲಿ ಧನಂಜಯ್ ಬೇಸರ ಹೊರಹಾಕಿದ್ದಾರೆ.

‘ಮದರ್ ಪ್ರಾಮಿಸ್’ ಸಿನಿಮಾ ಬಗ್ಗೆ ನೆಗೆಟಿವ್ ಪ್ರಚಾರ, ಡಾಲಿ ಬೇಸರ
Mother Promise
ಮಂಜುನಾಥ ಸಿ.
|

Updated on: Jul 12, 2026 | 9:42 PM

Share

ಡಾಲಿ ಧನಂಜಯ್ (Daali Dhananjay) ನಟಿಸಿ, ನಿರ್ಮಾಣವನ್ನೂ ಮಾಡಿರುವ ‘ಮದರ್ ಪ್ರಾಮಿಸ್’ ಸಿನಿಮಾ ಕೆಲವೇ ದಿನಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಈಗಾಗಲೇ ಸಿನಿಮಾ ನೋಡಿರುವವರು ಇದೊಂದು ಒಳ್ಳೆಯ ಸದಭಿರುಚಿಯ ಹಾಸ್ಯ ಪ್ರಧಾನ ಸಿನಿಮಾ ಎಂದು ಮೆಚ್ಚಿಕೊಳ್ಳುತ್ತಿದ್ದಾರೆ. ಸಿನಿಮಾದ ಶೋಗಳು ಸಹ ಚೆನ್ನಾಗಿ ಹೌಸ್ ಫುಲ್ ಆಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಹ ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯಗಳು ಹರಿದಾಡುತ್ತಿವೆ. ಆದರೆ ಇವುಗಳ ಜೊತೆಯಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಸಿನಿಮಾದ ಬಗ್ಗೆ ಋಣಾತ್ಮಕ ಅಭಿಪ್ರಾಯ ಬಿತ್ತುವ ಪ್ರಯತ್ನದಲ್ಲಿ ನಿರತರಾಗಿದ್ದು, ಅಂಥಹವರ ಬಗ್ಗೆ ಡಾಲಿ ಧನಂಜಯ್ ಬೇಸರ ಹೊರಹಾಕಿದ್ದಾರೆ.

ಸಿನಿಮಾದ ಪ್ರೀಮಿಯರ್ ಶೋ ನೋಡಿದವರು, ಫಸ್ಟ್ ಡೇ ಫಸ್ಟ್ ಶೋ ನೋಡಿದವರು ಇನ್ನೂ ಕೆಲವರು ಸಿನಿಮಾದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದು, ಅದರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಆದರೆ ಕೆಲವರು ಸಿನಿಮಾದ ಬಗ್ಗೆ ನೆಗೆಟಿವ್ ವಿಮರ್ಶೆಗಳನ್ನು ಸಹ ಹಂಚಿಕೊಂಡಿದ್ದಾರೆ. ಕೆಲವರಂತೂ ಖಾಲಿ ಚಿತ್ರಮಂದಿರದ ವಿಡಿಯೋ ಹಂಚಿಕೊಂಡು, ‘ಸಿನಿಮಾದ ಗತಿ ಇದು’ ಎಂದೆಲ್ಲ ಹೇಳಿದ್ದಾರೆ. ಕೆಲವರು ಬುಕ್​ ಮೈ ಶೋ ಅಪ್ಲಿಕೇಶನ್​​ನಲ್ಲಿ ಉದ್ದೇಶಪೂರ್ವಕವಾಗಿ ಸಿನಿಮಾದ ಬಗ್ಗೆ ನೆಗೆಟಿವ್ ವಿಮರ್ಶೆಗಳನ್ನು ಹಂಚಿಕೊಂಡಿದ್ದು, ಸಿನಿಮಾದ ರೇಟಿಂಗ್ ಬೀಳಿಸುವ ಪ್ರಯತ್ನವನ್ನೂ ಸಹ ಮಾಡಿದ್ದಾರೆ.

ಇದೀಗ ನಟ ಡಾಲಿ ಧನಂಜಯ್, ಅಂಥಹವರ ಬಗ್ಗೆ ಇನ್​​ಸ್ಟಾಗ್ರಾಂ ಪೋಸ್ಟ್ ಹಂಚಿಕೊಂಡಿದ್ದು, ‘ಜನ ಸಿನಿಮಾ ನೋಡುವ ಮುಂಚೆಯೇ ಆ ಸಿನಿಮಾವನ್ನು ಇಲ್ಲದ ಹಾಗೆ ಮಾಡುವುದೇ ಕೆಲವರ ಗುರಿ ಆಗಿದೆ. ನೀವು ರೇಟಿಂಗ್ಸ್ ಬೇಕಾದರೆ ಬದಲಾವಣೆ ಮಾಡಬಹುದು ಆದರೆ ಜನರ ಭಾವನೆಗಳನ್ನು, ಅವರ ಪ್ರೀತಿಯನ್ನು ಬದಲಾಯಿಸಲು ಸಾಧ್ಯವಿಲ್ಲ’ ಎಂದಿದ್ದಾರೆ. ಜೊತೆಗೆ ಸಿನಿಮಾ ನೋಡಿದ ಜನ ವ್ಯಕ್ತಪಡಿಸಿರುವ ಅಭಿಪ್ರಾಯಗಳ ವಿಡಿಯೋ ತುಣುಕುಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಕೊನೆಗೂ ಒಟಿಟಿಗೆ ಬರುತ್ತಿದೆ ದರ್ಶನ್ ಸಿನಿಮಾ ‘ಡೆವಿಲ್’: ಎಲ್ಲಿ? ಯಾವಾಗ?

ಜೊತೆಗೆ ಹಲವರು ತಮ್ಮ ಸಿನಿಮಾದ ಬಗ್ಗೆ ಒಳ್ಳೆಯ ವಿಮರ್ಶೆ ನೀಡಿರುವ ಹಲವಾರು ಟ್ವೀಟ್​​ಗಳನ್ನು ಹಂಚಿಕೊಂಡಿರುವ ಜೊತೆಗೆ ಕೆಲವರು ಏನೆಲ್ಲ ಪ್ರಯತ್ನ ಮಾಡಿದ ಬಳಿಕವೂ ಬುಕ್​​ ಮೈ ಶೋನಲ್ಲಿ ತಮ್ಮ ಸಿನಿಮಾ ಟ್ರೆಂಡಿಂಗ್​ ನಲ್ಲಿರುವುದು ಹಾಗೂ ರೇಟಿಂಗ್ ಸಹ ಉತ್ತಮವಾಗಿಯೇ ಇರುವುದನ್ನು ಸಹ ತೋರಿಸಿದ್ದಾರೆ. ಜೊತೆಗೆ, ‘ಪ್ರತಿಯೊಬ್ಬರಿಗೂ ಅವರದ್ದೇ ಆದ ಅಭಿಪ್ರಾಯ ಇರುತ್ತದೆ. ಮೊದಲು ನೀವು ಸಿನಿಮಾ ನೋಡಿ, ನಿಮ್ಮ ಅಭಿಪ್ರಾಯ ಸ್ವಂತವಾಗಿ ರೂಪಿಸಿಕೊಳ್ಳಿ’ ಎಂದಿದ್ದಾರೆ ಡಾಲಿ.

ಮುಂದುವರೆದು, ‘ತುಂಬಾ ಜನಕ್ಕೆ ‘ಮದರ್ ಪ್ರಾಮಿಸ್’ ಸಿನಿಮಾ ಇಷ್ಟ ಆಗುತ್ತಿದೆ. ಕೆಲವರಿಗೆ ಇಷ್ಟ ಆಗದೆ ಕೂಡ ಇರಬಹುದು, ಅದನ್ನ ಹೇಳಿದರೆ ನಾವು ಕ್ರೀಡಾಸ್ಪೂರ್ತಿಯಿಂದ ತೆಗೆದುಕೊಳ್ಳುತ್ತೇವೆ. ವಿಮರ್ಶೆಗಳ ಸಾಮಾನ್ಯ. ಆದರೆ ಉದ್ದೇಶಪೂರ್ವಕವಾಗಿ, ಚೆನ್ನಾಗಿ ಓಡುತ್ತಿರುವ ಸಿನಿಮಾನ ಸಾಯಿಸೋಕೆ, ಒಂದು ದ್ವೇಷಪೂರಿತ ಪ್ರಯತ್ನ ಮಾಡೋದು, ಚಿತ್ರರಂಗಕ್ಕೆ ಒಳ್ಳೆಯದಲ್ಲ. ಇದು ಚೆನ್ನಾಗಿ ಓಡುವ ಎಲ್ಲ ಸಿನಿಮಾಗಳಿಗೂ ಆಗುತ್ತಾ ಇದೆ. ಇದೇ ಕಾರಣಕ್ಕೆ ಎಲ್ಲ ನಿರ್ಮಾಪಕರು ನ್ಯಾಯಾಲಯದಿಂದ ಇಂದ ಆದೇಶ ತಂದು ಬುಕ್​ ಮೈ ಶೋನಲ್ಲಿ ರೇಟಿಂಗ್ಸ್ ಮತ್ತು ಕಮೆಂಟ್ಸ್ ನ ತೆಗೆದು ಹಾಕಿಸುತ್ತಿದ್ದಾರೆ. ಅದರಿಂದ ಪ್ರಾಮಾಣಿಕ ವಿಮರ್ಶೆಗಳಿಗೂ ತಡೆಯೊಡ್ಡಿದಂಗೆ ಆಗತ್ತೆ. ಒಂದು ಆರೋಗ್ಯಕರ ವ್ಯವಸ್ಥೆ ನಿರ್ಮಾಣ ಆಗಬೇಕು. ಈ ಕೆಟ್ಟ ಸಂಸ್ಕೃತಿ ನಿಲ್ಲಬೇಕು’ ಎಂದಿದ್ದಾರೆ ಡಾಲಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು