AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ನಟಿಸಲ್ಲ; ಕಠಿಣ ನಿರ್ಧಾರಕ್ಕೆ ಕಾರಣ ತಿಳಿಸಿದ ಅನಂತ್ ನಾಗ್

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ಅನಂತ್ ನಾಗ್ ಇನ್ಮುಂದೆ ನಟಿಸದಿರಲು ನಿರ್ಧರಿಸಿದ್ದಾರೆ. ಇತ್ತೀಚಿನ ಕಥೆಗಳ ಗುಣಮಟ್ಟ ಕುಸಿಯುತ್ತಿದ್ದು, ಸಿನಿಮಾಗಳು ಕೇವಲ ಬಾಕ್ಸ್ ಆಫೀಸ್ ಗಳಿಕೆಗೆ ಸೀಮಿತವಾಗಿರುವುದೇ ತಮ್ಮ ಈ ನಿರ್ಧಾರಕ್ಕೆ ಮುಖ್ಯ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ. ಅವರಿಗೆ ಅನಾರೋಗ್ಯ ಉಂಟಾಗಿದೆ ಎಂಬ ವದಂತಿ ಇತ್ತು. ಅದನ್ನು ಅವರು ಅಲ್ಲಗಳೆದಿದ್ದಾರೆ. 

ಇನ್ಮುಂದೆ ನಟಿಸಲ್ಲ; ಕಠಿಣ ನಿರ್ಧಾರಕ್ಕೆ ಕಾರಣ ತಿಳಿಸಿದ ಅನಂತ್ ನಾಗ್
ಅನಂತ್ ನಾಗ್
ರಾಜೇಶ್ ದುಗ್ಗುಮನೆ
|

Updated on:Sep 18, 2026 | 1:14 PM

Share

ಮುಖ್ಯಾಂಶಗಳು

  • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದರೂ ನಟನೆಯಿಂದ ದೂರ
  • ಅನಂತ್ ನಾಗ್ ಅವರ ದಿಢೀರ್ ನಿರ್ಧಾರ
  • ಇಂದಿನ ಸಿನಿಮಾ ಸಂಸ್ಕೃತಿಯ ವಿರುದ್ಧ ಹಿರಿಯ ನಟ ಗರಂ

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ಹಿರಿಯ ನಟ ಅನಂತ್ ನಾಗ್, ತಾವು ಮತ್ತೆ ಬಣ್ಣದ ಪ್ರಪಂಚಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಶಸ್ತಿ ಬಂದ ಖುಷಿಯ ನಡುವೆಯೇ, ಇಂದಿನ ಸಿನಿಮಾ ರಂಗದ ಬದಲಾದ ಆದ್ಯತೆಗಳು ಮತ್ತು ಕಥೆಗಳ ಕಳಪೆ ಗುಣಮಟ್ಟದ ಬಗ್ಗೆ ಅವರು ತಮ್ಮ ತೀವ್ರ ಅಸಮಾಧಾನವನ್ನು ಹೊರಹಾಕಿದ್ದಾರೆ.

ಚಿತ್ರರಂಗದಲ್ಲಿ ಕಥೆ ಮತ್ತು ವಿಷಯ ಆಧಾರಿತ ಸಿನಿಮಾಗಳಿಗಿಂತ ಕೇವಲ ಬಾಕ್ಸ್ ಆಫೀಸ್ ಕಲೆಕ್ಷನ್ ಹಾಗೂ ಹಣಕ್ಕೆ ಮಾತ್ರ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಅನಂತ್ ನಾಗ್ ವಿಮರ್ಶಿಸಿದ್ದಾರೆ. ಇತ್ತೀಚೆಗೆ ಕಥೆಗಳ ಗುಣಮಟ್ಟ ಸಂಪೂರ್ಣವಾಗಿ ಕುಸಿಯುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ವಿಷಯ ಅವರಿಗೆ ತೀವ್ರ ಬೇಸರ ಮೂಡಿಸಿದೆ.

‘ನಾನು ಒಪ್ಪಿಕೊಂಡ ಕೊನೆಯ ಐದೂ ಸಿನಿಮಾಗಳು ಸೋತವು. ಆ ಕ್ಷಣವೇ ನನಗೆ ಅನಿಸಿತು – ಇಷ್ಟಕ್ಕೇ ಸಾಕು, ಇದನ್ನೆಲ್ಲಾ ಬಿಟ್ಟುಬಿಡಬೇಕು. ನಾನು ಇನ್ಮುಂದೆ ನಟಿಸಬಾರದು ಎಂದು ನಿರ್ಧರಿಸಿದೆ’ ಎಂದು ತಮ್ಮ ನಿವೃತ್ತಿಯ ಹಿಂದಿನ ಅಸಲಿ ಕಾರಣವನ್ನು ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ

ಅಲ್ಲದೆ, ತಾವು ನಟನೆಯಿಂದ ದೂರವುಳಿಯಲು ಯಾವುದೇ ಆರೋಗ್ಯ ಸಮಸ್ಯೆ ಕಾರಣವಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಪೀಳಿಗೆಯ ಯಾವುದೇ ಸಮಕಾಲೀನ ನಿರ್ದೇಶಕರ ಜೊತೆ ಕೆಲಸ ಮಾಡಲು ತಮಗೆ ಆಸಕ್ತಿ ಇಲ್ಲ ಎಂದಿರುವ ಅವರು, ಉತ್ತಮ ವಿಷಯ ಮತ್ತು ಪ್ರೇಕ್ಷಕರನ್ನು ಕಡೆಗಣಿಸಿ ಬರೀ ಕಲೆಕ್ಷನ್ ಬೆನ್ನತ್ತಿರುವ ಇಂದಿನ ಸಿನಿಮಾ ಸಂಸ್ಕೃತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಅನಂತ್ ನಾಗ್ ಅವರು ಐದು ದಶಕಗಳ ಕಾಲ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ಅವರು ಇಷ್ಟು ಕಠಿಣ ನಿರ್ಧರ ತೆಗೆದುಕೊಂಡಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಚಿತ್ರರಂಗಕ್ಕೆ ಮರಳಬೇಕು ಎಂಬುದು ಅನೇಕರ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:02 pm, Fri, 18 September 26

Follow Us
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಕರ್ಕಾಟಕ ರಾಶಿಗೆ ಕುಜ ಗ್ರಹ ಪ್ರವೇಶ ಇಂದು: ದ್ವಾದಶ ರಾಶಿಗಳ ದಿನ ಭವಿಷ್ಯ
ಕರ್ಕಾಟಕ ರಾಶಿಗೆ ಕುಜ ಗ್ರಹ ಪ್ರವೇಶ ಇಂದು: ದ್ವಾದಶ ರಾಶಿಗಳ ದಿನ ಭವಿಷ್ಯ
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ