AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್ ವಿವಾದದ ಬಳಿಕ ‘ಪುಷ್ಪ 2’ ಸಿನಿಮಾದ ಹಾಡಿಗೆ ಕತ್ತರಿ

Pushpa 2: ಅಲ್ಲು ಅರ್ಜುನ್ ಬಂಧನ, ಬಿಡುಗಡೆ ಆ ಬಳಿಕ ನಡೆದ ಬೆಳವಣಿಗೆಗಳ ಬಳಿಕ ಅಲ್ಲು ಅರ್ಜುನ್ ತುಸು ತಗ್ಗಿದ್ದಾರೆ, ಅಲ್ಲು ಅರ್ಜುನ್ ಮಾತ್ರವಲ್ಲ ಇಡೀ ‘ಪುಷ್ಪ 2’ ಚಿತ್ರತಂಡ ಕೊಂಚ ತಗ್ಗಿದೆ. ಪರಿಸ್ಥಿತಿ ಸೂಕ್ಷ್ಮವಾಗಿದ್ದು ಯಾರನ್ನೂ ಯಾವ ರೀತಿಯಲ್ಲಿಯೂ ಪ್ರಚೋದನೆಗೆ ಒಳಪಡಿಸ ಬಾರದು ಎಂಬ ಕಾರಣಕ್ಕೆ ‘ಪುಷ್ಪ 2’ ಸಿನಿಮಾದಲ್ಲಿದ್ದ ಒಂದು ಹಾಡನ್ನು ಸಹ ತೆಗೆದು ಹಾಕಲಾಗಿದೆ.

ಅಲ್ಲು ಅರ್ಜುನ್ ವಿವಾದದ ಬಳಿಕ ‘ಪುಷ್ಪ 2’ ಸಿನಿಮಾದ ಹಾಡಿಗೆ ಕತ್ತರಿ
Pushpa 2
ಮಂಜುನಾಥ ಸಿ.
|

Updated on: Dec 27, 2024 | 7:21 AM

Share

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿದೆ. ಆದರೆ ಸಿನಿಮಾದ ಯಶಸ್ಸನ್ನು ಎಂಜಾಯ್ ಮಾಡುವ ಸ್ಥಿತಿಯಲ್ಲಿ ಅಲ್ಲು ಅರ್ಜುನ್ ಇಲ್ಲ. ಸಿನಿಮಾ ಬಿಡುಗಡೆ ಆಗಿ ಒಂದೇ ವಾರಕ್ಕೆ ಅಲ್ಲು ಅರ್ಜುನ್ ಅನ್ನು ಪೊಲೀಸರು ಬಂಧಿಸಿದ್ದರು. ಹೇಗೋ ಜಾಮೀನಿನ ಮೇಲೆ ಅಲ್ಲು ಅರ್ಜುನ್ ಹೊರ ಬಂದರಾದರೂ ಆ ನಂತರವೂ ಅಲ್ಲು ಅರ್ಜುನ್ ಅನ್ನು ಪೊಲೀಸರು ವಿಚಾರಣೆಗೆ ಕರೆದಿದ್ದರು, ಅಲ್ಲು ಅರ್ಜುನ್ ಮನೆ ಮೇಲೆ ಕೆಲ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದರು.

ಆದರೆ ಅಲ್ಲು ಅರ್ಜುನ್ ಶಾಂತವಾಗಿಯೇ ಇದ್ದು, ಪತ್ರಿಕಾಗೋಷ್ಠಿ ನಡೆಸಿ ಸಂಧ್ಯಾ ಚಿತ್ರಮಂದಿರ ಕಾಲ್ತುಳಿತ ಪ್ರಕರಣಕ್ಕೆ ಸ್ಪಷ್ಟನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡದೆ ತುಸು ತಗ್ಗಿದ್ದಾರೆ. ಮಾತ್ರವಲ್ಲದೆ, ಸಿನಿಮಾದ ಮೂಲಕವೂ ಯಾರನ್ನೂ ಪ್ರಚೋದಿಸುವುದು ಬೇಡ ಎಂಬ ನಿರ್ಣಯಕ್ಕೆ ಬಂದು ಸಿನಿಮಾದಿಂದ ಒಂದು ಹಾಡನ್ನೇ ತೆಗೆದು ಬಿಟ್ಟಿದೆ ಪುಷ್ಪ 2 ಚಿತ್ರತಂಡ.

ಇದನ್ನೂ ಓದಿ:‘ಪುಷ್ಪ 2’ ಟಿಕೆಟ್​ ಕೊಟ್ಟು ‘ಬೇಬಿ ಜಾನ್’ ನೋಡುವಂತೆ ಒತ್ತಾಯಿಸಿದ ಪ್ರದರ್ಶಕರು

‘ಪುಷ್ಪ 2’ ಸಿನಿಮಾದಲ್ಲಿ ಅಲ್ಲು ಅರ್ಜುನ್ ರಕ್ತ ಚಂದನ ಕಳ್ಳಸಾಗಣೆದಾರರ ಸಿಂಡಿಕೇಟ್​ನ ಮುಖಂಡ. ಸಿನಿಮಾದಲ್ಲಿ ಅಲ್ಲು ಅರ್ಜುನ್ ಅನ್ನು ಹಿಡಿಯಲು ಪೊಲೀಸ್ (ಶೆಖಾವತ್) ಒಬ್ಬ ಬಹಳ ಪ್ರಯತ್ನ ಪಡುತ್ತಿರುತ್ತಾನೆ. ಸೀನ್ ಒಂದರಲ್ಲಿ ಶೆಖಾವತ್​ಗೆ ಸವಾಲು ಹಾಕುವ ಪುಷ್ಪ (ಅಲ್ಲು ಅರ್ಜುನ್) ‘ದಮ್ಮಿದ್ರೆ ನನ್ನ ಅರೆಸ್ಟ್ ಮಾಡೊ ಶೆಖಾವತ್’ ಎಂದು ಹಾಡು ಹೇಳುತ್ತಾ ಸವಾಲು ಹಾಕುವ ದೃಶ್ಯವಿದೆ. ಇತ್ತೀಚೆಗೆ ಅಲ್ಲು ಅರ್ಜುನ್ ಬಂಧನ ಅದಾದ ಬಳಿಕ ನಡೆದ ವಿವಾದಗಳ ಬಳಿಕ ಆ ಹಾಡನ್ನು ಚಿತ್ರತಂಡ ಕತ್ತರಿಸಿ ತೆಗೆದಿದೆ.

ಅಲ್ಲು ಅರ್ಜುನ್ ಬಂಧನವಾಗಿ ಒಂದೇ ದಿನದಲ್ಲಿ ಜಾಮೀನಿನ ಮೇಲೆ ಅಲ್ಲು ಅರ್ಜುನ್ ಹೊರ ಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಆ ಹಾಡು ವೈರಲ್ ಆಗುತ್ತಿದೆ. ಪೊಲೀಸರನ್ನು, ಆಂಧ್ರ ಸಿಎಂ ಅನ್ನು ಕಿಚಾಯಿಸಲು ಆ ಹಾಡನ್ನು ಅಲ್ಲು ಅರ್ಜುನ್ ಅಭಿಮಾನಿಗಳು ಬಳಸುತ್ತಿದ್ದರು. ಇದೇ ಕಾರಣಕ್ಕೆ ಆ ಹಾಡನ್ನು ಚಿತ್ರತಂಡ ತೆಗೆದು ಹಾಕಿದೆ. ಸಿನಿಮಾದಲ್ಲಿ ಪೊಲೀಸರಿಗೆ ಅವಮಾನ ಆಗುವ ಇನ್ನೂ ಕೆಲವು ದೃಶ್ಯಗಳು ಇವೆ ಆದರೆ ಅವುಗಳನ್ನು ತೆಗೆಯಲಾಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ