AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಹಾಡಿಗೆ ಹೆಜ್ಜೆ ಹಾಕಿದ 63 ವರ್ಷದ ಅಜ್ಜಿ; ಇಲ್ಲಿದೆ ವೈರಲ್ ವಿಡಿಯೋ

ರವಿ ಬಾಲಾ ಶರ್ಮಾ ಅವರು ಡ್ಯಾನ್ಸ್​ ಮಾಡುವುದರಲ್ಲಿ ತುಂಬಾನೇ ಫೇಮಸ್. ಅವರ ಎನರ್ಜಿಗೆ ವಯಸ್ಸು ಅಡ್ಡ ಬಂದಿಲ್ಲ. ಸಾಕಷ್ಟು ರೀಲ್ಸ್ ಮಾಡಿ ಅವರು ಪೋಸ್ಟ್ ಮಾಡುತ್ತಾ ಇರುತ್ತಾರೆ. ಇದಕ್ಕೆ ಲಕ್ಷಾಂತರ ವೀವ್ಸ್ ಬರುತ್ತವೆ.

ಬಾಲಿವುಡ್ ಹಾಡಿಗೆ ಹೆಜ್ಜೆ ಹಾಕಿದ 63 ವರ್ಷದ ಅಜ್ಜಿ; ಇಲ್ಲಿದೆ ವೈರಲ್ ವಿಡಿಯೋ
ಡ್ಯಾನ್ಸಿಂಗ್ ದಾದಿ
TV9 Web
| Edited By: |

Updated on: May 25, 2022 | 9:40 PM

Share

ಸಾಕಷ್ಟು ಹಾಡುಗಳು ಅದ್ಯಾವಮಟ್ಟಿಗೆ ಹಿಟ್ ಆಗುತ್ತವೆ ಎಂದರೆ ಎಂದಿಗೂ ಆ ಹಾಡು ಚಾಲ್ತಿಯಲ್ಲಿರುತ್ತದೆ. ಡ್ಯಾನ್ಸ್ ಮಾಡುವವರಿಗೆ ಕೆಲ ಸಾಂಗ್ ಅಚ್ಚುಮೆಚ್ಚು. ಅದೇ ರೀತಿ ಡ್ಯಾನ್ಸಿಂಗ್ ದಾದಿ (Dancing Dadi) ಎಂದೇ ಫೇಮಸ್ ಆಗಿರುವ ರವಿ ಬಾಲಾ ಶರ್ಮಾ (Ravi Bala Sharma) ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್ ಫೇಮಸ್​. ಹಲವು ಹಾಡಿಗೆ ಅವರು ಡ್ಯಾನ್ಸ್ ಮಾಡುತ್ತಾರೆ. ಈಗ 2012ರ ಬಾಲಿವುಡ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ 63 ವರ್ಷದ ಅಜ್ಜಿಯ ಎನರ್ಜಿ ನೋಡಿ ನೆಟ್ಟಿಗರು ಸಖತ್ ಖುಷಿಪಟ್ಟಿದ್ದಾರೆ.

ರವಿ ಬಾಲಾ ಶರ್ಮಾ ಅವರು ಡ್ಯಾನ್ಸ್​ ಮಾಡುವುದರಲ್ಲಿ ತುಂಬಾನೇ ಫೇಮಸ್. ಅವರ ಎನರ್ಜಿಗೆ ವಯಸ್ಸು ಅಡ್ಡ ಬಂದಿಲ್ಲ. ಸಾಕಷ್ಟು ರೀಲ್ಸ್ ಮಾಡಿ ಅವರು ಪೋಸ್ಟ್ ಮಾಡುತ್ತಾ ಇರುತ್ತಾರೆ. ಇದಕ್ಕೆ ಲಕ್ಷಾಂತರ ವೀವ್ಸ್ ಬರುತ್ತವೆ. ಫ್ಯಾನ್ಸ್ ಅವರನ್ನು ತುಂಬಾನೇ ಇಷ್ಟಪಡುತ್ತಾರೆ. ಈಗ ಅವರು ಮಾಡಿರುವ ಹೊಸ ವಿಡಿಯೋವನ್ನು ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

ಅರ್ಜುನ್ ಕಪೂರ್ ಹಾಗೂ ಪರಿಣೀತಿ ಚೋಪ್ರಾ ನಟನೆಯ ‘ಇಶಕ್​ಜಾದೇ’ ಸಿನಿಮಾ 2012ರಲ್ಲಿ ತೆರೆಗೆ ಬಂದಿತ್ತು. ಈ ಸಿನಿಮಾದ ‘ಚೋಕ್ರಾ ಜವಾನ್..’ ಹಾಡು ಹಿಟ್ ಆಗಿತ್ತು. ಕೇಳುಗರು ಈ ಹಾಡನ್ನು ಅನೇಕರು ಈಗಲೂ ಇಷ್ಟಪಡುತ್ತಾರೆ. ಈ ಫೇಮಸ್​ ಹಾಡಿಗೆ ರವಿ ಬಾಲಾ ಶರ್ಮಾ ಹೆಜ್ಜೆ ಹಾಕಿದ್ದಾರೆ.

ಇದನ್ನೂ ಓದಿ: ‘ಭವಿಷ್ಯವನ್ನು ಒಟ್ಟಿಗೆ ಕಳೆಯುವ ಆಸೆ ಇದೆ’; ಅರ್ಜುನ್ ಕಪೂರ್ ಬಗ್ಗೆ ಮಲೈಕಾ ಮಾತು

ರವಿ ಬಾಲಾ ಶರ್ಮಾ ಹಾಗೂ ಅವರ ಮಗ ಏಕಾಂಶ್ ಅವರು ಈ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ಅಮ್ಮ-ಮಗನನ್ನು ಸ್ಟೆಪ್ ಹಾಕಿದ ರೀತಿಗೆ ಫ್ಯಾನ್ಸ್​ ಖುಷಿ ವ್ಯಕ್ತಪಡಿಸಿದ್ದಾರೆ. ‘ರವಿ ಬಾಲಾ ಅವರು ಅನೇಕರಿಗೆ ಮಾದರಿ. ಅವರ ಎನರ್ಜಿ ತುಂಬಾನೇ ಇಷ್ಟವಾಗುತ್ತದೆ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಈ ವಿಡಿಯೋ 32 ಸಾವಿರಕ್ಕೂ ಅಧಿಕ ವೀಕ್ಷಣೆ ಕಂಡಿದೆ.

ಡ್ಯಾನ್ಸಿಂಗ್ ದಾದಿ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಅವರಿಗೆ 1.87 ಲಕ್ಷ ಹಿಂಬಾಲಕರು ಇನ್​ಸ್ಟಾಗ್ರಾಮ್​ನಲ್ಲಿ ಇದ್ದಾರೆ. ಅವರ ವಯಸ್ಸಿಗೂ, ಎನರ್ಜಿಗೂ ನಿಜಕ್ಕೂ ಮ್ಯಾಚ್ ಆಗುವುದಿಲ್ಲ, ವಯಸ್ಸು ದೇಹಕ್ಕೆ ಮಾತ್ರ ಎನರ್ಜಿಗೆ ಅಲ್ಲ ಎಂಬುದು ಅನೇಕರ ಅಭಿಪ್ರಾಯ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್