AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್​ ಬಳಿ ಕ್ಯಾಪ್ಟನ್​ ಆಗ್ತೀರಾ ಎಂದು ಕೇಳಿದ ದಾನಿಶ್​; ಕೊಹ್ಲಿ ಉತ್ತರ ಏನಿತ್ತು?

ಆರ್​ಸಿಬಿ ಮೂರು ಆಟಗಾರರನ್ನು ಉಳಿಸಿಕೊಂಡಿದೆ. ವಿರಾಟ್​ ಕೊಹ್ಲಿ, ಗ್ಲೇನ್​ ಮ್ಯಾಕ್ಸ್​ವೆಲ್​ ಹಾಗೂ ಮೊಹ್ಮದ್​ ಸಿರಾಜ್​ ಆರ್​ಸಿಬಿಯಲ್ಲಿ ಉಳಿದುಕೊಂಡಿದ್ದಾರೆ. ಆರ್​ಸಿಬಿ ಉಳಿಸಿಕೊಂಡ ನಾಲ್ಕನೇ ವ್ಯಕ್ತಿ ದಾನಿಶ್​ ಅಂತೆ! ಈ ಬಗ್ಗೆಯೂ ಅವರು ಹೇಳಿಕೊಂಡಿದ್ದಾರೆ.

ವಿರಾಟ್​ ಬಳಿ ಕ್ಯಾಪ್ಟನ್​ ಆಗ್ತೀರಾ ಎಂದು ಕೇಳಿದ ದಾನಿಶ್​; ಕೊಹ್ಲಿ ಉತ್ತರ ಏನಿತ್ತು?
ದಾನಿಶ್​-ವಿರಾಟ್​
TV9 Web
| Edited By: |

Updated on:Feb 13, 2022 | 3:28 PM

Share

ರಾಯಲ್​ ಚಾಲೆಂಜರ್ಸ್​ ಬೆಂಗಳೂರು (Royal Challengers Bangalore) ತಂಡದ ನಾಯಕತ್ವವನ್ನು ವಿರಾಟ್​ ಕೊಹ್ಲಿ ತ್ಯಜಿಸಿದ್ದಾರೆ. ಈ ಬಾರಿ ನಡೆಯಲಿರುವ ಐಪಿಎಲ್​ನಲ್ಲಿ (IPL 2022) ಆರ್​ಸಿಬಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಐಪಿಎಲ್​​ ಹರಾಜಿನಲ್ಲಿ ನಾಯಕತ್ವ ವಹಿಸಿಕೊಳ್ಳುವ ಆಟಗಾರ ಸಿಗದಿದ್ದರೆ ವಿರಾಟ್​ ಬಳಿ ನಾಯಕತ್ವ ಮುಂದುವರಿಸುವಂತೆ ಕೋರುವುದಾಗಿ ಆರ್​ಸಿಬಿ ತಂಡ ಹೇಳಿಕೊಂಡಿತ್ತು. ಆರ್​ಸಿಬಿಯನ್ನು ಯಾರು ಮುನ್ನಡೆಸುತ್ತಾರೆ ಎನ್ನುವ ಕುತೂಹಲಕ್ಕೆ ಇನ್ನೂ ತೆರೆ ಬಿದ್ದಿಲ್ಲ. ಈ ಮಧ್ಯೆ ಆರ್​ಸಿಬಿ ಇನ್​ಸೈಡರ್​ ದಾನಿಶ್​ ಸೇಠ್​ (Danish Sait) ಅವರ ಫನ್ನಿ ವಿಡಿಯೋವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತನ್ನ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ. ಈ ವಿಡಿಯೋ ಈಗ ಸಖತ್​ ವೈರಲ್​ ಆಗುತ್ತಿದೆ.

ವಿರಾಟ್​ ಕೊಹ್ಲಿಗೆ ದಾನಿಶ್​ ಸೇಠ್​ ಕರೆ ಮಾಡುತ್ತಾರೆ. ‘ಫಾಸ್ಟ್​ ಬೌಲರ್​ ಆಯ್ಕೆ ಬಗ್ಗೆ ಏನು ಯೋಚನೆ ಮಾಡಿದ್ದೀರಾ? ನನ್ನ ಪ್ರಕಾರ ಕಪಿಲ್​ ದೇವ್​ ಉತ್ತಮ ಆಯ್ಕೆ ಅನಿಸುತ್ತದೆ. ಇತ್ತೀಚೆಗೆ ಅವರ ಕುರಿತ ಬಯೋಪಿಕ್ ಕೂಡ ತೆರೆಗೆ ಬಂದಿದೆ’ ಎಂದಿದ್ದಾರೆ ದಾನಿಶ್​. ಆ ಬಳಿಕ, ‘ವಿರಾಟ್​ ನೀವು ಕ್ಯಾಪ್ಟನ್​ ಆಗಲು ಬಯಸುತ್ತೀರಾ?’ ಎಂದು ದಾನಿಶ್ ಕೇಳುತ್ತಿದ್ದಂತೆ ಆ ಕಡೆಯಿಂದ ಕರೆ ಕಟ್​ ಆಗಿದೆ.

ಆರ್​ಸಿಬಿ ಮೂರು ಆಟಗಾರರನ್ನು ಉಳಿಸಿಕೊಂಡಿದೆ. ವಿರಾಟ್​ ಕೊಹ್ಲಿ, ಗ್ಲೇನ್​ ಮ್ಯಾಕ್ಸ್​ವೆಲ್​ ಹಾಗೂ ಮೊಹ್ಮದ್​ ಸಿರಾಜ್​ ಆರ್​ಸಿಬಿಯಲ್ಲಿ ಉಳಿದುಕೊಂಡಿದ್ದಾರೆ. ಆರ್​ಸಿಬಿ ಉಳಿಸಿಕೊಂಡ ನಾಲ್ಕನೇ ವ್ಯಕ್ತಿ ದಾನಿಶ್​ ಅಂತೆ! ಈ ಬಗ್ಗೆಯೂ ಅವರು ಹೇಳಿಕೊಂಡಿದ್ದಾರೆ.

ತಂಡವನ್ನು ಆಯ್ಕೆ ಮಾಡುವ ಸಮಿತಿ ಬಳಿ ಬಂದ ದಾನಿಶ್ ಅವರು ಒಂದು ಲೆಟರ್​ ನೀಡಿದರು. ‘ಇದು ನಿಮ್ಮ ಟರ್ಮಿನೇಟರ್​ ಲೆಟರ್​. ಕಳೆದ 14 ವರ್ಷದಿಂದ ಕಪ್​ ಬಂದಿಲ್ಲ. ಈ ಬಾರಿ ಒಳ್ಳೆಯ ಆಯ್ಕೆ ಮಾಡಿಲ್ಲ ಎಂದರೆ ನಿಮ್ಮನ್ನು ಟರ್ಮಿನೇಟ್​ ಮಾಡುತ್ತೇವೆ, ನೆನಪಿರಲಿ’ ಎಂದು ಫನ್ನಿಯಾಗಿ ಎಚ್ಚರಿಕೆ ನೀಡಿದರು ದಾನಿಶ್.

ಈ ವಿಡಿಯೋಗೆ ನಾನಾ ರೀತಿಯ ಕಮೆಂಟ್​ಗಳು ಬಂದಿವೆ. ಆರ್​ಸಿಬಿ ಈ ಬಾರಿಯೂ ತಪ್ಪು ನಿರ್ಧಾರ ಮಾಡಿದೆ ಎಂದು ಕೆಲವರು ಹೇಳಿಕೊಂಡಿದ್ದಾರೆ. ಶ್ರೀಲಂಕಾ ಆಟಗಾರ ವನಿಂದು ಹಸರಂಗ ಅವರನ್ನು 10.75 ಕೋಟಿ ರೂಪಾಯಿ ನೀಡಿ ಖರೀದಿಸಿದೆ. ಇದು ತುಂಬಾನೇ ಕಾಸ್ಟ್ಲಿ ಆಯ್ತು ಎಂದು ಕೆಲವರು ಟೀಕಿಸಿದ್ದಾರೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ದಾನಿಶ್​ ಸೇಠ್​ ನಟನೆಯ ‘ಒನ್​ ಕಟ್​ ಟೂ ಕಟ್​’ ಚಿತ್ರ ಇತ್ತೀಚೆಗೆ ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ತೆರೆಗೆ ಬಂದಿದೆ. ಪಿಆರ್​ಕೆ ಪ್ರೊಡಕ್ಷನ್​ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಈ ಚಿತ್ರ ವಿಮರ್ಶೆಯಲ್ಲಿ ಸೋತಿದೆ. ಸಿನಿಮಾಗೆ ಎಲ್ಲ ಕಡೆಗಳಿಂದ ನೆಗೆಟಿವ್​ ಕಮೆಂಟ್​ಗಳು ಬರುತ್ತಿವೆ.

ಇದನ್ನೂ ಓದಿ: ನಟ ದಾನಿಶ್​ ಸೇಠ್​ಗೆ ಅಭಿನಂದನೆ ತಿಳಿಸಿದ ಕ್ರಿಕೆಟರ್​​ ಕೆ.ಎಲ್​. ರಾಹುಲ್​; ಕಾರಣ ಏನು?

‘ಅವರ​ ಜತೆ ಸಾಕಷ್ಟು ನೆನಪುಗಳಿವೆ’; ಪುನೀತ್, ‘ಒನ್ ಕಟ್​ ಟೂ ಕಟ್​’ ಸಿನಿಮಾ ಬಗ್ಗೆ ನಟ ದಾನಿಶ್​ ಸೇಠ್​ ಮಾತು

Published On - 2:33 pm, Sun, 13 February 22

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ