AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್​ ಬಳಿ ಕ್ಯಾಪ್ಟನ್​ ಆಗ್ತೀರಾ ಎಂದು ಕೇಳಿದ ದಾನಿಶ್​; ಕೊಹ್ಲಿ ಉತ್ತರ ಏನಿತ್ತು?

ಆರ್​ಸಿಬಿ ಮೂರು ಆಟಗಾರರನ್ನು ಉಳಿಸಿಕೊಂಡಿದೆ. ವಿರಾಟ್​ ಕೊಹ್ಲಿ, ಗ್ಲೇನ್​ ಮ್ಯಾಕ್ಸ್​ವೆಲ್​ ಹಾಗೂ ಮೊಹ್ಮದ್​ ಸಿರಾಜ್​ ಆರ್​ಸಿಬಿಯಲ್ಲಿ ಉಳಿದುಕೊಂಡಿದ್ದಾರೆ. ಆರ್​ಸಿಬಿ ಉಳಿಸಿಕೊಂಡ ನಾಲ್ಕನೇ ವ್ಯಕ್ತಿ ದಾನಿಶ್​ ಅಂತೆ! ಈ ಬಗ್ಗೆಯೂ ಅವರು ಹೇಳಿಕೊಂಡಿದ್ದಾರೆ.

ವಿರಾಟ್​ ಬಳಿ ಕ್ಯಾಪ್ಟನ್​ ಆಗ್ತೀರಾ ಎಂದು ಕೇಳಿದ ದಾನಿಶ್​; ಕೊಹ್ಲಿ ಉತ್ತರ ಏನಿತ್ತು?
ದಾನಿಶ್​-ವಿರಾಟ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Feb 13, 2022 | 3:28 PM

Share

ರಾಯಲ್​ ಚಾಲೆಂಜರ್ಸ್​ ಬೆಂಗಳೂರು (Royal Challengers Bangalore) ತಂಡದ ನಾಯಕತ್ವವನ್ನು ವಿರಾಟ್​ ಕೊಹ್ಲಿ ತ್ಯಜಿಸಿದ್ದಾರೆ. ಈ ಬಾರಿ ನಡೆಯಲಿರುವ ಐಪಿಎಲ್​ನಲ್ಲಿ (IPL 2022) ಆರ್​ಸಿಬಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಐಪಿಎಲ್​​ ಹರಾಜಿನಲ್ಲಿ ನಾಯಕತ್ವ ವಹಿಸಿಕೊಳ್ಳುವ ಆಟಗಾರ ಸಿಗದಿದ್ದರೆ ವಿರಾಟ್​ ಬಳಿ ನಾಯಕತ್ವ ಮುಂದುವರಿಸುವಂತೆ ಕೋರುವುದಾಗಿ ಆರ್​ಸಿಬಿ ತಂಡ ಹೇಳಿಕೊಂಡಿತ್ತು. ಆರ್​ಸಿಬಿಯನ್ನು ಯಾರು ಮುನ್ನಡೆಸುತ್ತಾರೆ ಎನ್ನುವ ಕುತೂಹಲಕ್ಕೆ ಇನ್ನೂ ತೆರೆ ಬಿದ್ದಿಲ್ಲ. ಈ ಮಧ್ಯೆ ಆರ್​ಸಿಬಿ ಇನ್​ಸೈಡರ್​ ದಾನಿಶ್​ ಸೇಠ್​ (Danish Sait) ಅವರ ಫನ್ನಿ ವಿಡಿಯೋವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತನ್ನ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ. ಈ ವಿಡಿಯೋ ಈಗ ಸಖತ್​ ವೈರಲ್​ ಆಗುತ್ತಿದೆ.

ವಿರಾಟ್​ ಕೊಹ್ಲಿಗೆ ದಾನಿಶ್​ ಸೇಠ್​ ಕರೆ ಮಾಡುತ್ತಾರೆ. ‘ಫಾಸ್ಟ್​ ಬೌಲರ್​ ಆಯ್ಕೆ ಬಗ್ಗೆ ಏನು ಯೋಚನೆ ಮಾಡಿದ್ದೀರಾ? ನನ್ನ ಪ್ರಕಾರ ಕಪಿಲ್​ ದೇವ್​ ಉತ್ತಮ ಆಯ್ಕೆ ಅನಿಸುತ್ತದೆ. ಇತ್ತೀಚೆಗೆ ಅವರ ಕುರಿತ ಬಯೋಪಿಕ್ ಕೂಡ ತೆರೆಗೆ ಬಂದಿದೆ’ ಎಂದಿದ್ದಾರೆ ದಾನಿಶ್​. ಆ ಬಳಿಕ, ‘ವಿರಾಟ್​ ನೀವು ಕ್ಯಾಪ್ಟನ್​ ಆಗಲು ಬಯಸುತ್ತೀರಾ?’ ಎಂದು ದಾನಿಶ್ ಕೇಳುತ್ತಿದ್ದಂತೆ ಆ ಕಡೆಯಿಂದ ಕರೆ ಕಟ್​ ಆಗಿದೆ.

ಆರ್​ಸಿಬಿ ಮೂರು ಆಟಗಾರರನ್ನು ಉಳಿಸಿಕೊಂಡಿದೆ. ವಿರಾಟ್​ ಕೊಹ್ಲಿ, ಗ್ಲೇನ್​ ಮ್ಯಾಕ್ಸ್​ವೆಲ್​ ಹಾಗೂ ಮೊಹ್ಮದ್​ ಸಿರಾಜ್​ ಆರ್​ಸಿಬಿಯಲ್ಲಿ ಉಳಿದುಕೊಂಡಿದ್ದಾರೆ. ಆರ್​ಸಿಬಿ ಉಳಿಸಿಕೊಂಡ ನಾಲ್ಕನೇ ವ್ಯಕ್ತಿ ದಾನಿಶ್​ ಅಂತೆ! ಈ ಬಗ್ಗೆಯೂ ಅವರು ಹೇಳಿಕೊಂಡಿದ್ದಾರೆ.

ತಂಡವನ್ನು ಆಯ್ಕೆ ಮಾಡುವ ಸಮಿತಿ ಬಳಿ ಬಂದ ದಾನಿಶ್ ಅವರು ಒಂದು ಲೆಟರ್​ ನೀಡಿದರು. ‘ಇದು ನಿಮ್ಮ ಟರ್ಮಿನೇಟರ್​ ಲೆಟರ್​. ಕಳೆದ 14 ವರ್ಷದಿಂದ ಕಪ್​ ಬಂದಿಲ್ಲ. ಈ ಬಾರಿ ಒಳ್ಳೆಯ ಆಯ್ಕೆ ಮಾಡಿಲ್ಲ ಎಂದರೆ ನಿಮ್ಮನ್ನು ಟರ್ಮಿನೇಟ್​ ಮಾಡುತ್ತೇವೆ, ನೆನಪಿರಲಿ’ ಎಂದು ಫನ್ನಿಯಾಗಿ ಎಚ್ಚರಿಕೆ ನೀಡಿದರು ದಾನಿಶ್.

ಈ ವಿಡಿಯೋಗೆ ನಾನಾ ರೀತಿಯ ಕಮೆಂಟ್​ಗಳು ಬಂದಿವೆ. ಆರ್​ಸಿಬಿ ಈ ಬಾರಿಯೂ ತಪ್ಪು ನಿರ್ಧಾರ ಮಾಡಿದೆ ಎಂದು ಕೆಲವರು ಹೇಳಿಕೊಂಡಿದ್ದಾರೆ. ಶ್ರೀಲಂಕಾ ಆಟಗಾರ ವನಿಂದು ಹಸರಂಗ ಅವರನ್ನು 10.75 ಕೋಟಿ ರೂಪಾಯಿ ನೀಡಿ ಖರೀದಿಸಿದೆ. ಇದು ತುಂಬಾನೇ ಕಾಸ್ಟ್ಲಿ ಆಯ್ತು ಎಂದು ಕೆಲವರು ಟೀಕಿಸಿದ್ದಾರೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ದಾನಿಶ್​ ಸೇಠ್​ ನಟನೆಯ ‘ಒನ್​ ಕಟ್​ ಟೂ ಕಟ್​’ ಚಿತ್ರ ಇತ್ತೀಚೆಗೆ ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ತೆರೆಗೆ ಬಂದಿದೆ. ಪಿಆರ್​ಕೆ ಪ್ರೊಡಕ್ಷನ್​ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಈ ಚಿತ್ರ ವಿಮರ್ಶೆಯಲ್ಲಿ ಸೋತಿದೆ. ಸಿನಿಮಾಗೆ ಎಲ್ಲ ಕಡೆಗಳಿಂದ ನೆಗೆಟಿವ್​ ಕಮೆಂಟ್​ಗಳು ಬರುತ್ತಿವೆ.

ಇದನ್ನೂ ಓದಿ: ನಟ ದಾನಿಶ್​ ಸೇಠ್​ಗೆ ಅಭಿನಂದನೆ ತಿಳಿಸಿದ ಕ್ರಿಕೆಟರ್​​ ಕೆ.ಎಲ್​. ರಾಹುಲ್​; ಕಾರಣ ಏನು?

‘ಅವರ​ ಜತೆ ಸಾಕಷ್ಟು ನೆನಪುಗಳಿವೆ’; ಪುನೀತ್, ‘ಒನ್ ಕಟ್​ ಟೂ ಕಟ್​’ ಸಿನಿಮಾ ಬಗ್ಗೆ ನಟ ದಾನಿಶ್​ ಸೇಠ್​ ಮಾತು

Published On - 2:33 pm, Sun, 13 February 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ