AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರ ನಗರ, ರಾಜ್ಯಗಳಿಗೆ ತೆರಳಲು ದರ್ಶನ್, ಪವಿತ್ರಾ ಗೌಡಗೆ ನ್ಯಾಯಾಲಯ ಅನುಮತಿ

Darshan Thoogudeepa: ದರ್ಶನ್ ತೂಗುದೀಪ, ಪವಿತ್ರಾ ಗೌಡ ಮತ್ತು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಬಹುತೇಕ ಎಲ್ಲ ಆರೋಪಿಗಳು ಇಂದು (ಜನವರಿ 10) ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಈ ಸಂದರ್ಭದಲ್ಲಿ ದರ್ಶನ್ ಮತ್ತು ಪವಿತ್ರಾ ಅವರುಗಳು ನ್ಯಾಯಾಲಯದ ಮುಂದೆ ಪ್ರತ್ಯೇಕ ಮನವಿಗಳನ್ನು ಇರಿಸಿದ್ದರು, ನ್ಯಾಯಾಲಯ ಇಬ್ಬರಿಗೂ ಅನುಮತಿಗಳನ್ನು ನೀಡಿದೆ.

ಹೊರ ನಗರ, ರಾಜ್ಯಗಳಿಗೆ ತೆರಳಲು ದರ್ಶನ್, ಪವಿತ್ರಾ ಗೌಡಗೆ ನ್ಯಾಯಾಲಯ ಅನುಮತಿ
Darshan Thoogudeepa Movie
ಮಂಜುನಾಥ ಸಿ.
|

Updated on: Jan 10, 2025 | 3:48 PM

Share

ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ರೇಣುಕಾ ಸ್ವಾಮಿ ಕೊಲೆಯ ಎಲ್ಲ ಆರೋಪಿಗಳು ಇಂದು (ಜನವರಿ 10) ಬೆಂಗಳೂರಿನ ಸಿಸಿಎಚ್ 57 ಕೋರ್ಟ್‌ಗೆ ಹಾಜರಾಗಿದ್ದರು. ರೇಣುಕಾ ಸ್ವಾಮಿ ಬಂಧನದ ಬಳಿಕ ಇದೇ ಮೊದಲ ಬಾರಿಗೆ ದರ್ಶನ್ ಹಾಗೂ ಪವಿತ್ರಾ ಗೌಡ ಸಾರ್ವಜನಿಕವಾಗಿ ಮುಖಾ ಮುಖಿ ಆಗಿದ್ದರು. ಎಲ್ಲ ಆರೋಪಿಗಳ ಹಾಜರಿ ಪಡೆದ ನ್ಯಾಯಾಧೀಶರು ಆ ನಂತರ ಪ್ರಕರಣವನ್ನು ಫೆಬ್ರವರಿ 25ಕ್ಕೆ ಮುಂದೂಡಿದರು. ಈ ನಡುವೆ ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರುಗಳು ಪ್ರತ್ಯೇಕವಾಗಿ ನ್ಯಾಯಾಧೀಶರ ಬಳಿ ಬೆಂಗಳೂರು ಬಿಟ್ಟು ಹೊರಗೆ ಪ್ರಯಾಣಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದರು.

ನಟ ದರ್ಶನ್, ಮೈಸೂರಿಗೆ ತೆರಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದರು. ಅದರಂತೆ ನಟಿ ಪವಿತ್ರಾ ಗೌಡ ಕರ್ನಾಟಕ ಬಿಟ್ಟು ಹೊರರಾಜ್ಯಕ್ಕೆ ತೆರಳಲು ಅನುಮತಿ ಕೋರಿದ್ದರು. ಇಬ್ಬರಿಗೂ ನ್ಯಾಯಾಲಯ ಅನುಮತಿ ನೀಡಿದೆ. ದರ್ಶನ್, ಐದು ದಿನಗಳ ಕಾಲ ಮೈಸೂರಿಗೆ ತೆರಳಬಹುದಾಗಿದೆ. ಜನವರಿ 12 ರಿಂದ 17ರವರೆಗೆ ದರ್ಶನ್ ಮೈಸೂರಿನಲ್ಲಿ ಇರಬಹುದಾಗಿದೆ. ಅದಾದ ಬಳಿಕ ಮತ್ತೆ ಬೆಂಗಳೂರಿಗೆ ವಾಪಸ್ ಬರಬೇಕಿದೆ.

ಇದನ್ನೂ ಓದಿ:ತಿಂಗಳುಗಳ ಬಳಿಕ ದರ್ಶನ್, ಪವಿತ್ರಾ ಭೇಟಿ, ಕೋರ್ಟ್​ನಲ್ಲಿ ನಡೆದಿದ್ದೇನು?

ಇನ್ನು ಪವಿತ್ರಾ ಗೌಡ, ತಾವು ದೇವಾಲಯಕ್ಕೆ ತೆರಳಲು ಹಾಗೂ ತಮ್ಮ ವಸ್ತ್ರವಿನ್ಯಾಸದ ಬುಟಿಕ್​ಗಾಗಿ ಕೆಲ ವಸ್ತುಗಳನ್ನು ಖರೀದಿ ಮಾಡಲು ವ್ಯಾವಹಾರಿಕ ಕಾರಣಗಳಿಗಾಗಿ ಹೊರ ರಾಜ್ಯಗಳಿಗೆ ತೆರಳಲು ಅನುಮತಿ ನೀಡಬೇಕೆಂದು ಮನವಿ ಮಾಡಿದ್ದರು. ಅದರಂತೆ ನ್ಯಾಯಾಧೀಶರು ಪವಿತ್ರಾ ಗೌಡಗೆ ಸಹ ಅನುಮತಿ ನೀಡಿದ್ದಾರೆ. ಪವಿತ್ರಾ ಗೌಡ ಹೊರ ರಾಜ್ಯಗಳಿಗೆ ದೇವಾಲಯಕ್ಕೆ ತೆರಳು ಸಾಧ್ಯತೆ ಇದೆ.

ದರ್ಶನ್, ‘ಡೆವಿಲ್’ ಸಿನಿಮಾದ ಚಿತ್ರೀಕರಣ ಶುರು ಮಾಡುವ ಆಲೋಚನೆಯಲ್ಲಿದ್ದು, ಇದೇ ಕಾರಣಕ್ಕೆ ಮೈಸೂರಿಗೆ ತೆರಳಲು ಅನುಮತಿ ಕೋರಿದ್ದರು ಎನ್ನಲಾಗುತ್ತಿದೆ. ಆದರೆ ನ್ಯಾಯಾಲಯವು ಕೇವಲ ಐದು ದಿನಗಳ ಕಾಲವಷ್ಟೆ ಬೆಂಗಳೂರಿಗೆ ಹೋಗಲು ಅನುಮತಿ ನೀಡಿದೆ. ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಲಾಗಿದ್ದು, ಆಗ ಚಿತ್ರೀಕರಣಕ್ಕೆ ವಿಶೇಷ ಅನುಮತಿಯನ್ನು ದರ್ಶನ್ ಕೇಳುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​