AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಜಾಮೀನು ಅರ್ಜಿ ವಿಚಾರಣೆ: 1 ವಾರದಲ್ಲಿ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚನೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಗೆ ತಾರತಮ್ಯ ಆಗುತ್ತಿದೆ ಎಂದು ದರ್ಶನ್ ಆರೋಪಿಸಿದ್ದರು. ಸಹ-ಕೈದಿಗಳಿಂದ ನಿಂದನೆ ಮತ್ತು ಬೆದರಿಕೆ ಇದೆ ಎಂದು ಕೂಡ ಹೇಳಿದ್ದರು. ಸಾಕ್ಷಿಗಳ ವಿಚಾರಣೆ ವಿಳಂಬ ಆಗುತ್ತಿದೆ ಎಂದು ಅವರು ಕಷ್ಟ ಹೇಳಿಕೊಂಡಿದ್ದರು. ಆ ಬಗ್ಗೆ ಸುಪ್ರೀಂ ಕೋರ್ಟ್ ವರದಿ ಕೇಳಿದೆ.

ದರ್ಶನ್ ಜಾಮೀನು ಅರ್ಜಿ ವಿಚಾರಣೆ: 1 ವಾರದಲ್ಲಿ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚನೆ
Darshan Thoogudeepa
Ramesha M
| Edited By: |

Updated on:May 04, 2026 | 3:12 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು (Bail) ಅರ್ಜಿ ವಿಚಾರಣೆ ಇಂದು (ಮೇ 4) ಸುಪ್ರೀಂ ಕೋರ್ಟ್​​ನಲ್ಲಿ ನಡೆದಿದೆ. ನ್ಯಾ. ಪರ್ದಿವಾಲಾ ಮತ್ತು ನ್ಯಾ. ವಿಜಯ್ ಬಿಷ್ಣೋಯಿ ಅವರ ಪೀಠದಲ್ಲಿ ವಿಚಾರಣೆ ಮಾಡಲಾಗಿದೆ. A2 ದರ್ಶನ್ (Darshan) ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡನೆ ಮಾಡಿದ್ದಾರೆ.

‘ಆರೋಪಿ ದರ್ಶನ್​ಗೆ 5 ಸ್ಟಾರ್ ಟ್ರೀಟ್ಮೆಂಟ್ ಕೊಡಬೇಡಿ ಎಂದಿದ್ದೀರಿ. ಆದರೆ ಜೈಲು ಅಧಿಕಾರಿಗಳು ಮೂಲಭೂತ ಸವಲತ್ತನ್ನೂ ನೀಡುತ್ತಿಲ್ಲ’ ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ದರ್ಶನ್ ಕೇಸ್ ಪ್ರಗತಿ ಬಗ್ಗೆ 57ನೇ ಸಿಸಿಹೆಚ್ ಕೋರ್ಟ್​ನಿಂದ ಸುಪ್ರೀಂ ಕೋರ್ಟ್ ವರದಿ ಕೇಳಿದೆ. ವರದಿ ಸಲ್ಲಿಸಲು ಒಂದು ವಾರದ ಗಡುವು ನೀಡಲಾಗಿದೆ.

ಜೈಲಿನಲ್ಲಿ ದರ್ಶನ್​ಗೆ ಮೂಲ ಸೌಕರ್ಯ ಒದಗಿಸಲಾಗಿದೆಯೇ ಇಲ್ಲವೇ? ಇಲ್ಲಿಯವರೆಗೂ ಎಷ್ಟು ಸಾಕ್ಷಿಗಳ ವಿಚಾರಣೆ ನಡೆದಿದೆ? ಎಷ್ಟು ಸಾಕ್ಷಿಗಳ ವಿಚಾರಣೆ ಬಾಕಿ ಇದೆ? ಸಾಕ್ಷ್ಯ ವಿಚಾರಣೆ ಮುಗಿಯಲು ಎಷ್ಟು ಸಮಯ ಬೇಕು ಎಂಬ ಬಗ್ಗೆ ವರದಿ ನೀಡಿ ಎಂದು 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ವರದಿ ಬಂದ ಬಳಿಕ ಮುಂದಿನ ವಿಚಾರಣೆ ನಡೆಯಲಿದೆ.

ತಮ್ಮನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ಕ್ವಾರಂಟೈನ್ ಸೆಲ್​ನಲ್ಲಿ ಇಡಲಾಗಿದೆ. ಆದ್ದರಿಂದ ಮಾನಸಿಕವಾಗಿ, ದೈಹಿಕವಾಗಿ ಹಾನಿಕಾರಕ ಪರಿಣಾಮ ಆಗುತ್ತಿದೆ. ಜೈಲಿನಲ್ಲಿ ಸಹ-ಕೈದಿಗಳು ನಿಂದನೆ, ಮೂದಲಿಸುವುದು ಸೇರಿ ಹಲವು ರೀತಿ ಪ್ರಚೋದನೆ ನೀಡುತ್ತಿದ್ದಾರೆ. ಮಾಧ್ಯಮದಲ್ಲಿ ನೆಗೆಟಿವ್ ಪ್ರಚಾರದಿಂದ ಸಮಸ್ಯೆ ಬಿಗಡಾಯಿಸಿದೆ ಎಂದು ಜಾಮೀನು ಅರ್ಜಿಯಲ್ಲಿ ದರ್ಶನ್ ಅವರು ಕಷ್ಟ ಹೇಳಿಕೊಂಡಿದ್ದರು.

ಇದನ್ನೂ ಓದಿ: ‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ಸುಪ್ರೀಂಕೋರ್ಟ್ ಮೊರೆ ಹೋದ ದರ್ಶನ್

ಜೈಲಿನಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಕುಟುಂಬದವರನ್ನು ಭೇಟಿ ಮಾಡಲು ಸಮಾನ ಸಮಯ ನೀಡುತ್ತಿಲ್ಲ. ಸೆಲ್​ನ ಕಾರಿಡಾರ್​​ನಲ್ಲಿ ಮಾತ್ರ ವಾಕ್ ಮಾಡಲು ಅವಕಾಶ ನೀಡಿದ್ದಾರೆ. ಬೆನ್ನು ನೋವಿದ್ದರೂ ಸರಿಯಾಗಿ ಫಿಸಿಯೋಥೆರಪಿ ಮಾಡಿಲ್ಲ. ಸುದೀರ್ಘ ಜೈಲುವಾಸದಿಂದ ಜೀವನೋಪಾಯಕ್ಕೂ ಸಮಸ್ಯೆ ಆಗಿದೆ. ವೃತ್ತಿ ನಡೆಸುವ ಮೂಲಭೂತ ಹಕ್ಕಿನ ಹರಣವಾಗಲಿದೆ ಎಂದು ಜಾಮೀನು ಅರ್ಜಿಯಲ್ಲಿ ದರ್ಶನ್ ತಿಳಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:09 pm, Mon, 4 May 26

Follow Us