AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಕೇಸ್: ಆರೋಪಿಗಳ ನಡುವೆ ವೈಮನಸ್ಸು; ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ಮನವಿ

ಜೈಲಿಗೆ ಶಿಫ್ಟ್ ಮಾಡಿ ಎಂದು ಇಬ್ಬರು ಆರೋಪಿಗಳು ಜೈಲು ಅಧಿಕಾರಿಗಳಲ್ಲಿ ಈಗ ಮನವಿ ಮಾಡಿದ್ದಾರೆ. ಅವರಿಬ್ಬರನ್ನು ಮನವೊಲಿಸಲು ಪ್ರದೋಷ್ ಪ್ರಯತ್ನಿಸುತ್ತಿರುವ ಬಗ್ಗೆ ಮಾಹಿತಿ ಕೇಳಿಬಂದಿದೆ. ಆರೋಪಿಗಳ ನಡುವೆ ಮನಸ್ತಾಪ ಉಂಟಾದ ಕಾರಣ ಎಲ್ಲರ ಮೇಲೆ ಜೈಲು ಸಿಬ್ಬಂದಿ ಹೆಚ್ಚಿನ ನಿಗಾ ಇಟ್ಟಿದ್ದಾರೆ.

ದರ್ಶನ್ ಕೇಸ್: ಆರೋಪಿಗಳ ನಡುವೆ ವೈಮನಸ್ಸು; ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ಮನವಿ
Renukaswamy, Darshan
ರಾಚಪ್ಪಾಜಿ ನಾಯ್ಕ್
| Edited By: |

Updated on: Sep 28, 2025 | 11:29 AM

Share

ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದ 6 ಆರೋಪಿಗಳು ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಈ ಮೊದಲು ನೀಡಿದ್ದ ಜಾಮೀನು ರದ್ದಾದ ಬಳಿಕ ದರ್ಶನ್ (Darshan), ಪವಿತ್ರಾ ಗೌಡ, ಜಗದೀಶ್, ಅನುಕುಮಾರ್ ಮುಂತಾದ ಆರೋಪಿಗಳನ್ನು ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತು. ಈಗ ಈ ಆರೋಪಿಗಳ ನಡುವೆ ವೈಮನಸ್ಸು ಉಂಟಾಗಿದೆ. ತಮನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ಇಬ್ಬರು ಆರೋಪಿಗಳು ಮನವಿ ಮಾಡಿದ್ದಾರೆ. ಹೌದು, ಅನುಕುಮಾರ್ ಮತ್ತು ಜಗದೀಶ್ ಈಗ ಬೇರೆ ಜೈಲಿಗೆ ಹೋಗಲು ಬಯಸಿದ್ದಾರೆ.

ಅನುಕುಮಾರ್ ಹಾಗೂ ಜಗದೀಶ್ ಚಿತ್ರದುರ್ಗ ಮೂಲದವರು. ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್​ ಮಾಡಿ ಕೊಲೆಗೆ ಸಹಕರಿಸಿದ ಆರೋಪ ಇವರ ಮೇಲಿದೆ. ಭರವಸೆ ಕೊಟ್ಟವರೇ ಈಗ ಕೈ ಬಿಟ್ಟರು ಎಂದು ಅವರಿಬ್ಬರು ಈಗ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ‘ಭರವಸೆ ನೀಡಿದ ಯಾರೂ ಸಹ ಸಹಾಯ ಮಾಡ್ತಿಲ್ಲ. ವಕೀಲರ ಶುಲ್ಕವನ್ನು ನಮ್ಮ ಕುಟುಂಬಸ್ಥರೇ ನೋಡಿಕೊಳ್ಳುತ್ತಿದ್ದಾರೆ’ ಎಂದು ಅವರು ಬೇಸರಗೊಂಡಿದ್ದಾರೆ.

ಈ ಕಾರಣದಿಂದ ಚಿತ್ರದುರ್ಗ ಅಥವಾ ಶಿವಮೊಗ್ಗ ಜೈಲಿಗೆ ಶಿಫ್ಟ್ ಮಾಡಿ ಎಂದು ಅನುಕುಮಾರ್ ಮತ್ತು ಜಗದೀಶ್ ಜೈಲು ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. ಆದರೆ ದರ್ಶನ್​ಗೆ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಬೇಕೆಂಬ ಆಸೆ ಇದೆ. ಹಾಗಾಗಿ ಅನುಕುಮಾರ್ ಮತ್ತು ಜಗದೀಶ್ ಅವರನ್ನು ಪ್ರದೋಶ್ ಸಮಾಧಾನಪಡಿಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಜೈಲಿನಲ್ಲಿ ಇರುವ ಆರೋಪಿಗಳ ನಡುವೆ ಬಿರುಕು ಉಂಟಾದ ಕಾರಣದಿಂದ ಎಲ್ಲರ ಮೇಲೆ ಜೈಲು ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಗಾ ಇಟ್ಟಿದ್ದಾರೆ. ಖರ್ಚು ವೆಚ್ಚ, ಮನೆ ಪರಿಸ್ಥಿತಿಗಳ ಬಗ್ಗೆ ಅನುಕುಮಾರ್ ಮತ್ತು ಜಗದೀಶ್​ಗೆ ಚಿಂತೆ ಆಗಿದೆ. ಏನೋ ಮಾಡಲು ಹೋಗಿ ಇನ್ನೇನೊ ಆಯ್ತು ಎಂಬ ಪಶ್ಚಾತ್ತಾಪ ಅವರನ್ನು ಕಾಡುತ್ತಿದೆ. ಅಂದು ದರ್ಶನ್ ಸಲುವಾಗಿ ಕಿಡ್ನಾಪ್ ಮಾಡಿ ಕೊಲೆ ಕೇಸಲ್ಲಿ ಭಾಗಿಯಾಗಿದ್ದ ಅವರಿಬ್ಬರು ಈಗ ದರ್ಶನ್ ಮುಖ ನೋಡಿ ಮಾತಾಡಲು ಕೂಡ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಅಶ್ಲೀಲ ಕಮೆಂಟ್, ಅತ್ಯಾಚಾರ ಬೆದರಿಕೆ: 12 ಮಂದಿ ದರ್ಶನ್ ಫ್ಯಾನ್ಸ್ ವಿರುದ್ಧ ಮತ್ತೆ ಕೇಸ್

ಜಾಮೀನು ಸಿಗುವುದಕ್ಕೂ ಮುನ್ನ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಕಳಿಸಲಾಗಿತ್ತು. ಅದರಿಂದಾಗಿ ಅವರಿಗೆ ಭಾರಿ ಸಂಕಷ್ಟ ಆಗಿತ್ತು. ಜಾಮೀನು ರದ್ದಾಗಿ ಮತ್ತೆ ಜೈಲಿಗೆ ಬಂದಾಗ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳಿಸಲಾಯಿತು. ಒಂದು ವೇಳೆ ಪುನಃ ಬಳ್ಳಾರಿ ಜೈಲಿಗೆ ಕಳಿಸಿದರೆ ದರ್ಶನ್​ಗೆ ಮತ್ತೆ ಸಂಕಷ್ಟ ಹೆಚ್ಚಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು