AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಜಾಮೀನು ಏಕೆ ನೀಡಬಾರದು ಎಂಬುದಕ್ಕೆ ಕಾರಣಗಳ ಪಟ್ಟಿಯನ್ನೇ ಸಿದ್ಧಪಡಿಸಿದ ಪೊಲೀಸರು

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಗಳನ್ನು ದೂಡುತ್ತಿರುವ ನಟ ದರ್ಶನ್​, ಜೈಲಿನ ವಾತಾವರಣದಲ್ಲಿ ಕೆಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮಧ್ಯೆ ದರ್ಶನ್​​ಗೆ ಜಾಮೀನು ನೀಡಬಾರದು ಎಂದು ಕೇಳಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ದರ್ಶನ್​ಗೆ ಜಾಮೀನು ಏಕೆ ನೀಡಬಾರದು ಎಂಬುದಕ್ಕೆ ಕಾರಣಗಳ ಪಟ್ಟಿಯನ್ನೇ ಸಿದ್ಧಪಡಿಸಿದ ಪೊಲೀಸರು
ದರ್ಶನ್
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ರಾಜೇಶ್ ದುಗ್ಗುಮನೆ|

Updated on: Jul 17, 2024 | 11:18 AM

Share

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿದೆ. ಸದ್ಯ ಕೇಂದ್ರ ಕಾರಾಗೃಹದಲ್ಲಿ ಇವರು ಕಂಬಿ ಎಣಿಸುತ್ತಿದ್ದಾರೆ. ಈಗಾಗಲೇ ಜೈಲು ಸೇರಿ ಇವರು ತಿಂಗಳ ಮೇಲಾಗಿದೆ. ಸದ್ಯ ಎಲ್ಲರೂ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಜುಲೈ 18ರಂದು ದರ್ಶನ್ ಹಾಗೂ ಅವರ ಗುಂಪಿನ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಅವರನ್ನು ಪೊಲೀಸರು ಮತ್ತೆ ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ. ಈ ವೇಳೆ ದರ್ಶನ್​ ಹಾಗೂ ಇತರ ಆರೋಪಿಗಳಿಗೆ ಏಕೆ ಜಾಮೀನು ನೀಡಬಾರದು ಎಂಬುದಕ್ಕೆ ಪೊಲೀಸರು ದೊಡ್ಡ ಪಟ್ಟಿ ಸಿದ್ಧಪಡಿಸಿದ್ದಾರೆ. ಗುರುವಾರ (ಜುಲೈ 18) ಪೊಲೀಸರು ನ್ಯಾಯಾಲಯಕ್ಕೆ ರಿಮಾಂಡ್ ಅರ್ಜಿ ಸಲ್ಲಿಸಲಿದ್ದಾರೆ.

ಆರೋಪಿಗಳಿಗೆ ಜಾಮೀನು ಏಕೆ ನೀಡಬಾರದು ಎಂಬುದಕ್ಕೆ ಕೆಲವು ಪ್ರಮುಖ ಕಾರಣಗಳನ್ನು ಪೊಲೀಸರು ಸಿದ್ಧಪಡಿಸಿದ್ದಾರೆ. ಕೊಲೆ ಬಳಿಕ ಸಾಕ್ಷ್ಯ ನಾಶಕ್ಕೆ ದರ್ಶನ್ ಗ್ಯಾಂಗ್ ಮುಂದಾಗಿತ್ತು. ಇದನ್ನು ಪ್ರಮುಖವಾಗಿ ಪೊಲೀಸರು ಮುಂದಿಟ್ಟುಕೊಂಡಿದ್ದಾರೆ. ಜೊತೆಗೆ ದರ್ಶನ್​ ಅವರಿಗೆ ಸಖತ್ ಪ್ರಭಾವ ಇದೆ ಎಂಬುದನ್ನು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ದೈಹಿಕ, ಮಾನಸಿಕ ಆರೋಗ್ಯಕ್ಕೆ ಜೈಲಿನಲ್ಲಿ ಯೋಗದ ಮೊರೆ ಹೋದ ದರ್ಶನ್

  1. ಮಾಡುತ್ತಿರೋದು ಅಪರಾಧ ಎಂದು ಗೊತ್ತಿದ್ದು ಪ್ರಕರಣದ ಎಲ್ಲಾ ಆರೋಪಿಗಳಿಗೂ ಕೃತ್ಯ ಎಸಗಿದ್ದಾರೆ
  2. ಕೊಲೆ ಮಾಡಿದ ಬಳಿಕ ಉದ್ದೇಶಪೂರ್ವಕವಾಗಿ ಸಾಕ್ಷ್ಯವನ್ನ ನಾಶ ಮಾಡಿದ್ದಾರೆ
  3. ಆರೋಪಿಗಳು ಸಾಕ್ಷ್ಯ ನಾಶ ಮಾಡಿರುವುದಕ್ಕೆ ಎಫ್​ಎಸ್​​ಎಲ್ ವರದಿಗಳು ಬರಬೇಕಿದೆ
  4. ಆರೋಪಿಗಳಿಗೆ ಜಾಮೀನು ಸಿಕ್ಕರೆ ಸಾಕ್ಷಿಗಳ‌ ಮೇಲೆ ಪ್ರಭಾವ ಬಿರುತ್ತಾರೆ
  5. ಆರೋಪಿಗಳು ಜಾಮೀನು ಪಡೆದರೆ ನ್ಯಾಯಾಲಯದ ವಿಚಾರಣೆಯಲ್ಲಿ ಪಾರಾಗಲು ಮತ್ತೆ ಯೋಜನೆ ರೂಪಿಸಬಹುದು
  6. ಇದರಲ್ಲಿ A2 (ದರ್ಶನ್) ಆರೋಪಿಗೆ ಹಣ ಮತ್ತು ಅಭಿಮಾನಿ ಬಳಗ ಇದ್ದು ಅವರ ಮುಖಾಂತರ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು
  7. ಆರೋಪಿಗಳು ಹೊರಗೆ ಬಂದ್ರೆ ವಿದೇಶಕ್ಕೆ ಬೇಕಾದರೂ ಪರಾರಿಯಾಗಬಹುದು
  8. ತನಿಖೆಯೂ ಇನ್ನೂ ಪ್ರಗತಿಯ ಹಂತದಲ್ಲಿದೆ ಈ ಸಂದರ್ಭ ಜಾಮೀನು ಸಿಕ್ಕರೆ ತನಿಖೆಯ ಮೇಲೆ ಪ್ರಭಾವ ಆಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ