AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಜಾಮೀನು ಏಕೆ ನೀಡಬಾರದು ಎಂಬುದಕ್ಕೆ ಕಾರಣಗಳ ಪಟ್ಟಿಯನ್ನೇ ಸಿದ್ಧಪಡಿಸಿದ ಪೊಲೀಸರು

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಗಳನ್ನು ದೂಡುತ್ತಿರುವ ನಟ ದರ್ಶನ್​, ಜೈಲಿನ ವಾತಾವರಣದಲ್ಲಿ ಕೆಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮಧ್ಯೆ ದರ್ಶನ್​​ಗೆ ಜಾಮೀನು ನೀಡಬಾರದು ಎಂದು ಕೇಳಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ದರ್ಶನ್​ಗೆ ಜಾಮೀನು ಏಕೆ ನೀಡಬಾರದು ಎಂಬುದಕ್ಕೆ ಕಾರಣಗಳ ಪಟ್ಟಿಯನ್ನೇ ಸಿದ್ಧಪಡಿಸಿದ ಪೊಲೀಸರು
ದರ್ಶನ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jul 17, 2024 | 11:18 AM

Share

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿದೆ. ಸದ್ಯ ಕೇಂದ್ರ ಕಾರಾಗೃಹದಲ್ಲಿ ಇವರು ಕಂಬಿ ಎಣಿಸುತ್ತಿದ್ದಾರೆ. ಈಗಾಗಲೇ ಜೈಲು ಸೇರಿ ಇವರು ತಿಂಗಳ ಮೇಲಾಗಿದೆ. ಸದ್ಯ ಎಲ್ಲರೂ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಜುಲೈ 18ರಂದು ದರ್ಶನ್ ಹಾಗೂ ಅವರ ಗುಂಪಿನ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಅವರನ್ನು ಪೊಲೀಸರು ಮತ್ತೆ ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ. ಈ ವೇಳೆ ದರ್ಶನ್​ ಹಾಗೂ ಇತರ ಆರೋಪಿಗಳಿಗೆ ಏಕೆ ಜಾಮೀನು ನೀಡಬಾರದು ಎಂಬುದಕ್ಕೆ ಪೊಲೀಸರು ದೊಡ್ಡ ಪಟ್ಟಿ ಸಿದ್ಧಪಡಿಸಿದ್ದಾರೆ. ಗುರುವಾರ (ಜುಲೈ 18) ಪೊಲೀಸರು ನ್ಯಾಯಾಲಯಕ್ಕೆ ರಿಮಾಂಡ್ ಅರ್ಜಿ ಸಲ್ಲಿಸಲಿದ್ದಾರೆ.

ಆರೋಪಿಗಳಿಗೆ ಜಾಮೀನು ಏಕೆ ನೀಡಬಾರದು ಎಂಬುದಕ್ಕೆ ಕೆಲವು ಪ್ರಮುಖ ಕಾರಣಗಳನ್ನು ಪೊಲೀಸರು ಸಿದ್ಧಪಡಿಸಿದ್ದಾರೆ. ಕೊಲೆ ಬಳಿಕ ಸಾಕ್ಷ್ಯ ನಾಶಕ್ಕೆ ದರ್ಶನ್ ಗ್ಯಾಂಗ್ ಮುಂದಾಗಿತ್ತು. ಇದನ್ನು ಪ್ರಮುಖವಾಗಿ ಪೊಲೀಸರು ಮುಂದಿಟ್ಟುಕೊಂಡಿದ್ದಾರೆ. ಜೊತೆಗೆ ದರ್ಶನ್​ ಅವರಿಗೆ ಸಖತ್ ಪ್ರಭಾವ ಇದೆ ಎಂಬುದನ್ನು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ದೈಹಿಕ, ಮಾನಸಿಕ ಆರೋಗ್ಯಕ್ಕೆ ಜೈಲಿನಲ್ಲಿ ಯೋಗದ ಮೊರೆ ಹೋದ ದರ್ಶನ್

  1. ಮಾಡುತ್ತಿರೋದು ಅಪರಾಧ ಎಂದು ಗೊತ್ತಿದ್ದು ಪ್ರಕರಣದ ಎಲ್ಲಾ ಆರೋಪಿಗಳಿಗೂ ಕೃತ್ಯ ಎಸಗಿದ್ದಾರೆ
  2. ಕೊಲೆ ಮಾಡಿದ ಬಳಿಕ ಉದ್ದೇಶಪೂರ್ವಕವಾಗಿ ಸಾಕ್ಷ್ಯವನ್ನ ನಾಶ ಮಾಡಿದ್ದಾರೆ
  3. ಆರೋಪಿಗಳು ಸಾಕ್ಷ್ಯ ನಾಶ ಮಾಡಿರುವುದಕ್ಕೆ ಎಫ್​ಎಸ್​​ಎಲ್ ವರದಿಗಳು ಬರಬೇಕಿದೆ
  4. ಆರೋಪಿಗಳಿಗೆ ಜಾಮೀನು ಸಿಕ್ಕರೆ ಸಾಕ್ಷಿಗಳ‌ ಮೇಲೆ ಪ್ರಭಾವ ಬಿರುತ್ತಾರೆ
  5. ಆರೋಪಿಗಳು ಜಾಮೀನು ಪಡೆದರೆ ನ್ಯಾಯಾಲಯದ ವಿಚಾರಣೆಯಲ್ಲಿ ಪಾರಾಗಲು ಮತ್ತೆ ಯೋಜನೆ ರೂಪಿಸಬಹುದು
  6. ಇದರಲ್ಲಿ A2 (ದರ್ಶನ್) ಆರೋಪಿಗೆ ಹಣ ಮತ್ತು ಅಭಿಮಾನಿ ಬಳಗ ಇದ್ದು ಅವರ ಮುಖಾಂತರ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು
  7. ಆರೋಪಿಗಳು ಹೊರಗೆ ಬಂದ್ರೆ ವಿದೇಶಕ್ಕೆ ಬೇಕಾದರೂ ಪರಾರಿಯಾಗಬಹುದು
  8. ತನಿಖೆಯೂ ಇನ್ನೂ ಪ್ರಗತಿಯ ಹಂತದಲ್ಲಿದೆ ಈ ಸಂದರ್ಭ ಜಾಮೀನು ಸಿಕ್ಕರೆ ತನಿಖೆಯ ಮೇಲೆ ಪ್ರಭಾವ ಆಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?