AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Thoogudeepa: ದರ್ಶನ್​ ಜಾಮೀನು ರದ್ದು; ಪೊಲೀಸರ ಮುಂದಿನ ಕಾನೂನು ಕ್ರಮವೇನು?

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಮತ್ತೆ ಜೈಲೇ ಗತಿ ಆಗಿದೆ. ಆರೋಪಿಗಳ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಹಾಗಾದರೆ ದರ್ಶನ್​​ಗೆ ಮುಂದಿರುವ ಆಯ್ಕೆಗಳೇನು, ಪೊಲೀಸರ ಮುಂದಿನ ಕಾನೂನು ಕ್ರಮಗಳು ಹೇಗಿರಲಿದೆ ಎಂದು ಸಂಪೂರ್ಣ ಮಾಹಿತಿ ಇಲ್ಲಿದೆ. 

Darshan Thoogudeepa: ದರ್ಶನ್​ ಜಾಮೀನು ರದ್ದು; ಪೊಲೀಸರ ಮುಂದಿನ ಕಾನೂನು ಕ್ರಮವೇನು?
ದರ್ಶನ್
Shivaprasad B
| Edited By: |

Updated on:Aug 14, 2025 | 12:43 PM

Share

ಬೆಂಗಳೂರು, ಆಗಸ್ಟ್​ 14: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ರೇಣುಕಾಸ್ವಾಮಿ ಹತ್ಯೆ ಕೇಸ್​ಗೆ ಸಂಬಂಧಿಸಿದಂತೆ ನಟ ದರ್ಶನ್ (Darshan), ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ (Supreme Court)​ ಮಹತ್ವದ ಆದೇಶ ಹೊರಡಿಸಿದೆ. ಆ ಮೂಲಕ ಮತ್ತೆ ಕೊಲೆ ಆರೋಪಿಗಳಿಗೆ ಜೈಲೇ ಗತಿ ಎನ್ನುವಂತಾಗಿದೆ. ಹಾಗಾದರೆ ದರ್ಶನ್​​ಗೆ ಮುಂದಿರುವ ಆಯ್ಕೆಗಳೇನು, ಪೊಲೀಸರ ಮುಂದಿನ ಕಾನೂನು ಕ್ರಮಗಳು ಹೇಗಿರಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಮೊದಲಿಗೆ ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್​ ಸುಪ್ರೀಂಕೋರ್ಟ್​ನ ಜಾಮೀನು ರದ್ದು ಆದೇಶದ ಪ್ರತಿ ಪಡೆಯಲಿದ್ದಾರೆ. ಆ ಬಳಿಕ ವಿಚಾರಣಾಧೀನ ನ್ಯಾಯಾಲಯಕ್ಕೆ ಜಾಮೀನು ರದ್ದು ಆದೇಶದ ಪ್ರತಿ ಸಲ್ಲಿಕೆ ಮಾಡಿ ಅರೆಸ್ಟ್ ವಾರೆಂಟ್ ಪಡೆಯಲಿದ್ದಾರೆ.

ಇದನ್ನೂ ಓದಿ: ದರ್ಶನ್​ ಕೇಸ್​ ಎಫೆಕ್ಟ್​: ಜೈಲಲ್ಲಿ ಖೈದಿಗಳು ಸಿಗರೇಟ್​ ಸೇದುವ ಹಾಗಿಲ್ಲ; ಸುಪ್ರೀಂ ಖಡಕ್​ ಸೂಚನೆ

ಇದನ್ನೂ ಓದಿ
Image
ದರ್ಶನ್​, ಪವಿತ್ರಾ ಬೇಲ್ ರದ್ದು, ಸರ್ಕಾರಿ ವಕೀಲರು ಹೇಳಿದ್ದೇನು?
Image
ಸ್ವಯಂಕೃತ ತಪ್ಪುಗಳೇ ಕುಣಿಕೆ ಆಯ್ತು ; ದರ್ಶನ್ ಜಾಮೀನು ರದ್ದಿಗೆ ಕಾರಣಗಳು
Image
ರೇಣುಕಾಸ್ವಾಮಿ ಕೊಲೆ: ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು
Image
ದರ್ಶನ್​​ಗೆ ಮತ್ತೆ ಜೈಲು; ಇಲ್ಲಿದೆ ವಿಚಾರಣೆಯ ಲೈವ್ ವಿಡಿಯೋ

ಕೋರ್ಟ್​ನಿಂದ ಅರೆಸ್ಟ್ ವಾರೆಂಟ್ ಪಡೆದು ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಕಾಮಾಕ್ಷಿಪಾಳ್ಯ ಪೊಲೀಸರು ಅರೆಸ್ಟ್ ಮಾಡಲಿದ್ದಾರೆ. ಅದಕ್ಕೂ ಮೊದಲೇ ಆರೋಪಿಗಳು ಸರೆಂಡರ್ ಆದರೆ ಅರೆಸ್ಟ್ ವಾರೆಂಟ್ ಪಡೆಯುವ ಅವಶ್ಯಕತೆಯಿಲ್ಲ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ ಆಯಾ ಜೈಲುಗಳಿಗೆ ಆರೋಪಿಗಳನ್ನು ಪೊಲೀಸರು ವರ್ಗಾಯಿಸಲಿದ್ದಾರೆ.

ದರ್ಶನ್ ಮುಂದೆ ಸದ್ಯಕ್ಕಿಲ್ಲ ಬೇರೆ ಆಯ್ಕೆ

ದರ್ಶನ್ ಮುಂದೆ ಸದ್ಯಕ್ಕಿಲ್ಲ ಬೇರೆ ಆಯ್ಕೆಗಳಲಿಲ್ಲ. ಶೀಘ್ರದಲ್ಲೇ ಸೆಷನ್ಸ್ ಕೋರ್ಟ್​ಗೆ ಶರಣಾಗಬೇಕಿದೆ. ಇಂದು ತೀರ್ಪಿನ ಪ್ರತಿ ಸಿಕ್ಕ ಬಳಿಕ ಈ ಬಗ್ಗೆ ಶರಣಾಗುವುದು ಯಾವಾಗ ಎಂದು ಸಂಜೆಯೊಳಗೆ ತೀರ್ಮಾನ ಸಾಧ್ಯತೆ ಇದೆ. ಸದ್ಯ ಸುಪ್ರೀಂಕೋರ್ಟ್ ತೀರ್ಪಿನ ಪ್ರತಿಗಾಗಿ ವಕೀಲರು ಕಾಯುತ್ತಿದ್ದಾರೆ.

ಮತ್ತೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ದರ್ಶನ್ ಶಿಫ್ಟ್​ ಮಾಡುವ ಸಾಧ್ಯತೆ

ಇನ್ನು ದರ್ಶನ್​ ಮತ್ತೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್​ ಮಾಡುವ ಸಾಧ್ಯತೆ ಇದೆ. ಈ ಹಿಂದೆ 63 ದಿನಗಳ ಕಾಲ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದರು. ಅಕ್ಟೋಬರ್ 30ಕ್ಕೆ ಅಲ್ಲಿಂದ ರಿಲೀಸ್ ಆಗಿದ್ದರು. ಇದೀಗ ಮತ್ತೆ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್​ ಮಾಡುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಜೈಲಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ದರ್ಶನ್ ಕೇಸ್: ಎಲ್ಲಾ ಹೈಕೋರ್ಟ್, ಜೈಲುಗಳಿಗೆ ತನ್ನ ಆದೇಶದ ಪ್ರತಿ ಹೋಗಬೇಕೆಂದ ಸುಪ್ರೀಂಕೋರ್ಟ್; ಅಂಥದ್ದೇನಿದೆ ತೀರ್ಪಿನಲ್ಲಿ?

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾಗ ತೀವ್ರ ಬೆನ್ನುನೋವಿನಿಂದ ದರ್ಶನ್​ ಬಳಲಿದ್ದರು. ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಸ್ಕ್ಯಾನ್ ಸಹಿತ ಮಾಡಿಸಲಾಗಿತ್ತು. ಬಳಿಕ ತುರ್ತು ಸರ್ಜರಿಗೆ ಸೂಚಿಸಲಾಗಿತ್ತು. ಅದೇ ಆಧಾರದ ಮೇಲೆ ದರ್ಶನ್​ ಜಾಮೀನು ಪಡೆದಿದ್ದರು.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 12:41 pm, Thu, 14 August 25

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ