AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಂದಲೇ ದರ್ಶನ್​ಗೆ ಹೆಚ್ಚುತ್ತಿದೆ ತೊಂದರೆ; ದಾಸನಿಗೆ ಜಾಮೀನು ಸಿಗದಿರಲು ನೀವೇ ಕಾರಣ ಆಗಬಹುದು

ನಟ ದರ್ಶನ್ ಅವರು ಈಗ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗುತ್ತಿದ್ದಾರೆ. ಬೆಂಗಳೂರಿನ ವಾತಾವರಣದಿಂದ ದರ್ಶನ್ ಹಾಯಾಗಿ ಇದ್ದರು. ಈಗ ಅವರು ಅನಿವಾರ್ಯವಾಗಿ ಬಳ್ಳಾರಿಗೆ ಹೋಗಬೇಕಾದ ಪರಿಸ್ಥಿತಿ ಬಂದೊದಗಿದೆ. ಫ್ಯಾನ್ಸ್​ಗಳ ಕೆಲ ಕೆಲಸಗಳು ನಟನಿಗೆ ಕಂಟಕ ತಂದಿಡುತ್ತಾ ಇವೆ.

ಅಭಿಮಾನಿಗಳಿಂದಲೇ ದರ್ಶನ್​ಗೆ ಹೆಚ್ಚುತ್ತಿದೆ ತೊಂದರೆ; ದಾಸನಿಗೆ ಜಾಮೀನು ಸಿಗದಿರಲು ನೀವೇ ಕಾರಣ ಆಗಬಹುದು
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Aug 28, 2024 | 10:58 AM

Share

ದರ್ಶನ್ ಅವರ ಅಭಿಮಾನಿಗಳ ಹಾವಳಿ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚುತ್ತಿದೆ. ಜೈಲಿನ ಫೋಟೋ ವೈರಲ್ ಆದಾಗಲೂ ‘ಡಿ ಬಾಸ್ ಎಲ್ಲಿದ್ರೂ ರಾಜನೇ’ ಎಂದೆಲ್ಲ ಹೇಳಿ ಟ್ವೀಟ್ ಮಾಡಲಾಗಿತ್ತು. ಕೆಲವು ಮಾಹಿತಿಗಳ ಪ್ರಕಾರ ಅತಿರೇಕ ಹೆಚ್ಚಾದಷ್ಟು ದರ್ಶನ್​ಗೆ ಸಂಕಷ್ಟ ಹೆಚ್ಚಲಿದೆ. ಫ್ಯಾನ್ಸ್​ಗಳ ಕೆಲ ಕೆಲಸಗಳು ನಟನಿಗೆ ಕಂಟಕ ತಂದಿಡುತ್ತಾ ಇವೆ. ಮುಂದೆ ಜಾಮೀನು ಪಡೆಯಲು ಇದು ತೊಂದರೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ದರ್ಶನ್ ಜೈಲಿನಲ್ಲಿ ಸಿಗರೇಟ್ ಸೇದುತ್ತಾ ಕುಳಿತಿರುವ ಫೋಟೋ, ವಿಡಿಯೋ ಕಾಲ್ ವಿಡಿಯೋ ವೈರಲ್ ಆಗಿದೆ. ‘ನಮ್ ಬಾಸ್ ಎಲ್ಲಿದ್ರೂ ರಾಜನೇ’ ಎಂದು ಇದನ್ನು ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ. ದರ್ಶನ್ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದನ್ನೂ ಸಪೋರ್ಟ್ ಮಾಡೋ ರೀತಿ ಪೋಸ್ಟ್​ಗಳನ್ನು ಮಾಡಲಾಗುತ್ತಿದೆ. ದರ್ಶನ್ ವಿರುದ್ಧ ಮಾತನಾಡುವ ವ್ಯಕ್ತಿಗಳ ವಿರುದ್ಧ ತೇಜೋವಧೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವ ಕೆಲಸವನ್ನು ಫ್ಯಾನ್ಸ್ ಮಾಡುತ್ತಿದ್ದಾರೆ. ಈ‌‌ ವಿಚಾರಗಳೂ ದರ್ಶನ್​ಗೆ ಕಂಟಕ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈಗಾಗಲೇ ರಿಮ್ಯಾಂಡ್ ಅಪ್ಲಿಕೇಷನ್​ನಲ್ಲಿ ಫ್ಯಾನ್ಸ್ ಬಗ್ಗೆ ಪೊಲೀಸರು ಉಲ್ಲೇಖಿಸಿದ್ದಾರೆ. ‘ದರ್ಶನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ದರ್ಶನ್ ಅಭಿಮಾನಿಗಳಿಂದ ಸಾಕ್ಷ್ಯ ನಾಶ ಮಾಡಿಸುವ ಸಾಧ್ಯತೆ ಇದೆ’ ಎಂದು ಹೇಳಲಾಗಿದೆ. ಮುಂದೆ ಜಾಮೀನು ಅರ್ಜಿ ವಿಚಾರ ಬಂದಾಗ ಪೊಲೀಸರು ಸೋಶಿಯಲ್ ಮೀಡಿಯಾದ ಫ್ಯಾನ್ಸ್ ಹಾವಳಿ ವಿಚಾರವನ್ನು ಪ್ರಸ್ತಾಪ ಮಾಡಿದರೆ ಜಾಮೀನಿಗೆ ತೊಡಕು ಉಂಟಾಗುವ ಸಾಧ್ಯತೆ ಇರುತ್ತದೆ’ ಎಂದು ಹೇಳಲಾಗಿದೆ.

ಇದನ್ನೂ ಓದಿ: ದರ್ಶನ್​ಗೆ ಆತಿಥ್ಯ ಕೊಡಲು ರೌಡಿಗಳ ಮಧ್ಯೆ ಸ್ಪರ್ಧೆ; ಕಂಟಕ ಎದುರಾಗಿದ್ದು ಮಾತ್ರ ದಾಸನಿಗೆ  

ದರ್ಶನ್ ವಿಚಾರಣೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್​ಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿ 3 ಎಫ್​ಐಆರ್​ ದಾಖಲಾಗಿದೆ. ಈ ಪೈಕಿ ಎರಡು ಪ್ರಕರಣಗಳಲ್ಲಿ ಇಂದು ಆರೋಪಿ ನಟ ದರ್ಶನ್ ವಿಚಾರಣೆ ನಡೆಯಲಿದೆ. ವಿಚಾರಣೆ, ಮಹಜರು ನಡೆಸಿ ಹೇಳಿಕೆ ದಾಖಲಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಆರೋಪಿ ನಟ ದರ್ಶನ್​, ರೌಡಿಶೀಟರ್​ಗಳಾದ ವಿಲ್ಸನ್​ ಗಾರ್ಡನ್​​ ನಾಗ, ಕುಳ್ಳ ಸೀನ, ದರ್ಶನ್ ಆಪ್ತನಾಗಿರುವ ಆರೋಪಿ ನಾಗರಾಜ್ ವಿಚಾರಣೆ ಕೂಡ ನಡೆಯಲಿದೆ. ಬಳ್ಳಾರಿ ಜೈಲಿಗೆ ಶಿಫ್ಟ್​ಗೆ ಮುನ್ನ ದರ್ಶನ್ ವಿಚಾರಣೆ, ಸ್ಥಳಮಹಜರು ಪ್ರಕ್ರಿಯೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ