AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಜೈಲಿನಲ್ಲಿ ದರ್ಶನ್​ಗೆ ಶುರುವಾಯ್ತು ಸಮಸ್ಯೆ, ಜೈಲಧಿಕಾರಿಗಳ ಬಳಿ ಮನವಿ

Darshan Thoogudeepa: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರಾಮವಾಗಿ ದಿನಕಳೆಯುತ್ತಿದ್ದ ದರ್ಶನ್​ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಳ್ಳುತ್ತಿದ್ದಂತೆ ಸಮಸ್ಯೆ ಶುರುವಾಗಿದೆ. ಬೆನ್ನು ನೋವು, ಕೈ ನೋವು ಅನುಭವಿಸುತ್ತಿರುವ ನಟ ದರ್ಶನ್, ಶೌಚಾಲಯ ಬದಲಾವಣೆಗಾಗಿ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ.

ಬಳ್ಳಾರಿ ಜೈಲಿನಲ್ಲಿ ದರ್ಶನ್​ಗೆ ಶುರುವಾಯ್ತು ಸಮಸ್ಯೆ, ಜೈಲಧಿಕಾರಿಗಳ ಬಳಿ ಮನವಿ
ಮಂಜುನಾಥ ಸಿ.
|

Updated on: Aug 31, 2024 | 4:23 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟ ದರ್ಶನ್ ಅನ್ನು ಈಗ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲು ಸೇರಿದ ಹೊಸತರಲ್ಲಿ ಕೆಲವು ಆರೋಗ್ಯ ಸಮಸ್ಯೆಗಳನ್ನು ದರ್ಶನ್ ಎದುರಿಸಿದ್ದರು. ಈಗ ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರಗೊಂಡಿದ್ದು, ಸ್ಥಳಾಂತರ ಗೊಳ್ಳುವಾಗಲೇ ಕೈಗೆ ಬ್ಯಾಂಡೇಜ್ ಹಾಕಿಕೊಂಡೇ ಬಂದಿದ್ದರು. ಆದರೆ ಇದೀಗ ಮತ್ತೊಂದು ಆರೋಗ್ಯ ಸಮಸ್ಯೆಯನ್ನು ದರ್ಶನ್ ಎದುರಿಸುತ್ತಿದ್ದು, ಜೈಲು ಅಧಿಕಾರಿಗಳ ಬಳಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ದರ್ಶನ್ ಅನ್ನು ಬಳ್ಳಾರಿ ಜೈಲಿನ 15ನೇ ಬ್ಯಾರಕ್​ನಲ್ಲಿ ಇರಿಸಲಾಗಿದೆ. ವಿಶೇಷ ಭದ್ರತೆ ಉಳ್ಳ ಬ್ಯಾರಕ್ ಇದಾಗಿದೆ. ಆದರೆ ಈ ಬ್ಯಾರಕ್​ನಲ್ಲಿ ಶೌಚಾಲಯವು ಭಾರತೀಯ ಶೈಲಿಯದ್ದು ಅಂದರೆ ಎರಡೂ ಮೊಣಕಾಲು ಮಡಚಿ ಕುಳಿತುಕೊಳ್ಳುವ ಶೈಲಿಯದ್ದಾಗಿದೆ. ಇದು ದರ್ಶನ್​ರ ತಲೆನೋವಿಗೆ ಕಾರಣವಾಗಿದೆ. ಬೆನ್ನು ನೋವು ಹಾಗೂ ಎಡಗೈ ನೋವಿನಿಂದ ಬಳಲುತ್ತಿರುವ ದರ್ಶನ್​ಗೆ ಭಾರತೀಯ ಶೈಲಿಯ ಶೌಚಾಲಯವನ್ನು ಬಳಸುವುದು ಕಷ್ಟವಾಗುತ್ತಿದೆಯಂತೆ.

ಈ ಬಗ್ಗೆ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿರುವ ನಟ ದರ್ಶನ್, ನನಗೆ ಬೆನ್ನು ನೋವು ಹಾಗೂ ಕೈ ನೋವುಗಳಿದ್ದು, ಭಾರತೀಯ ಶೌಚಾಲಯ ಬಳಸುವುದು ಬಹಳ ಕಷ್ಟವಾಗುತ್ತದೆ. ಹಾಗಾಗಿ ಈ ಬ್ಯಾರಕ್​ಗೆ ಪಾಶ್ಚಿಮಾತ್ಯ ಶೈಲಿಯ ಶೌಚಾಲಯ ಫಿಟ್ ಮಾಡಿಕೊಡಿ ಇಲ್ಲವಾದರೆ ಸರ್ಜಿಕಲ್ ಚೇರ್ ಅನ್ನಾದರೂ ಕೊಡಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಜೈಲಧಿಕಾರಿಗಳು, ಜೈಲಿನ ಆರೋಗ್ಯಾಧಿಕಾರಿಗಳ ಜೊತೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಿದ್ದಾರೆ.

ಇದನ್ನೂ ಓದಿ:ದರ್ಶನ್​ರನ್ನು ಐಸೋಲೇಟ್ ಮಾಡಿ ಪ್ರತ್ಯೇಕ ಸೆಲ್ ನಲ್ಲಿ ಇರಿಸಲಾಗಿದೆ: ಟಿಪಿ ಶೇಷ, ಡಿಐಜಿ

ವರ್ಷಗಳಿಂದಲೂ ಪಾಶ್ಚಿಮಾತ್ಯ ಶೈಲಿಯ ಶೌಚಾಲಯ ಬಳಸಿದವರಿಗೆ ಅದರಲ್ಲೂ ದೇಹತೂಕ ತುಸು ಹೆಚ್ಚಿರುವವರಿಗೆ ಭಾರತೀಯ ಶೈಲಿಯ ಶೌಚಾಲಯ ಬಳಸುವುದು ಬಹಳ ಕಷ್ಟದ ಕೆಲಸ. ಅದರಲ್ಲೂ ದರ್ಶನ್​ಗೆ ಬೆನ್ನು ನೋವು, ಸೊಂಟ ನೋವು ಹಾಗೂ ಎಡಗೈ ನೋವು ಸಹ ಇದೆ. ಹೀಗಿರುವಾಗಂತೂ ಭಾರತೀಯ ಶೌಚಾಲಯವನ್ನು ಬಳಸುವುದು ಬಹಳ ತ್ರಾಸದಾಯಕವಾಗಿರುತ್ತದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ಸ್ವೀಕಾರ ಮಾಡಿದ ಕಾರಣ ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ, ಕುರ್ಚಿಯೊಂದರ ಮೇಲೆ ಕುಳಿತು ಸಿಗರೇಟು ಸೇದುತ್ತಾ, ಕಾಫಿ ಹೀರುತ್ತಿರುವ ಚಿತ್ರವೊಂದು ವೈರಲ್ ಆಗಿತ್ತು. ಆ ಚಿತ್ರ ವೈರಲ್ ಆದ ಬಳಿಕ ದರ್ಶನ್ ಸೇರಿದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಇನ್ನಿತರೆ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆಗೆ ಶಿಫ್ಟ್ ಮಾಡಲಾಯ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ