AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಜೈಲಿನಲ್ಲಿ ದರ್ಶನ್​ಗೆ ಶುರುವಾಯ್ತು ಸಮಸ್ಯೆ, ಜೈಲಧಿಕಾರಿಗಳ ಬಳಿ ಮನವಿ

Darshan Thoogudeepa: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರಾಮವಾಗಿ ದಿನಕಳೆಯುತ್ತಿದ್ದ ದರ್ಶನ್​ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಳ್ಳುತ್ತಿದ್ದಂತೆ ಸಮಸ್ಯೆ ಶುರುವಾಗಿದೆ. ಬೆನ್ನು ನೋವು, ಕೈ ನೋವು ಅನುಭವಿಸುತ್ತಿರುವ ನಟ ದರ್ಶನ್, ಶೌಚಾಲಯ ಬದಲಾವಣೆಗಾಗಿ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ.

ಬಳ್ಳಾರಿ ಜೈಲಿನಲ್ಲಿ ದರ್ಶನ್​ಗೆ ಶುರುವಾಯ್ತು ಸಮಸ್ಯೆ, ಜೈಲಧಿಕಾರಿಗಳ ಬಳಿ ಮನವಿ
ಮಂಜುನಾಥ ಸಿ.
|

Updated on: Aug 31, 2024 | 4:23 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟ ದರ್ಶನ್ ಅನ್ನು ಈಗ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲು ಸೇರಿದ ಹೊಸತರಲ್ಲಿ ಕೆಲವು ಆರೋಗ್ಯ ಸಮಸ್ಯೆಗಳನ್ನು ದರ್ಶನ್ ಎದುರಿಸಿದ್ದರು. ಈಗ ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರಗೊಂಡಿದ್ದು, ಸ್ಥಳಾಂತರ ಗೊಳ್ಳುವಾಗಲೇ ಕೈಗೆ ಬ್ಯಾಂಡೇಜ್ ಹಾಕಿಕೊಂಡೇ ಬಂದಿದ್ದರು. ಆದರೆ ಇದೀಗ ಮತ್ತೊಂದು ಆರೋಗ್ಯ ಸಮಸ್ಯೆಯನ್ನು ದರ್ಶನ್ ಎದುರಿಸುತ್ತಿದ್ದು, ಜೈಲು ಅಧಿಕಾರಿಗಳ ಬಳಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ದರ್ಶನ್ ಅನ್ನು ಬಳ್ಳಾರಿ ಜೈಲಿನ 15ನೇ ಬ್ಯಾರಕ್​ನಲ್ಲಿ ಇರಿಸಲಾಗಿದೆ. ವಿಶೇಷ ಭದ್ರತೆ ಉಳ್ಳ ಬ್ಯಾರಕ್ ಇದಾಗಿದೆ. ಆದರೆ ಈ ಬ್ಯಾರಕ್​ನಲ್ಲಿ ಶೌಚಾಲಯವು ಭಾರತೀಯ ಶೈಲಿಯದ್ದು ಅಂದರೆ ಎರಡೂ ಮೊಣಕಾಲು ಮಡಚಿ ಕುಳಿತುಕೊಳ್ಳುವ ಶೈಲಿಯದ್ದಾಗಿದೆ. ಇದು ದರ್ಶನ್​ರ ತಲೆನೋವಿಗೆ ಕಾರಣವಾಗಿದೆ. ಬೆನ್ನು ನೋವು ಹಾಗೂ ಎಡಗೈ ನೋವಿನಿಂದ ಬಳಲುತ್ತಿರುವ ದರ್ಶನ್​ಗೆ ಭಾರತೀಯ ಶೈಲಿಯ ಶೌಚಾಲಯವನ್ನು ಬಳಸುವುದು ಕಷ್ಟವಾಗುತ್ತಿದೆಯಂತೆ.

ಈ ಬಗ್ಗೆ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿರುವ ನಟ ದರ್ಶನ್, ನನಗೆ ಬೆನ್ನು ನೋವು ಹಾಗೂ ಕೈ ನೋವುಗಳಿದ್ದು, ಭಾರತೀಯ ಶೌಚಾಲಯ ಬಳಸುವುದು ಬಹಳ ಕಷ್ಟವಾಗುತ್ತದೆ. ಹಾಗಾಗಿ ಈ ಬ್ಯಾರಕ್​ಗೆ ಪಾಶ್ಚಿಮಾತ್ಯ ಶೈಲಿಯ ಶೌಚಾಲಯ ಫಿಟ್ ಮಾಡಿಕೊಡಿ ಇಲ್ಲವಾದರೆ ಸರ್ಜಿಕಲ್ ಚೇರ್ ಅನ್ನಾದರೂ ಕೊಡಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಜೈಲಧಿಕಾರಿಗಳು, ಜೈಲಿನ ಆರೋಗ್ಯಾಧಿಕಾರಿಗಳ ಜೊತೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಿದ್ದಾರೆ.

ಇದನ್ನೂ ಓದಿ:ದರ್ಶನ್​ರನ್ನು ಐಸೋಲೇಟ್ ಮಾಡಿ ಪ್ರತ್ಯೇಕ ಸೆಲ್ ನಲ್ಲಿ ಇರಿಸಲಾಗಿದೆ: ಟಿಪಿ ಶೇಷ, ಡಿಐಜಿ

ವರ್ಷಗಳಿಂದಲೂ ಪಾಶ್ಚಿಮಾತ್ಯ ಶೈಲಿಯ ಶೌಚಾಲಯ ಬಳಸಿದವರಿಗೆ ಅದರಲ್ಲೂ ದೇಹತೂಕ ತುಸು ಹೆಚ್ಚಿರುವವರಿಗೆ ಭಾರತೀಯ ಶೈಲಿಯ ಶೌಚಾಲಯ ಬಳಸುವುದು ಬಹಳ ಕಷ್ಟದ ಕೆಲಸ. ಅದರಲ್ಲೂ ದರ್ಶನ್​ಗೆ ಬೆನ್ನು ನೋವು, ಸೊಂಟ ನೋವು ಹಾಗೂ ಎಡಗೈ ನೋವು ಸಹ ಇದೆ. ಹೀಗಿರುವಾಗಂತೂ ಭಾರತೀಯ ಶೌಚಾಲಯವನ್ನು ಬಳಸುವುದು ಬಹಳ ತ್ರಾಸದಾಯಕವಾಗಿರುತ್ತದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ಸ್ವೀಕಾರ ಮಾಡಿದ ಕಾರಣ ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ, ಕುರ್ಚಿಯೊಂದರ ಮೇಲೆ ಕುಳಿತು ಸಿಗರೇಟು ಸೇದುತ್ತಾ, ಕಾಫಿ ಹೀರುತ್ತಿರುವ ಚಿತ್ರವೊಂದು ವೈರಲ್ ಆಗಿತ್ತು. ಆ ಚಿತ್ರ ವೈರಲ್ ಆದ ಬಳಿಕ ದರ್ಶನ್ ಸೇರಿದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಇನ್ನಿತರೆ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆಗೆ ಶಿಫ್ಟ್ ಮಾಡಲಾಯ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ