AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಜೈಲಿನಲ್ಲಿ ದರ್ಶನ್​ಗೆ ಶುರುವಾಯ್ತು ಸಮಸ್ಯೆ, ಜೈಲಧಿಕಾರಿಗಳ ಬಳಿ ಮನವಿ

Darshan Thoogudeepa: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರಾಮವಾಗಿ ದಿನಕಳೆಯುತ್ತಿದ್ದ ದರ್ಶನ್​ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಳ್ಳುತ್ತಿದ್ದಂತೆ ಸಮಸ್ಯೆ ಶುರುವಾಗಿದೆ. ಬೆನ್ನು ನೋವು, ಕೈ ನೋವು ಅನುಭವಿಸುತ್ತಿರುವ ನಟ ದರ್ಶನ್, ಶೌಚಾಲಯ ಬದಲಾವಣೆಗಾಗಿ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ.

ಬಳ್ಳಾರಿ ಜೈಲಿನಲ್ಲಿ ದರ್ಶನ್​ಗೆ ಶುರುವಾಯ್ತು ಸಮಸ್ಯೆ, ಜೈಲಧಿಕಾರಿಗಳ ಬಳಿ ಮನವಿ
ಮಂಜುನಾಥ ಸಿ.
|

Updated on: Aug 31, 2024 | 4:23 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟ ದರ್ಶನ್ ಅನ್ನು ಈಗ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲು ಸೇರಿದ ಹೊಸತರಲ್ಲಿ ಕೆಲವು ಆರೋಗ್ಯ ಸಮಸ್ಯೆಗಳನ್ನು ದರ್ಶನ್ ಎದುರಿಸಿದ್ದರು. ಈಗ ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರಗೊಂಡಿದ್ದು, ಸ್ಥಳಾಂತರ ಗೊಳ್ಳುವಾಗಲೇ ಕೈಗೆ ಬ್ಯಾಂಡೇಜ್ ಹಾಕಿಕೊಂಡೇ ಬಂದಿದ್ದರು. ಆದರೆ ಇದೀಗ ಮತ್ತೊಂದು ಆರೋಗ್ಯ ಸಮಸ್ಯೆಯನ್ನು ದರ್ಶನ್ ಎದುರಿಸುತ್ತಿದ್ದು, ಜೈಲು ಅಧಿಕಾರಿಗಳ ಬಳಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ದರ್ಶನ್ ಅನ್ನು ಬಳ್ಳಾರಿ ಜೈಲಿನ 15ನೇ ಬ್ಯಾರಕ್​ನಲ್ಲಿ ಇರಿಸಲಾಗಿದೆ. ವಿಶೇಷ ಭದ್ರತೆ ಉಳ್ಳ ಬ್ಯಾರಕ್ ಇದಾಗಿದೆ. ಆದರೆ ಈ ಬ್ಯಾರಕ್​ನಲ್ಲಿ ಶೌಚಾಲಯವು ಭಾರತೀಯ ಶೈಲಿಯದ್ದು ಅಂದರೆ ಎರಡೂ ಮೊಣಕಾಲು ಮಡಚಿ ಕುಳಿತುಕೊಳ್ಳುವ ಶೈಲಿಯದ್ದಾಗಿದೆ. ಇದು ದರ್ಶನ್​ರ ತಲೆನೋವಿಗೆ ಕಾರಣವಾಗಿದೆ. ಬೆನ್ನು ನೋವು ಹಾಗೂ ಎಡಗೈ ನೋವಿನಿಂದ ಬಳಲುತ್ತಿರುವ ದರ್ಶನ್​ಗೆ ಭಾರತೀಯ ಶೈಲಿಯ ಶೌಚಾಲಯವನ್ನು ಬಳಸುವುದು ಕಷ್ಟವಾಗುತ್ತಿದೆಯಂತೆ.

ಈ ಬಗ್ಗೆ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿರುವ ನಟ ದರ್ಶನ್, ನನಗೆ ಬೆನ್ನು ನೋವು ಹಾಗೂ ಕೈ ನೋವುಗಳಿದ್ದು, ಭಾರತೀಯ ಶೌಚಾಲಯ ಬಳಸುವುದು ಬಹಳ ಕಷ್ಟವಾಗುತ್ತದೆ. ಹಾಗಾಗಿ ಈ ಬ್ಯಾರಕ್​ಗೆ ಪಾಶ್ಚಿಮಾತ್ಯ ಶೈಲಿಯ ಶೌಚಾಲಯ ಫಿಟ್ ಮಾಡಿಕೊಡಿ ಇಲ್ಲವಾದರೆ ಸರ್ಜಿಕಲ್ ಚೇರ್ ಅನ್ನಾದರೂ ಕೊಡಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಜೈಲಧಿಕಾರಿಗಳು, ಜೈಲಿನ ಆರೋಗ್ಯಾಧಿಕಾರಿಗಳ ಜೊತೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಿದ್ದಾರೆ.

ಇದನ್ನೂ ಓದಿ:ದರ್ಶನ್​ರನ್ನು ಐಸೋಲೇಟ್ ಮಾಡಿ ಪ್ರತ್ಯೇಕ ಸೆಲ್ ನಲ್ಲಿ ಇರಿಸಲಾಗಿದೆ: ಟಿಪಿ ಶೇಷ, ಡಿಐಜಿ

ವರ್ಷಗಳಿಂದಲೂ ಪಾಶ್ಚಿಮಾತ್ಯ ಶೈಲಿಯ ಶೌಚಾಲಯ ಬಳಸಿದವರಿಗೆ ಅದರಲ್ಲೂ ದೇಹತೂಕ ತುಸು ಹೆಚ್ಚಿರುವವರಿಗೆ ಭಾರತೀಯ ಶೈಲಿಯ ಶೌಚಾಲಯ ಬಳಸುವುದು ಬಹಳ ಕಷ್ಟದ ಕೆಲಸ. ಅದರಲ್ಲೂ ದರ್ಶನ್​ಗೆ ಬೆನ್ನು ನೋವು, ಸೊಂಟ ನೋವು ಹಾಗೂ ಎಡಗೈ ನೋವು ಸಹ ಇದೆ. ಹೀಗಿರುವಾಗಂತೂ ಭಾರತೀಯ ಶೌಚಾಲಯವನ್ನು ಬಳಸುವುದು ಬಹಳ ತ್ರಾಸದಾಯಕವಾಗಿರುತ್ತದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ಸ್ವೀಕಾರ ಮಾಡಿದ ಕಾರಣ ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ, ಕುರ್ಚಿಯೊಂದರ ಮೇಲೆ ಕುಳಿತು ಸಿಗರೇಟು ಸೇದುತ್ತಾ, ಕಾಫಿ ಹೀರುತ್ತಿರುವ ಚಿತ್ರವೊಂದು ವೈರಲ್ ಆಗಿತ್ತು. ಆ ಚಿತ್ರ ವೈರಲ್ ಆದ ಬಳಿಕ ದರ್ಶನ್ ಸೇರಿದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಇನ್ನಿತರೆ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆಗೆ ಶಿಫ್ಟ್ ಮಾಡಲಾಯ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು