AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಸಿನಿಮಾದಲ್ಲಿ ಡೇವಿಡ್ ವಾರ್ನರ್; ನಟನೆ ನೋಡಿ ಫ್ರಸ್ಟ್ರೇಟ್ ಆದ ನಿರ್ದೇಶಕ

ವಾರ್ನರ್​ಗೆ ನಿರ್ದೇಶನ ಮಾಡಿ ರಾಜಮೌಳಿ ಸುಸ್ತ್ ಆಗುತ್ತಾರೆ. ಕುದುರೆ ಬದಲು ಕಾಂಗರೂ ಕೇಳುತ್ತಾರೆ ವಾರ್ನರ್. ಕೊನೆಗೆ ಕ್ರೆಡ್​ ಯುಪಿಐಗೆ ತಾವು ಅಪ್​ಗ್ರೇಡ್​ಗೆ ಮಾಡಿಕೊಳ್ಳುತ್ತೇನೆ ಎನ್ನುತ್ತಾರೆ ಅವರು. ಈ ವಿಡಿಯೋ ಸಖತ್ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ಬೇರೆ ಬೇರೆ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಈ ಜಾಹೀರಾತು ಸಖತ್ ಇಷ್ಟ ಆಗಿದೆ.

ರಾಜಮೌಳಿ ಸಿನಿಮಾದಲ್ಲಿ ಡೇವಿಡ್ ವಾರ್ನರ್; ನಟನೆ ನೋಡಿ ಫ್ರಸ್ಟ್ರೇಟ್ ಆದ ನಿರ್ದೇಶಕ
ರಾಜಮೌಳಿ-ವಾರ್ನರ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Apr 13, 2024 | 11:18 AM

ಡೇವಿಡ್ ವಾರ್ನರ್ (David Warner) ಅವರಿಗೆ ಭಾರತದ ಜೊತೆ ಒಳ್ಳೆಯ ನಂಟಿದೆ. ಅವರು ಪ್ರತಿ ಬಾರಿ ಐಪಿಎಲ್​ಗೆ ಬಂದಾಗ ಮೈದಾನದಲ್ಲಿ ತೆಲುಗು ಹಾಡುಗಳಿಗೆ ಡ್ಯಾನ್ಸ್ ಮಾಡುತ್ತಾರೆ. ಇಷ್ಟಕ್ಕ ನಿಂತಿಲ್ಲ, ಅವರು ತೆಲುಗು ಹಾಡುಗಳಿಗೆ ರೀಲ್ಸ್ ಮಾಡುತ್ತಾರೆ. ಅವರು ಮಾಡೋ ಪುಷ್ಪರಾಜ್ ಸ್ಟೈಲ್ ಸಖತ್ ಫೇಮಸ್. ಈಗ ರಾಜಮೌಳಿ ಸಿನಿಮಾದಲ್ಲಿ ಡೇವಿಡ್ ವಾರ್ನರ್ ನಟಿಸುತ್ತಿದ್ದಾರೆ. ಅವರ ನಟನೆ ನೋಡಿ ರಾಜಮೌಳಿ ಫ್ರಸ್ಟ್ರೇಟ್ ಆಗಿದ್ದಾರೆ. ಅಸಲಿಗೆ ಏನಿದು ವಿಚಾರ? ಆ ಬಗ್ಗೆ ಇಲ್ಲಿದೆ ವಿವರ.

ಐಪಿಎಲ್ ಸಂದರ್ಭದಲ್ಲಿ ಕ್ರೆಡ್ ಸಂಸ್ಥೆಯವರು ವಿವಿಧ ರೀತಿಯ ಜಾಹೀರಾತು ಮಾಡುತ್ತಾರೆ. ಈ ಬಾರಿ ಕ್ರೆಡ್ ಯುಪಿಐನ ಜಾಹೀರಾತು ಮಾಡಲಾಗುತ್ತಿದೆ. ಕ್ರೆಡ್ ಯುಪಿಐ ಮಾಡಿದರೆ ಸಾಕಷ್ಟು ಆಫರ್ ಸಿಗುತ್ತದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಇದೇ ಆ್ಯಂಗಲ್​ನಿಂದ ಜಾಹೀರಾತುಗಳನ್ನು ಮಾಡಲಾಗುತ್ತಿದೆ. ಈಗ ರಾಜಮೌಳಿ ಹಾಗೂ ವಾರ್ನರ್ ಕಾಣಿಸಿಕೊಂಡಿದ್ದು ಇದೇ ಜಾಹೀರಾತಿನಲ್ಲಿ.

ರಾಜಮೌಳಿ ಅವರು ಡೇವಿಡ್ ವಾರ್ನರ್​ಗೆ ಕರೆ ಮಾಡುತ್ತಾರೆ. ‘ನಿಮ್ಮ ಮ್ಯಾಚ್​ ಟಿಕೆಟ್ ಮೇಲೆ ಡಿಸ್ಕೌಂಟ್ ಸಿಗುತ್ತದೆಯೇ’ ಎಂದು ಕೇಳುತ್ತಾರೆ ರಾಜಮೌಳಿ. ‘ಕ್ರೆಡ್ ಯುಪಿಐ ಇದ್ದರೆ ಡಿಸ್ಕೌಂಟ್ ಸಿಗುತ್ತದೆ. ಸಾಮಾನ್ಯ ಯಪಿಐನಲ್ಲಿ ಆಫರ್ ಬೇಕು ಎಂದರೆ ನೀವು ನನಗೆ ಒಂದು ಫೇವರ್ ಮಾಡಬೇಕು’ ಎನ್ನುತ್ತಾರೆ ವಾರ್ನರ್. ಆ ಫೇವರ್​ ಎಂದರೆ ವಾರ್ನರ್​ನ ಹೀರೋ ಆಗಿ ಇಟ್ಟುಕೊಂಡು ಸಿನಿಮಾ ಮಾಡೋದು.

ವಾರ್ನರ್​ಗೆ ನಿರ್ದೇಶನ ಮಾಡಿ ರಾಜಮೌಳಿ ಸುಸ್ತ್ ಆಗುತ್ತಾರೆ. ಕುದುರೆ ಬದಲು ಕಾಂಗರೂ ಕೇಳುತ್ತಾರೆ ವಾರ್ನರ್. ಕೊನೆಗೆ ಕ್ರೆಡ್​ ಯುಪಿಐಗೆ ತಾವು ಅಪ್​ಗ್ರೇಡ್​ಗೆ ಮಾಡಿಕೊಳ್ಳುತ್ತೇನೆ ಎನ್ನುತ್ತಾರೆ ಅವರು. ಈ ವಿಡಿಯೋ ಸಖತ್ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ಬೇರೆ ಬೇರೆ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಈ ಜಾಹೀರಾತು ಸಖತ್ ಇಷ್ಟ ಆಗಿದೆ.

View this post on Instagram

A post shared by CRED (@cred_club)

ರಾಜಮೌಳಿ ಅವರು ಇತ್ತೀಚೆಗೆ ಜಾಹೀರಾತಿನಲ್ಲಿ ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಒನ್​ಪ್ಲಸ್ ಮೊಬೈಲ್ ಅಡ್ವಟೈಸ್​ಮೆಂಟ್​ನಲ್ಲಿ ಅವರು ನಟಿಸಿದ್ದರು. ಈಗ ಕ್ರೆಡ್ ಜಾಹೀರಾತಿನ ಮೂಲಕ ಅವರು ಗಮನ ಸೆಳೆದಿದ್ದಾರೆ. ಅವರ ನಟನೆಗೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ರಾಜಮೌಳಿ ಸೂಪರ್​ ಡ್ಯಾನ್ಸರ್​ ಎಂಬುದು ನಿಮಗೆ ಗೊತ್ತಾ? ಪತ್ನಿ ಜೊತೆಗಿನ ಡ್ಯಾನ್ಸ್ ವಿಡಿಯೋ ವೈರಲ್​

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಈ ಸಿನಿಮಾ ರಿಲೀಸ್ ಆಗಿ ಎರಡು ವರ್ಷ ಕಳೆದಿದೆ. ಸದ್ಯ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಮಹೇಶ್ ಬಾಬು ಹೀರೋ. ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈ ವರ್ಷವೇ ಸಿನಿಮಾ ಸೆಟ್ಟೇರಲಿದ್ದು, ಮುಂದಿನ ವರ್ಷ ಸಿನಿಮಾ ರಿಲೀಸ್ ಆಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?