AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ಮಂಗಳೂರಿನಲ್ಲಿ ಪತ್ತೆಯಾಯ್ತು ದೀಪಿಕಾ ದಾಸ್ ಬೆಕ್ಕು, ಅಪಹರಣ ಎಂದ ನಟಿ

ಕೆಲ ದಿನಗಳ ಹಿಂದೆ ಬೆಂಗಳೂರಿನ ವಿಶ್ವೇಶ್ವರ ಬಡಾವಣೆಯಿಂದ ಕಾಣೆಯಾಗಿದ್ದ ನಟಿ ದೀಪಿಕಾ ದಾಸ್​ರ ಪ್ರೀತಿಯ ಕಪ್ಪು ಬೆಕ್ಕು ಮಂಗಳೂರಿನಲ್ಲಿ ಪತ್ತೆಯಾಗಿದೆ.

Deepika Das: ಮಂಗಳೂರಿನಲ್ಲಿ ಪತ್ತೆಯಾಯ್ತು ದೀಪಿಕಾ ದಾಸ್ ಬೆಕ್ಕು, ಅಪಹರಣ ಎಂದ ನಟಿ
ದೀಪಿಕಾ ದಾಸ್
ಮಂಜುನಾಥ ಸಿ.
|

Updated on:Feb 24, 2023 | 12:16 PM

Share

ನಟಿ ದೀಪಿಕಾ ದಾಸ್​ರ (Deepika Das) ಪ್ರೀತಿಯ ಬೆಕ್ಕು (Cat) ಕೆಲ ದಿನಗಳ ಹಿಂದೆ ಕಾಣೆಯಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್ ಹಾಕಿದ್ದ ದೀಪಿಕಾ ದಾಸ್ ತಮ್ಮ ಪ್ರೀತಿಯ ಬೆಕ್ಕು ಶ್ಯಾಡೊ ಕಾಣೆಯಾಗಿದ್ದು, ಹುಡುಕಿಕೊಟ್ಟವರಿಗೆ ನಗದು ಬಹುಮಾನ ಕೊಡುವುದಾಗಿಯೂ ಘೋಷಿಸಿದ್ದರು. ಇದೀಗ ದೀಪಿಕಾರ ಬೆಕ್ಕು ಸಿಕ್ಕಿದೆ.

ತಮ್ಮ ಪ್ರೀತಿಯ ಬೆಕ್ಕು ಸಿಕ್ಕಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ದೀಪಿಕಾ ದಾಸ್, ಬೆಂಗಳೂರಿನಲ್ಲಿ ಕಳೆದು ಹೋದ ಬೆಕ್ಕು ಮಂಗಳೂರಿನಲ್ಲಿ ಪತ್ತೆಯಾಗಿದೆ ಎಂದಿದ್ದಾರೆ. ಅಲ್ಲದೆ, ತಮ್ಮ ಬೆಕ್ಕು ಅಪಹರಣಕ್ಕೆ ಒಳಗಾಗಿತ್ತೆಂದು ಸಹ ಹೇಳಿದ್ದಾರೆ.

‘ಒಳ್ಳೆಯ ಸುದ್ದಿ, ನಮಗೆ ಶ್ಯಾಡೊ (ಬೆಕ್ಕು) ಸಿಕ್ಕಿತು. ಬೆಕ್ಕನ್ನು ಅಪಹರಣ ಮಾಡಿ ಮಂಗಳೂರಿಗೆ ಕಳಿಸಲಾಗಿತ್ತು. ಕೊನೆಗೂ ನಮ್ಮ ಬೆಕ್ಕು ಸಿಕ್ಕಿತು. ಬೆಕ್ಕನ್ನು ಪತ್ತೆ ಹಚ್ಚುವಲ್ಲಿ ನೆರವಾದ ಎಲ್ಲರಿಗೂ ನನ್ನ ಧನ್ಯವಾದಗಳು. ಬೆಕ್ಕು ನಮ್ಮ ಕೈ ಸೇರಿದ ಬಳಿಕ ಸಂಪೂರ್ಣ ವಿವರವನ್ನು ಹಂಚಿಕೊಳ್ಳುತ್ತೇನೆ’ ಎಂದಿದ್ದಾರೆ ದೀಪಿಕಾ ದಾಸ್.

ದೀಪಿಕಾ ದಾಸ್​ರ ಬೆಕ್ಕು ಏಳು ದಿನಗಳ ಹಿಂದೆ ಬೆಂಗಳೂರಿನ ವಿಶ್ವೇಶ್ವರ ಬಡಾವಣೆಯಿಂದ ನಾಪತ್ತೆಯಾಗಿತ್ತು. ಪರ್ಷಿಯನ್ ಬ್ರೀಡ್​ನ ಕಪ್ಪು ಬಣ್ಣದ ಬೆಕ್ಕನ್ನು ಹುಡುಕಿಕೊಟ್ಟವರಿಗೆ 10 ರಿಂದ 15 ಸಾವಿರ ಬಹುಮಾನ ನೀಡಲಾಗುವುದು ಎಂದು ದೀಪಿಕಾ ದಾಸ್ ಜಾಹೀರಾತು ನೀಡಿದ್ದರು. ದೀಪಿಕಾರ ಜಾಹೀರಾತಿಗೆ ನೆಟ್ಟಿಗರು ತರಹೇವಾರಿಯಾಗಿ ಪ್ರತಿಕ್ರಿಯಿಸಿದ್ದರು.

ದೀಪಿಕಾ ದಾಸ್ ಮಸ್ತ್ ಆಫರ್; ಕಳೆದ ಬೆಕ್ಕು ಹುಡುಕಿಕೊಟ್ರೆ 10-15 ಸಾವಿರ ರೂ. ಬಹುಮಾನ

ದೀಪಿಕಾರ ಕಾಣೆಯಾದ ಬೆಕ್ಕಿನ ಕುರಿತು ಕಾಳಜಿ ವ್ಯಕ್ತಪಡಿಸಿದ್ದ ನಟಿ ಸಂಜನಾ ಗಲ್ರಾನಿ, ಸಂಪೂರ್ಣ ಕಪ್ಪು ಬಣ್ಣದ ಬೆಕ್ಕುಗಳನ್ನು ವಾಮಾಚಾರಕ್ಕೆ ಬಳಸಿ ಬಲಿ ಕೊಡುವ ಆತಂಕವೂ ಇದೆ. ನನ್ನ ಕಸಿನ್ ಬಳಿ ಇದ್ದ ಕಪ್ಪು ಬಣ್ಣದ ಬೆಕ್ಕನ್ನು ಕದ್ದು ಬಲಿ ಕೊಡಲಾಗಿತ್ತು ಎಂದಿದ್ದರು.

ಹೇಗೋ ದೀಪಿಕಾ ದಾಸ್​ರ ಬೆಕ್ಕು ಪತ್ತೆಯಾಗಿದೆ. ಆದರೆ ಅದನ್ನು ಅಪಹರಣ ಮಾಡಿದ್ದು ಯಾರು, ಬೆಂಗಳೂರಿನಿಂದ ಅದು ಮಂಗಳೂರಿಗೆ ಹೋಗಿದ್ದು ಹೇಗೆ? ಅಪಹರಣ ಮಾಡಿದ್ದು ಏಕೆ? ಇಂಬಿತ್ಯಾದಿ ಪ್ರಶ್ನೆಗಳಿಗೆ ದೀಪಿಕಾ ದಾಸ್ ಅವರೇ ಉತ್ತರ ನೀಡಲಿದ್ದಾರೆ.

Published On - 12:11 pm, Fri, 24 February 23

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!