AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ ನನಗೆ ಪ್ರಪೋಸ್ ಮಾಡಿದ್ರು ಎಂದು ಹೇಳಿ ಈಗ ಉಲ್ಟಾ ಹೊಡೆದ ನಟ

ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ತಮಗೆ ಪ್ರೇಮ ಪ್ರಸ್ತಾಪ ಮಾಡಿದ್ದರು ಎಂದು ನೀಡಿದ್ದ ಹಳೆಯ ಹೇಳಿಕೆ ವೈರಲ್ ಆದ ಬೆನ್ನಲ್ಲೇ ನಟ ಮುಜಮ್ಮಿಲ್ ಇಬ್ರಾಹಿಂ ಮೌನ ಮುರಿದಿದ್ದಾರೆ. ತಮ್ಮ ಹಳೆಯ ಸಂದರ್ಶನದ ವೀಡಿಯೊ ತುಣುಕುಗಳನ್ನು ಸಂದರ್ಭಕ್ಕೆ ಹೊರತಾಗಿ ತಪ್ಪಾಗಿ ಬಿಂಬಿಸಿ ಹರಿಬಿಡಲಾಗಿದೆ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಸ್ಪಷ್ಟನೆ ನೀಡಿರುವ ನಟ, ದೀಪಿಕಾ ಮೇಲಿರುವ ಗೌರವವನ್ನು ಪುನರುಚ್ಚರಿಸಿದ್ದಾರೆ.

ದೀಪಿಕಾ ನನಗೆ ಪ್ರಪೋಸ್ ಮಾಡಿದ್ರು ಎಂದು ಹೇಳಿ ಈಗ ಉಲ್ಟಾ ಹೊಡೆದ ನಟ
ಮುಜಾಮಿಲ್-ದೀಪಿಕಾ
ರಾಜೇಶ್ ದುಗ್ಗುಮನೆ
|

Updated on: Jul 14, 2026 | 10:36 AM

Share

ಮುಖ್ಯಾಂಶಗಳು

  • ದೀಪಿಕಾ ಪಡುಕೋಣೆ ಪ್ರಪೋಸ್ ಮಾಡಿದ್ದರು ಎಂದಿದ್ದ ನಟ
  • ಸಾಮಾಜಿಕ ಜಾಲತಾಣಗಳಲ್ಲಿ ಹಳೇ ವಿಡಿಯೋ ಭಾರಿ ವೈರಲ್
  • ನೆಟ್ಟಿಗರ ಆಕ್ರೋಶಕ್ಕೆ ಇನ್‌ಸ್ಟಾಗ್ರಾಮ್‌ನಲ್ಲಿ ಮುಜಮ್ಮಿಲ್ ಇಬ್ರಾಹಿಂ ಸ್ಪಷ್ಟನೆ

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ರಿಲೇಶನ್​​ಶಿಪ್​ ವಿಷಯಕ್ಕೆ ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ. ಅವರು ರಣವೀರ್​ ಸಿಂಗ್ ಪ್ರೀತಿಸುವುದಕ್ಕೂ ಮೊದಲು ಕೆಲವರ ಜೊತೆ ಡೇಟ್ ಮಾಡಿದ್ದರು ಎಂಬ ಆರೋಪ ಇದೆ. ಇದಕ್ಕೆ ಪೂರಕವಾಗಿ ನಟ ಮುಜಮ್ಮಿಲ್ ಇಬ್ರಾಹಿಂ ಹೇಳಿಕೆ ನೀಡಿದ್ದರು. ವರ್ಷದ ಬಳಿಕ ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ.

2025ರಲ್ಲಿ ಸಿದ್ಧಾರ್ಥ್ ಕಣ್ಣನ್ ಜೊತೆ ಅವರು ನಡೆಸಿದ್ದ ಸಂದರ್ಶನದ ತುಣುಕುಗಳು ಇತ್ತೀಚೆಗೆ ಇಂಟರ್ನೆಟ್‌ನಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ತೀವ್ರ ಟೀಕೆಗೆ ಒಳಗಾಗಿದ್ದವು. ಆ ಸಂದರ್ಶನದಲ್ಲಿ ಮುಜಮ್ಮಿಲ್ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದರು. ದೀಪಿಕಾ ಪಡುಕೋಣೆ ತಮ್ಮ ವೃತ್ತಿಜೀವನದ ಆರಂಭದ ದಿನಗಳಲ್ಲಿ ತಮಗೆ ಪ್ರಪೋಸ್ ಮಾಡಿದ್ದರು ಎಂದು ಅವರು ಹೇಳಿಕೊಂಡಿದ್ದರು. ಆದರೆ ಆ ಸಮಯದಲ್ಲಿ ದೀಪಿಕಾ ಕೇವಲ ಮಾಡೆಲ್ ಆಗಿದ್ದರು ಮತ್ತು ತಾವು ಉದಯೋನ್ಮುಖ ತಾರೆಯಾಗಿದ್ದರಿಂದ ಆ ಪ್ರಸ್ತಾಪವನ್ನು ತಿರಸ್ಕರಿಸಿದ್ದಾಗಿ ಅವರು ತಿಳಿಸಿದ್ದರು. ದೀಪಿಕಾ ಸದ್ಯ ಬಾಲಿವುಡ್‌ನ ಅತಿ ದೊಡ್ಡ ತಾರೆಯಾಗಿ ಬೆಳೆದಿರುವ ಹಿನ್ನೆಲೆಯಲ್ಲಿ, ಮುಜಮ್ಮಿಲ್ ಅವರ ಈ ಹಳೇ ಹೇಳಿಕೆಯನ್ನು ನೆಟ್ಟಿಗರು ತೀವ್ರವಾಗಿ ಖಂಡಿಸಿದ್ದರು.

ತಮ್ಮ ವಿರುದ್ಧ ಕೇಳಿಬರುತ್ತಿರುವ ಭಾರಿ ಟೀಕೆಗಳ ನಡುವೆ ಮುಜಮ್ಮಿಲ್ ಇಬ್ರಾಹಿಂ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಸ್ಪಷ್ಟನೆ ಹಂಚಿಕೊಂಡಿದ್ದಾರೆ. ವೈರಲ್ ಆಗಿರುವ ವೀಡಿಯೊ ತುಣುಕುಗಳು ತಮ್ಮ ಸಂಪೂರ್ಣ ಸಂಭಾಷಣೆಯನ್ನು ಹಾಕಿಲ್ಲ ಮತ್ತು ತಮ್ಮ ಹೇಳಿಕೆಯನ್ನು ಸಂದರ್ಭಕ್ಕೆ ಹೊರತಾಗಿ ತಪ್ಪಾಗಿ ಬಿಂಬಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬರೆದುಕೊಂಡಿರುವ ಮುಜಮ್ಮಿಲ್, ‘ಇದು ಹಳೆಯ ಸಂದರ್ಶನ. ಈಗ ಪ್ರಸಾರವಾಗುತ್ತಿರುವ ವೀಡಿಯೊಗಳು ಕೇವಲ ಸುದೀರ್ಘ ಸಂಭಾಷಣೆಯ ಕೆಲವು ಸಣ್ಣ ತುಣುಕುಗಳಷ್ಟೇ. ಆ ಸಂದರ್ಶನದಲ್ಲಿ ನಾನು ಮಾತನಾಡಿದ ಸಂದರ್ಭ, ನನ್ನಲ್ಲಿದ್ದ ಹಿಂಜರಿಕೆ ಮತ್ತು ವ್ಯಕ್ತಪಡಿಸಿದ ಗೌರವದ ಭಾವನೆಗಳು ಎಡಿಟಿಂಗ್ ಪ್ರಕ್ರಿಯೆಯಲ್ಲಿ ಕಳೆದುಹೋಗಿವೆ’ ಎಂದು ಸ್ಪಷ್ಟಪಡಿಸಿದ್ದಾರೆ.

‘ನನ್ನ ಹಳೆಯ ದಿನಗಳಲ್ಲಿ ನನ್ನ ಜೊತೆ ಇದ್ದ ವ್ಯಕ್ತಿಗಳ ಬಗ್ಗೆ ಯಾವಾಗಲೂ ಗೌರವದಿಂದ ಮಾತನಾಡಲು ಪ್ರಯತ್ನಿಸಿದ್ದೇನೆ ಮತ್ತು ಅದು ಈಗಲೂ ಬದಲಾಗಿಲ್ಲ. ಇತರರಂತೆ ನಾನು ಕೂಡ ವರ್ಷಗಳಿಂದ ನನ್ನ ಕೆಲಸ ಮತ್ತು ನನ್ನ ಜೀವನವನ್ನು ಕಟ್ಟಿಕೊಳ್ಳುವಲ್ಲಿ ಗಮನ ಹರಿಸುತ್ತಿದ್ದೇನೆ’ ಎಂದಿದ್ದಾರೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ಯಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಆಲಿಯಾ?

ನಟಿ ದೀಪಿಕಾ ಪಡುಕೋಣೆ ಅವರು ಹಲವು ವರ್ಷಗಳ ಕಾಲ ಪ್ರೀತಿಸಿ 2018 ರ ನವೆಂಬರ್‌ನಲ್ಲಿ ನಟ ರಣವೀರ್ ಸಿಂಗ್ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ದುವಾ ಎಂಬ ಮಗಳಿದ್ದು, ಪ್ರಸ್ತುತ ಅವರು ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ