‘ಅಂದುಕೊಳ್ಳೋದು ಒಂದು, ಆಗೋದೇ ಇನ್ನೊಂದು’; ದೀಪಿಕಾ ಪಡುಕೋಣೆ ಹೊಸ ಪೋಸ್ಟ್​ ನೋಡಿ

ದೀಪಿಕಾ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಯೋಗಾಸನ ಮಾಡುತ್ತಿದ್ದಾರೆ. ಅದೇ ಪೋಸ್ಟ್​ನಲ್ಲಿ ಮತ್ತೊಂದು ಫೋಟೋ ಹಾಕಿದ್ದು, ಅದರಲ್ಲಿ ದೀಪಿಕಾ ನಿದ್ರಿಸುತ್ತಿದ್ದಾರೆ.

‘ಅಂದುಕೊಳ್ಳೋದು ಒಂದು, ಆಗೋದೇ ಇನ್ನೊಂದು’; ದೀಪಿಕಾ ಪಡುಕೋಣೆ ಹೊಸ ಪೋಸ್ಟ್​ ನೋಡಿ
ದೀಪಿಕಾ ಪಡುಕೋಣೆ
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 28, 2021 | 8:34 PM

ನಟಿ ದೀಪಿಕಾ ಪಡುಕೋಣೆ ಫಿಟ್​ನೆಸ್​ಗೆ ಹೆಚ್ಚು ಒತ್ತುಕೊಡುತ್ತಾರೆ. ಸದಾ ಜಿಮ್​ನಲ್ಲಿ ಕಳೆಯುವ ಅವರು, ದೇಹವನ್ನು ಫಿಟ್​ ಆಗಿ ಇಟ್ಟುಕೊಂಡಿದ್ದಾರೆ. ಆದರೆ, ಲಾಕ್​ಡೌನ್​ನಿಂದ ಅವರ ಲೈಫ್​ಸ್ಟೈಲ್​ ಕೊಂಚ ಬದಲಾದಂತಿದೆ. ಅವರು ಅಂದುಕೊಳ್ಳೋದು ಒಂದಾದರೆ, ಆಗೋದು ಮಾತ್ರ ಇನ್ನೊಂದು.

ದೀಪಿಕಾ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಯೋಗಾಸನ ಮಾಡುತ್ತಿದ್ದಾರೆ. ಅದೇ ಪೋಸ್ಟ್​ನಲ್ಲಿ ಮತ್ತೊಂದು ಫೋಟೋ ಹಾಕಿದ್ದು, ಅದರಲ್ಲಿ ದೀಪಿಕಾ ನಿದ್ರಿಸುತ್ತಿದ್ದಾರೆ. ಇದಕ್ಕೆ ಅವರು ನಿರೀಕ್ಷೆ vs ರಿಯಾಲಿಟಿ ಎಂದು ಕ್ಯಾಪ್ಶನ್​ ನೀಡಿದ್ದಾರೆ.

ಸದ್ಯ, ಪೋಸ್ಟ್​ಗೆ ಸಾಕಷ್ಟು ಜನರು ಕಮೆಂಟ್​ ಮಾಡಿದ್ದಾರೆ. ಕೆಲವರು ‘ಈ ಫೋಟೋ ನನ್ನ ದಿನವನ್ನು ಖುಷಿಯಾಗಿಸಿತು’ ಎಂದು ಹೇಳಿದ್ದಾರೆ. ಇನ್ನೂ ಕೆಲವರು, ನಾನು ಯೋಗ ಮಾಡಬೇಕು ಎಂದುಕೊಂಡಿದ್ದೇನೆ. ನಿಮ್ಮನ್ನು ನಾನು ಮಾದರಿಯಾಗಿಟ್ಟುಕೊಳ್ಳುತ್ತೇನೆ ಎಂದಿದ್ದಾರೆ. ಹಲವರು ನಗುವ ಸ್ಮೈಲಿ ಹಾಕಿದ್ದಾರೆ. ಒಟ್ಟಿನಲ್ಲಿ ಈ ಫೋಟೋ ನೋಡಿದ ಅನೇಕರು ಖುಷಿ ಆಗಿದ್ದಂತೂ ಸತ್ಯ.

ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​ ಏಪ್ರಿಲ್​ನಲ್ಲಿ ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದರು. ಅವರು ಮುಂಬೈ ಬಿಟ್ಟು ಬೆಂಗಳೂರಿಗೆ ಬಂದಿದ್ದಾರೆ ಎನ್ನಲಾಗಿತ್ತು. ಕೊರೊನಾದಿಂದಾಗಿ ಮುಂಬೈನಲ್ಲಿ ಆಗಿರುವ ಜನತಾ ಕರ್ಫ್ಯೂನಿಂದ ತಪ್ಪಿಸಿಕೊಳ್ಳಲು ಅವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಸದ್ಯ, ದೀಪಿಕಾ ಕೈನಲ್ಲಿ ಸಾಲು ಸಾಲು ಚಿತ್ರಗಳಿವೆ. ಶಾರುಖ್​ ಖಾನ್​ ನಟನೆಯ ಪಠಾಣ್​ ಚಿತ್ರದಲ್ಲಿ ದೀಪಿಕಾ ನಟಿಸುತ್ತಿದ್ದಾರೆ. ನಟ ಪ್ರಭಾಸ್​ ಹಾಗೂ ನಿರ್ದೇಶಕ ನಾಗ್ ಅಶ್ವಿನ್ ಜೊತೆಯಾಗಿ ಮಾಡುತ್ತಿರುವ​ ಸಿನಿಮಾಗೆ ದೀಪಿಕಾ ನಾಯಕಿ. ಹೃತಿಕ್​ ನಟನೆಯ ಫೈಟರ್​ ಚಿತ್ರದಲ್ಲಿ ದೀಪಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ರಿಲೀಸ್​ಗೆ ರೆಡಿ ಇರುವ ‘83’ ಚಿತ್ರದಲ್ಲಿ ದೀಪಿಕಾ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ: ನಟ ರಣವೀರ್ ಸಿಂಗ್​ಗೆ​ ಪತ್ನಿ ದೀಪಿಕಾ ಪಡುಕೋಣೆಯಿಂದಲೇ ಬಹಿರಂಗ ಬೆದರಿಕೆ!

ದೀಪಿಕಾ ಪಡುಕೋಣೆ, ರಣಬೀರ್​ ಕಪೂರ್​ಗೆ ಸಿಕ್ಕ ಮೊದಲ ಸಂಬಳ ಎಷ್ಟು?​ ಖರೀದಿಸಿದ್ದು ಏನು?

Published On - 8:33 pm, Mon, 28 June 21

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ