AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ ಪಡುಕೋಣೆ ತಂದೆ ಪ್ರಕಾಶ್​ ಪಡುಕೋಣೆಗೆ ಕೊರೊನಾ​; ಸ್ನೇಹಿತರಿಂದ ಮಾಹಿತಿ ಬಹಿರಂಗ

Deepika Padukone | Prakash Padukone: ಪ್ರಕಾಶ್​ ಪಡುಕೋಣೆ ಅವರಿಗೆ ಈಗ 65ರ ಪ್ರಾಯ. ಹಾಗಾಗಿ ಅವರ ಅಭಿಮಾನಿಗಳಿಗೆ ಕೊಂಚ ಆತಂಕ ಆಗುವುದು ಸಹಜ. ಆದರೆ ಚಿಂತೆಗೊಳಪಡುವ ಅವಶ್ಯಕತೆ ಇಲ್ಲ ಎಂದು ಅವರ ಸ್ನೇಹಿತ ವಿಮಲ್​ ಕುಮಾರ್​ ತಿಳಿಸಿದ್ದಾರೆ.

ದೀಪಿಕಾ ಪಡುಕೋಣೆ ತಂದೆ ಪ್ರಕಾಶ್​ ಪಡುಕೋಣೆಗೆ ಕೊರೊನಾ​; ಸ್ನೇಹಿತರಿಂದ ಮಾಹಿತಿ ಬಹಿರಂಗ
ತಂದೆ ಪ್ರಕಾಶ್​ ಪಡುಕೋಣೆ ಮತ್ತು ಕುಟುಂಬದವರ ಜೊತೆ ದೀಪಿಕಾ
ಮದನ್​ ಕುಮಾರ್​
|

Updated on: May 04, 2021 | 4:27 PM

Share

ಜನಸಾಮಾನ್ಯರಿಗೆ ಮಾತ್ರವಲ್ಲದೆ ಸೆಲೆಬ್ರಿಟಿಗಳ ವಲಯದಲ್ಲೂ ಕೊರೊನಾ ಭೀತಿ ಹೆಚ್ಚಿದೆ. ಈಗ ನಟಿ ದೀಪಿಕಾ ಪಡುಕೋಣೆ ಅವರ ತಂದೆ, ಖ್ಯಾತ ಬ್ಯಾಡ್ಮಿಂಟನ್​ ಆಟಗಾರ ಪ್ರಕಾಶ್​ ಪಡುಕೋಣೆ ಅವರಿಗೆ ಕೊವಿಡ್​ 19 ಪಾಸಿಟಿವ್​ ಆಗಿದೆ. ಈ ಕುರಿತು ಅವರ ಆಪ್ತ ಸ್ನೇಹಿತರು ಮಾಹಿತಿ ನೀಡಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಪ್ರಕಾಶ್​ ಪಡುಕೋಣೆ ಅವರು ಕೊವಿಡ್​ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ಈಗ ತಿಳಿದುಬಂದಿದೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಪ್ರಕಾಶ್​ ಪಡುಕೋಣೆ ಅವರಿಗೆ ಈಗ 65ರ ಪ್ರಾಯ. ಹಾಗಾಗಿ ಅವರ ಅಭಿಮಾನಿಗಳಿಗೆ ಕೊಂಚ ಆತಂಕ ಆಗುವುದು ಸಹಜ. ಆದರೆ ಚಿಂತೆಗೊಳಪಡುವ ಅವಶ್ಯಕತೆ ಇಲ್ಲ ಎಂದು ಅವರ ಸ್ನೇಹಿತ ವಿಮಲ್​ ಕುಮಾರ್​ ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಪ್ರಕಾಶ್​ ಪಡುಕೋಣೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಒಂದು ವಾರವಾದರೂ ಜ್ವರ ಕಡಿಮೆ ಆಗದ ಕಾರಣ ಅವರು ಐಸೊಲೇಟ್​ ಆದರು. ನಂತರ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಅವರು ದಾಖಲಾದರು ಎಂದು ವಿಮಲ್​ ಹೇಳಿದ್ದಾರೆ.

ಮುಂಬೈನಲ್ಲಿ ಕೊರೊನಾ ವೈರಸ್​ ಹಾವಳಿ ಹೆಚ್ಚುತ್ತಿದ್ದಂತೆಯೇ ದೀಪಿಕಾ ಪಡುಕೋಣೆ ಮತ್ತು ಅವರ ಪತಿ ರಣವೀರ್​ ಸಿಂಗ್​ ಅವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಅದಾಗಿ ಕೆಲವೇ ದಿನಗಳಲ್ಲಿ ಬೆಂಗಳೂರಿನಲ್ಲೂ ಪರಿಸ್ಥಿತಿ ಹದಗೆಟ್ಟಿತು. ಈಗ ಪ್ರಕಾಶ್​ ಪಡುಕೋಣೆಗೆ ಕೊವಿಡ್​ ಪಾಸಿಟಿವ್​ ಆಗಿದೆ. ಈ ಬಗ್ಗೆ ದೀಪಿಕಾ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪ್ರಕಾಶ್​ ಪಡುಕೋಣೆ ಅವರ ಪತ್ನಿ ಉಜ್ಜಲ ಹಾಗೂ ಎರಡನೇ ಮಗಳಿಗೂ ಕೊರೊನಾ ಲಕ್ಷಣಗಳು ಕಾಣಿಸಿಕೊಂಡವು. ಅವರಿಗೂ ಪಾಸಿಟಿವ್​ ವರದಿ ಬಂದಿದೆ. ಆದರೆ ಮನೆಯಲ್ಲೇ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಕಾಶ್​ ಪಡುಕೋಣೆ ಈ ವಾರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ ಎಂದು ವಿಮಲ್​ ಕುಮಾರ್​ ಹೇಳಿದ್ದಾರೆ.

ಅನೇಕ ಸೆಲೆಬ್ರಿಟಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಅಲ್ಲು ಅರ್ಜುನ್​, ಪೂಜಾ ಹೆಗ್ಡೆ ಮುಂತಾದವರಿಗೆ ಇತ್ತೀಚೆಗೆ ಕೊವಿಡ್​ ಪಾಸಿಟಿವ್​ ಆಗಿತ್ತು. ತಾವು ಚೇತರಿಸಿಕೊಳ್ಳುತ್ತಿರುವುದಾಗಿ ಅಲ್ಲು ಅರ್ಜುನ್​ ಮಾಹಿತಿ ಹಂಚಿಕೊಂಡಿದ್ದಾರೆ. ಜನಸಾಮಾನ್ಯರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದ ಕಾರಣ ಬೆಂಗಳೂರಿನ ಹಲವು ಆಸ್ಪತ್ರೆಗಳಲ್ಲಿ ನರಕ ಸದೃಶ್ಯ ವಾತಾವರಣ ನಿರ್ಮಾಣ ಆಗಿದೆ.

ಇದನ್ನೂ ಓದಿ:

ರಾತ್ರೋರಾತ್ರಿ ಮುಂಬೈ ಬಿಟ್ಟು ಬೆಂಗಳೂರಿಗೆ ಬಂದ ದೀಪಿಕಾ-ರಣವೀರ್​ ಸಿಂಗ್​! ಕೊರೊನಾ ಕಾರಣ

ನಟ ರಣವೀರ್ ಸಿಂಗ್​ಗೆ​ ಪತ್ನಿ ದೀಪಿಕಾ ಪಡುಕೋಣೆಯಿಂದಲೇ ಬಹಿರಂಗ ಬೆದರಿಕೆ!

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ