AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಬರ್ತ್​ಡೇಗೆ ಹೊಸ ಬ್ಯಾಡ್ಮಿಂಟನ್ ಸ್ಕೂಲ್ ಆರಂಭಿಸಿದ ನಟಿ ದೀಪಿಕಾ ಪಡುಕೋಣೆ

Deepika Padukone: ದೀಪಿಕಾ ಪಡುಕೋಣೆ ಅವರು ತಮ್ಮ ತಂದೆ ಪ್ರಕಾಶ್ ಪಡುಕೋಣೆ ಅವರ ಜನ್ಮದಿನದಂದು (ಜೂನ್ 10) ‘ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿ’ಯನ್ನು ಆರಂಭಿಸಿದ್ದಾರೆ. ಇದು ದೇಶಾದ್ಯಂತ 75 ಕೇಂದ್ರಗಳನ್ನು ಹೊಂದಿದೆ ಮತ್ತು ಮುಂಬರುವ ವರ್ಷಗಳಲ್ಲಿ ಇನ್ನೂ ಹೆಚ್ಚಿನ ಕೇಂದ್ರಗಳನ್ನು ತೆರೆಯುವ ಯೋಜನೆಯಿದೆ.

ತಂದೆ ಬರ್ತ್​ಡೇಗೆ ಹೊಸ ಬ್ಯಾಡ್ಮಿಂಟನ್ ಸ್ಕೂಲ್ ಆರಂಭಿಸಿದ ನಟಿ ದೀಪಿಕಾ ಪಡುಕೋಣೆ
ಪ್ರಕಾಶ್-ದೀಪಿಕಾ
ರಾಜೇಶ್ ದುಗ್ಗುಮನೆ
|

Updated on: Jun 10, 2025 | 2:49 PM

Share

ನಟಿ ದೀಪಿಕಾ ಪಡುಕೋಣೆ ಅವರು ನಟನೆಯ ಜೊತೆಗೆ ಬ್ಯಾಡ್ಮಿಂಟನ್ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದಾರೆ. ಇದಕ್ಕೆ ಕಾರಣ ಅವರ ತಂದೆ. ಪ್ರಕಾಶ್ ಪಡುಕೋಣೆ (Prakash Padukone) ಖ್ಯಾತ ಬ್ಯಾಡ್ಮಿಂಟನ್ ಆಟಗಾರ. ಇಂದು (ಜೂನ್ 10) ದೀಪಿಕಾ ತಂದೆ ಪ್ರಕಾಶ್ ಪಡುಕೋಣೆಗೆ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ದೀಪಿಕಾ ಪಡುಕೋಣೆ ಅವರು ಹೊಸ ಬ್ಯಾಡ್ಮಿಂಟನ್ ಸ್ಕೂಲ್​ನ ಲಾಂಚ್ ಮಾಡಿದ್ದಾರೆ. ಈ ಮೂಲಕ ತಂದೆಗೆ ವಿಶೇಷ ಗಿಫ್ಟ್ ಕೊಟ್ಟಿದ್ದಾರೆ.

ದೀಪಿಕಾ ಅವರು ‘ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್​’ ಹೊಸ ಕೇಂದ್ರವನ್ನು ಮಂಗಳವಾರ ಆರಂಭಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ‘ಬ್ಯಾಡ್ಮಿಂಟನ್ ಆಡುತ್ತಾ ಬೆಳೆದವಳು ನಾನು. ಈ ಕ್ರೀಡೆ ಒಬ್ಬರ ಜೀವನವನ್ನು ದೈಹಿಕವಾಗಿ, ಮಾನಸಿಕವಾಗಿ ಮತ್ತು ಭಾವನಾತ್ಮಕವಾಗಿ ಹೇಗೆ ರೂಪಿಸುತ್ತದೆ ಎಂಬುದು ನನಗೆ ಗೊತ್ತು. ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಮೂಲಕ ನಾವು ಬ್ಯಾಡ್ಮಿಂಟನ್ ಆಟದ ಸಂತೋಷ ಮತ್ತು ಶಿಸ್ತನ್ನು ಎಲ್ಲಾ ಜನರಿಗೆ ತಲುಪಿಸಲು ಬಯಸಿದ್ದೇವೆ’ ಎಂದಿದ್ದಾರೆ ಅವರು.

‘ಈ ಕ್ರೀಡೆಯ ಬಗ್ಗೆ ನಿಮ್ಮ ಉತ್ಸಾಹ ಎಷ್ಟು ಎಂಬುದು ನಿಮ್ಮನ್ನು ಚೆನ್ನಾಗಿ ಬಲ್ಲವರಿಗೆ ಗೊತ್ತು. 70 ವರ್ಷ ವಯಸ್ಸಿನಲ್ಲೂ ಬ್ಯಾಡ್ಮಿಂಟನ್​ನ ಉಸಿರಾಡುತ್ತಿದ್ದೀರಿ. ನಿಮ್ಮ ಉತ್ಸಾಹವನ್ನು ನನಸಾಗಿಸಲು ನಾವು ಬದ್ಧರಾಗಿದ್ದೇವೆ. ಎಲ್ಲರಿಗೂ ಬ್ಯಾಡ್ಮಿಂಟನ್’ ಎಂದು ಬರ್ತ್​ಡೇ ಪೋಸ್ಟ್​ನಲ್ಲಿ ದೀಪಿಕಾ ತಿಳಿಸಿದ್ದಾರೆ. ರಣವೀರ್ ಸಿಂಗ್ ಅವರು ಈ ಪೋಸ್ಟ್​ಗೆ ಹಾರ್ಟ್ ಎಮೋಜಿಯನ್ನು ಹಾಕಿದ್ದಾರೆ.

ಇದನ್ನೂ ಓದಿ
Image
ಒಂದೇ ವರ್ಷ, ಮೂರು ಖ್ಯಾತ ನಿರ್ದೇಶಕರು ಮತ್ತು ನಾಲ್ಕು ಡಿಸಾಸ್ಟರ್ ಸಿನಿಮಾ
Image
ಸಿನಿಮಾ ಇಲ್ಲದೆ ಕಷ್ಟದಲ್ಲಿರೋ ತ್ರಿವಿಕ್ರಂಗೆ ದೊಡ್ಡ ಸಲಹೆ ಕೊಟ್ಟ ಪವನ್
Image
ಹೊಸ ಅಧ್ಯಾಯ ಆರಂಭಿಸಿದ ಜೀ ಕನ್ನಡ; ವಿನೂತನ ಲೋಗೋ, ಹೊಸ ಅಧ್ಯಾಯ
Image
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್

‘ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್​’ ಬೆಂಗಳೂರು, ಮೈಸೂರು, ಮುಂಬೈ, ಚೆನ್ನೈ ಸೇರಿದಂತೆ ದೇಶದ 18 ನಗರಗಳಲ್ಲಿ ಒಟ್ಟೂ 75 ಕೇಂದ್ರಗಳನ್ನು ಹೊಂದಿದೆ. ಈ ವರ್ಷದ ಕೊನೆಯಲ್ಲಿ 100 ಕೇಂದ್ರ ಹಾಗೂ ಮುಂದಿನ ಮೂರು ವರ್ಷಗಳಲ್ಲಿ ಒಟ್ಟೂ 250 ಕೇಂದ್ರವನ್ನು ಆರಂಭಿಸುವ ಉದ್ದೇಶ ಇವರಿಗೆ ಇದೆ.

ಇದನ್ನೂ ಓದಿ: ದೀಪಿಕಾ ಪಡುಕೋಣೆ ಬಗ್ಗೆ ಹೆಚ್ಚಾಯ್ತು ಅಪಪ್ರಚಾರ; ‘ಕಲ್ಕಿ 2’ ಸಿನಿಮಾದಿಂದಲೂ ಔಟ್?

ದೀಪಿಕಾ ಪಡುಕೋಣೆ ಅವರು ಶೀಘ್ರವೇ ನಟ ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಅಟ್ಲಿ ಒಟ್ಟಾಗಿ ಮಾಡುತ್ತಿರುವ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಸಿನಿಮಾದ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದೆ. ಸದ್ಯ ದೀಪಿಕಾ ಅವರು 8 ಗಂಟೆ ಮಾತ್ರ ಕೆಲಸ ಮಾಡೋದಾಗಿ ಹೇಳಿದ್ದಾರೆ. ಇದರ ಮಧ್ಯೆಯೂ ಅವರಿಗೆ ಕೆಲವರು ಸಿನಿಮಾ ಆಫರ್ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು