AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ದಿನಕ್ಕೂ ಮುನ್ನ ‘ಪ್ರಾಜೆಕ್ಟ್​ ಕೆ’ ಚಿತ್ರದಲ್ಲಿನ ದೀಪಿಕಾ ಪಡುಕೋಣೆ ಲುಕ್ ರಿವೀಲ್

ಇಷ್ಟು ದಿನ ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದ ದೀಪಿಕಾ, ‘ಪ್ರಾಜೆಕ್ಟ್ ಕೆ’ ಚಿತ್ರದ ಮೂಲಕ ದಕ್ಷಿಣ ಭಾರತಕ್ಕೆ ಮರಳುತ್ತಿದ್ದಾರೆ. ಅವರ ಲುಕ್​ ಹೇಗಿರಲಿದೆ ಎಂಬುದನ್ನು ರಿವೀಲ್ ಮಾಡಲಾಗಿದೆ.

ವಿಶೇಷ ದಿನಕ್ಕೂ ಮುನ್ನ ‘ಪ್ರಾಜೆಕ್ಟ್​ ಕೆ’ ಚಿತ್ರದಲ್ಲಿನ ದೀಪಿಕಾ ಪಡುಕೋಣೆ ಲುಕ್ ರಿವೀಲ್
ದೀಪಿಕಾ
ರಾಜೇಶ್ ದುಗ್ಗುಮನೆ
|

Updated on:Jul 18, 2023 | 8:43 AM

Share

‘ಬಾಹುಬಲಿ 2’ ಚಿತ್ರದ ಬಳಿಕ ಪ್ರಭಾಸ್ (Prabhas) ಒಪ್ಪಿಕೊಂಡ ಎಲ್ಲಾ ಚಿತ್ರಗಳು ದೊಡ್ಡ ಬಜೆಟ್​ನ ಸಿನಿಮಾಗಳೇ. ಪ್ರಭಾಸ್ ಅವರ ಸಿನಿಮಾ ಮೇಲೆ ಹಣ ಹಾಕಿದರೆ ದೊಡ್ಡ ಲಾಭ ಆಗುತ್ತದೆ ಅನ್ನೋದು ನಿರ್ಮಾಪಕರ ನಂಬಿಕೆ. ಆದರೆ, ಈ ನಂಬಿಕೆ ಸುಳ್ಳಾಗಿದೆ. ‘ಬಾಹುಬಲಿ 2’ ಬಳಿಕ ತೆರೆಗೆ ಬಂದ ಪ್ರಭಾಸ್ ನಟನೆಯ ‘ಸಾಹೋ’, ‘ರಾಧೆ ಶ್ಯಾಮ್’ ಹಾಗೂ ‘ಆದಿಪುರುಷ್’ ಸಿನಿಮಾಗಳು ಸೋತವು. ಈಗ ಅವರ ಗಮನ ‘ಸಲಾರ್’ (Salaar Movie) ಹಾಗೂ ‘ಪ್ರಾಜೆಕ್ಟ್​ ಕೆ’ ಚಿತ್ರದ ಮೇಲಿದೆ. ಈಗ ‘ಪ್ರಾಜೆಕ್ಟ್ ಕೆ’ ಚಿತ್ರದ ಮೊದಲ ಗ್ಲಿಂಪ್ಸ್ ರಿಲೀಸ್ ಆಗುವುದರಲ್ಲಿದೆ. ಅದಕ್ಕೂ ಮೊದಲು ದೀಪಿಕಾ ಪಡುಕೋಣೆ ಅವರ ಲುಕ್ ರಿವೀಲ್ ಮಾಡಲಾಗಿದೆ.

ದೀಪಿಕಾ ಪಡುಕೋಣೆ ಅವರು ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಇಷ್ಟು ದಿನ ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದ ಅವರು, ‘ಪ್ರಾಜೆಕ್ಟ್ ಕೆ’ ಚಿತ್ರದ ಮೂಲಕ ದಕ್ಷಿಣ ಭಾರತಕ್ಕೆ ಮರಳುತ್ತಿದ್ದಾರೆ. ಅವರ ಲುಕ್​ ಹೇಗಿರಲಿದೆ ಎಂಬುದನ್ನು ರಿವೀಲ್ ಮಾಡಲಾಗಿದೆ. ತಂಡ ಹೊಸ ಪೋಸ್ಟರ್​​ನ ರಿವೀಲ್ ಮಾಡಿದೆ.

ಪ್ರಭಾಸ್ ಹಾಗೂ ದೀಪಿಕಾ ಪಡುಕೋಣೆ ಇದೇ ಮೊದಲ ಬಾರಿಗೆ ಒಟ್ಟಾಗಿ ನಟಿಸಿದ್ದಾರೆ. ‘ಪ್ರಾಜೆಕ್ಟ್ ಕೆ’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಇದು ಕೂಡ ಕಾರಣ. ‘ಪ್ರಾಜೆಕ್ಟ್ ಕೆ’ ಎಂದರೇನು ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಇದಕ್ಕೆ ಜುಲೈ 21ರಂದು ಉತ್ತರ ಸಿಗಲಿದೆ.

‘ಪ್ರಾಜೆಕ್ಟ್​ ಕೆ’ ಸಿನಿಮಾ ಕೂಡ ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಈ ಚಿತ್ರಕ್ಕೆ ನಾಗ್ ಅಶ್ವಿನ್ ನಿರ್ದೇಶನ ಮಾಡಿದ್ದಾರೆ. ದೀಪಿಕಾ, ಪ್ರಭಾಸ್ ಜೊತೆ ಅಮಿತಾಭ್ ಬಚ್ಚನ್ ಸೇರಿ ಅನೇಕ ಪ್ರಮುಖ ಕಲಾವಿದರು ನಟಿಸಿದ್ದಾರೆ. ವೈಜಯಂತಿ ಮೂವೀಸ್​ ಈ ಚಿತ್ರಕ್ಕೆ ಬಂಡವಾಳ ಹೂಡಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ದೀಪಿಕಾ ಪಡುಕೋಣೆಗೆ ಇಷ್ಟವಾಗುವ ಹೋಟೆಲ್​ಗಳಾವುವು? ತಂದೆ ಪ್ರಕಾಶ್ ಪಡುಕೋಣೆ ಹೇಳಿದ ಪಟ್ಟಿ 

ದೀಪಿಕಾ ಪಡುಕೋಣೆ ಅವರು ಈ ವರ್ಷದ ಆರಂಭದಲ್ಲೇ ದೊಡ್ಡ ಗೆಲುವು ಕಂಡಿದ್ದಾರೆ. ‘ಪಠಾಣ್’ ಚಿತ್ರದಿಂದ ಅವರು ಗೆದ್ದು ಬೀಗಿದ್ದಾರೆ. ಈಗ ಅವರು ‘ಪ್ರಾಜೆಕ್ಟ್ ಕೆ’ ಚಿತ್ರದ ಮೂಲಕ ಮತ್ತೊಂದು ಗೆಲುವು ಕಾಣುವ ನಿರೀಕ್ಷೆಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:32 am, Tue, 18 July 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ